ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವ |

April 28, 2025
10:21 PM

ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ ಹಣ್ಣು, ಆಹಾರ ಮತ್ತು ತರಕಾರಿ ಮೇಳ ಆಯೋಜಿಸಲಾಗಿದೆ. ಮೇಳದಲ್ಲಿ ವಿಜಯಪುರ, ಬಾಗಲಕೋಟೆ, ಗದಗ, ಮೈಸೂರು, ಹಾಸನ ಸೇರಿದಂತೆ ವಿವಿಧ ಜಿಲ್ಲೆಗಳ ರೈತರು, ಸ್ವಸಹಾಯ ಸಂಘಟನೆಗಳ ಸದಸ್ಯರು ಪಾಲ್ಗೊಂಡು, ಮೌಲ್ಯಾಧಾರಿತ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಹಮ್ಮಿಕೊಳ್ಳಲಾಗಿದೆ.

Advertisement
Advertisement

ಕರಿಮೆಣಸು, ವಿವಿಧ ಬಗೆಯ ಅಕ್ಕಿ ಮಾರಾಟ, ಪ್ರದರ್ಶನದ ಜತೆಗೆ ಏಲಕ್ಕಿ, ದಾಲ್ಚಿನ್ನಿ, ಬಿದಿರು, ಕಾಫಿ, ಗೋಡಂಬಿ, ಅಡಿಕೆ ಸೇರಿದಂತೆ ವಿವಿಧ ತಳಿಗಳ ಸಸಿಗಳನ್ನು ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಇಡಲಾಗಿದೆ. ಮೇಳದಲ್ಲಿ ಸಾವಿರಾರು ಮಂದಿ ಸಾರ್ವಜನಿಕರು, ರೈತರು ಭಾಗವಹಿಸಿ, ಕೃಷಿ ಸಂಬಂಧ ಅಗತ್ಯ ಮಾಹಿತಿ ಪಡೆದರು. ಮೇಳದಲ್ಲಿ ಪ್ರಮುಖವಾಗಿ ಜೇನು ಸಾಕಾಣಿಕೆ, ಕುರಿ ಮತ್ತು ಕೋಳಿ ಸಾಕಾಣಿಕೆ, ಎರೆಹುಳು, ಗೊಬ್ಬರ ತಯಾರಿಕೆ ಸೇರಿದಂತೆ ಸ್ವಾವಲಂಬx ಕೃಷಿ ಬಗ್ಗೆ ಮಾಹಿತಿ ನೀಡಲಾಗುತ್ತಿದೆ. ಸುಮಾರು 150ಕ್ಕೂ ಹೆಚ್ಚು ಮಳಿಗೆಗಳನ್ನು ಇಡಲಾಗಿದೆ ಎಂದು ಕೃಷಿ ವಿಶ್ವವಿದ್ಯಾಲಯದ ಹಿರಿಯ ವಿಜ್ಞಾನಿ ಡಾ.ಸುನಿಲ್ ಹೇಳಿದರು.

ಈ ಸಂದರ್ಭ ಮಾತನಾಡಿದ ಗ್ರಾಹಕ ಶೇಷಗಿರಿ, ವಿಶ್ವವಿದ್ಯಾಲಯಗಳು ದೇಸೀಯ ತಳಿಗಳ ಮೇಲೆ ಸಂಶೋಧನೆ ನಡೆಸುವ ಮೂಲಕ ಹೊಸ ತಳಿಗಳ ಮೇಲೆ ಬೆಳಕು ಚೆಲ್ಲಬೇಕು ಎಂದರು.

ಹೊಸ ತಳಿಯ ಹಣ್ಣುಗಳನ್ನು ಬೆಳೆಯಲು ಹೆಚ್ಚಿನ ಸಂಶೋಧನೆ ನಡೆದಿದ್ದು, ಮೇಳದಲ್ಲಿ ಮಾವು ಮತ್ತು ಹಲಸಿನ ತಳಿಯ ಬಗ್ಗೆ ಹೆಚ್ಚಿನ ಮಾಹಿತಿ ಲಭಿಸಿದೆ ಎಂದು ಸ್ಥಳೀಯರಾದ ಸ್ಥಳೀಯರಾದ ಚಂದ್ರಶೇಖರ್ ಹೇಳಿದರು.

ಮತ್ತೊಬ್ಬ ಮಾರಾಟಗಾರರಾದ ಸೌದಾಮಿನಿ, ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಯೋಜನೆಯಿಂದ ಆರ್ಥಿಕ ಸಹಕಾರ ಪಡೆದು ಯಂತ್ರಗಳ ಮೂಲಕ ಗೃಹ ಉತ್ಪನ್ನಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದೇನೆ. ಇಂತಹ ಮೇಳಗಳು ವ್ಯಾಪಾರ ವಹಿವಾಟಿಗೆ ಸಹಕರಿಸುತ್ತವೆ ಎಂದು ಸಂತಸ ವ್ಯಕ್ತಪಡಿಸಿದರು.

Advertisement

 

 

 

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 21-05-2025 | ಸಾಮಾನ್ಯ ಮಳೆ ಮುಂದುವರಿಕೆ | ಮೇ.23 ರಿಂದ ಮತ್ತೆ ಉತ್ತಮ ಮಳೆ | ವಾಯುಭಾರ ಕುಸಿತದ ಪರಿಣಾಮ ಏನಾಗಬಹುದು ?
May 21, 2025
12:46 PM
by: ಸಾಯಿಶೇಖರ್ ಕರಿಕಳ
2028ರ ವೇಳೆಗೆ ಭಾರತದ ಉಪಗ್ರಹ ಸಂವಹನದ ಮಾರುಕಟ್ಟೆ 20 ಶತಕೋಟಿ  ಡಾಲರ್
May 21, 2025
11:18 AM
by: The Rural Mirror ಸುದ್ದಿಜಾಲ
ಕಬ್ಬು ಪೂರೈಸಿದ ರೈತರಿಗೆ 15 ದಿನದೊಳಗೆ ಸಕ್ಕರೆ ಕಾರ್ಖಾನೆಗಳು ಹಣ ಪಾವತಿಸುವಂತೆ ಮಂಡ್ಯ  ಜಿಲ್ಲಾಧಿಕಾರಿ ಸೂಚನೆ
May 21, 2025
11:11 AM
by: The Rural Mirror ಸುದ್ದಿಜಾಲ
ಗದಗದಲ್ಲಿ  ಸೂರ್ಯಕಾಂತಿ ಹುಟ್ಟುವಳಿ ಖರೀದಿಸಲು ಪ್ರತಿ ಕ್ವಿಂಟಲ್ ಗೆ 7280 ರೂಪಾಯಿ ಬೆಂಬಲ ಬೆಲೆ ನಿಗದಿ
May 21, 2025
11:07 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror