Advertisement
MIRROR FOCUS

ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವ |

Share

ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ ಹಣ್ಣು, ಆಹಾರ ಮತ್ತು ತರಕಾರಿ ಮೇಳ ಆಯೋಜಿಸಲಾಗಿದೆ. ಮೇಳದಲ್ಲಿ ವಿಜಯಪುರ, ಬಾಗಲಕೋಟೆ, ಗದಗ, ಮೈಸೂರು, ಹಾಸನ ಸೇರಿದಂತೆ ವಿವಿಧ ಜಿಲ್ಲೆಗಳ ರೈತರು, ಸ್ವಸಹಾಯ ಸಂಘಟನೆಗಳ ಸದಸ್ಯರು ಪಾಲ್ಗೊಂಡು, ಮೌಲ್ಯಾಧಾರಿತ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಹಮ್ಮಿಕೊಳ್ಳಲಾಗಿದೆ.

ಕರಿಮೆಣಸು, ವಿವಿಧ ಬಗೆಯ ಅಕ್ಕಿ ಮಾರಾಟ, ಪ್ರದರ್ಶನದ ಜತೆಗೆ ಏಲಕ್ಕಿ, ದಾಲ್ಚಿನ್ನಿ, ಬಿದಿರು, ಕಾಫಿ, ಗೋಡಂಬಿ, ಅಡಿಕೆ ಸೇರಿದಂತೆ ವಿವಿಧ ತಳಿಗಳ ಸಸಿಗಳನ್ನು ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಇಡಲಾಗಿದೆ. ಮೇಳದಲ್ಲಿ ಸಾವಿರಾರು ಮಂದಿ ಸಾರ್ವಜನಿಕರು, ರೈತರು ಭಾಗವಹಿಸಿ, ಕೃಷಿ ಸಂಬಂಧ ಅಗತ್ಯ ಮಾಹಿತಿ ಪಡೆದರು. ಮೇಳದಲ್ಲಿ ಪ್ರಮುಖವಾಗಿ ಜೇನು ಸಾಕಾಣಿಕೆ, ಕುರಿ ಮತ್ತು ಕೋಳಿ ಸಾಕಾಣಿಕೆ, ಎರೆಹುಳು, ಗೊಬ್ಬರ ತಯಾರಿಕೆ ಸೇರಿದಂತೆ ಸ್ವಾವಲಂಬx ಕೃಷಿ ಬಗ್ಗೆ ಮಾಹಿತಿ ನೀಡಲಾಗುತ್ತಿದೆ. ಸುಮಾರು 150ಕ್ಕೂ ಹೆಚ್ಚು ಮಳಿಗೆಗಳನ್ನು ಇಡಲಾಗಿದೆ ಎಂದು ಕೃಷಿ ವಿಶ್ವವಿದ್ಯಾಲಯದ ಹಿರಿಯ ವಿಜ್ಞಾನಿ ಡಾ.ಸುನಿಲ್ ಹೇಳಿದರು.

ಈ ಸಂದರ್ಭ ಮಾತನಾಡಿದ ಗ್ರಾಹಕ ಶೇಷಗಿರಿ, ವಿಶ್ವವಿದ್ಯಾಲಯಗಳು ದೇಸೀಯ ತಳಿಗಳ ಮೇಲೆ ಸಂಶೋಧನೆ ನಡೆಸುವ ಮೂಲಕ ಹೊಸ ತಳಿಗಳ ಮೇಲೆ ಬೆಳಕು ಚೆಲ್ಲಬೇಕು ಎಂದರು.

ಹೊಸ ತಳಿಯ ಹಣ್ಣುಗಳನ್ನು ಬೆಳೆಯಲು ಹೆಚ್ಚಿನ ಸಂಶೋಧನೆ ನಡೆದಿದ್ದು, ಮೇಳದಲ್ಲಿ ಮಾವು ಮತ್ತು ಹಲಸಿನ ತಳಿಯ ಬಗ್ಗೆ ಹೆಚ್ಚಿನ ಮಾಹಿತಿ ಲಭಿಸಿದೆ ಎಂದು ಸ್ಥಳೀಯರಾದ ಸ್ಥಳೀಯರಾದ ಚಂದ್ರಶೇಖರ್ ಹೇಳಿದರು.

ಮತ್ತೊಬ್ಬ ಮಾರಾಟಗಾರರಾದ ಸೌದಾಮಿನಿ, ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಯೋಜನೆಯಿಂದ ಆರ್ಥಿಕ ಸಹಕಾರ ಪಡೆದು ಯಂತ್ರಗಳ ಮೂಲಕ ಗೃಹ ಉತ್ಪನ್ನಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದೇನೆ. ಇಂತಹ ಮೇಳಗಳು ವ್ಯಾಪಾರ ವಹಿವಾಟಿಗೆ ಸಹಕರಿಸುತ್ತವೆ ಎಂದು ಸಂತಸ ವ್ಯಕ್ತಪಡಿಸಿದರು.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು

ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…

15 hours ago

ಎಲ್ ನಿನೋ ಅಧಿಕೃತವಾಗಿ ಆರಂಭ – ಕರಾವಳಿ ಕರ್ನಾಟಕದ ಮಳೆ ಮೇಲೆ ಪರಿಣಾಮ ಬೀಳುತ್ತಾ? ಹವಾಮಾನ ಇಲಾಖೆ ನಿಗಾ

ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…

16 hours ago

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

1 day ago

ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ

ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…

1 day ago

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

2 days ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

2 days ago