Advertisement
MIRROR FOCUS

ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವ |

Share

ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ ಹಣ್ಣು, ಆಹಾರ ಮತ್ತು ತರಕಾರಿ ಮೇಳ ಆಯೋಜಿಸಲಾಗಿದೆ. ಮೇಳದಲ್ಲಿ ವಿಜಯಪುರ, ಬಾಗಲಕೋಟೆ, ಗದಗ, ಮೈಸೂರು, ಹಾಸನ ಸೇರಿದಂತೆ ವಿವಿಧ ಜಿಲ್ಲೆಗಳ ರೈತರು, ಸ್ವಸಹಾಯ ಸಂಘಟನೆಗಳ ಸದಸ್ಯರು ಪಾಲ್ಗೊಂಡು, ಮೌಲ್ಯಾಧಾರಿತ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಹಮ್ಮಿಕೊಳ್ಳಲಾಗಿದೆ.

ಕರಿಮೆಣಸು, ವಿವಿಧ ಬಗೆಯ ಅಕ್ಕಿ ಮಾರಾಟ, ಪ್ರದರ್ಶನದ ಜತೆಗೆ ಏಲಕ್ಕಿ, ದಾಲ್ಚಿನ್ನಿ, ಬಿದಿರು, ಕಾಫಿ, ಗೋಡಂಬಿ, ಅಡಿಕೆ ಸೇರಿದಂತೆ ವಿವಿಧ ತಳಿಗಳ ಸಸಿಗಳನ್ನು ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಇಡಲಾಗಿದೆ. ಮೇಳದಲ್ಲಿ ಸಾವಿರಾರು ಮಂದಿ ಸಾರ್ವಜನಿಕರು, ರೈತರು ಭಾಗವಹಿಸಿ, ಕೃಷಿ ಸಂಬಂಧ ಅಗತ್ಯ ಮಾಹಿತಿ ಪಡೆದರು. ಮೇಳದಲ್ಲಿ ಪ್ರಮುಖವಾಗಿ ಜೇನು ಸಾಕಾಣಿಕೆ, ಕುರಿ ಮತ್ತು ಕೋಳಿ ಸಾಕಾಣಿಕೆ, ಎರೆಹುಳು, ಗೊಬ್ಬರ ತಯಾರಿಕೆ ಸೇರಿದಂತೆ ಸ್ವಾವಲಂಬx ಕೃಷಿ ಬಗ್ಗೆ ಮಾಹಿತಿ ನೀಡಲಾಗುತ್ತಿದೆ. ಸುಮಾರು 150ಕ್ಕೂ ಹೆಚ್ಚು ಮಳಿಗೆಗಳನ್ನು ಇಡಲಾಗಿದೆ ಎಂದು ಕೃಷಿ ವಿಶ್ವವಿದ್ಯಾಲಯದ ಹಿರಿಯ ವಿಜ್ಞಾನಿ ಡಾ.ಸುನಿಲ್ ಹೇಳಿದರು.

ಈ ಸಂದರ್ಭ ಮಾತನಾಡಿದ ಗ್ರಾಹಕ ಶೇಷಗಿರಿ, ವಿಶ್ವವಿದ್ಯಾಲಯಗಳು ದೇಸೀಯ ತಳಿಗಳ ಮೇಲೆ ಸಂಶೋಧನೆ ನಡೆಸುವ ಮೂಲಕ ಹೊಸ ತಳಿಗಳ ಮೇಲೆ ಬೆಳಕು ಚೆಲ್ಲಬೇಕು ಎಂದರು.

ಹೊಸ ತಳಿಯ ಹಣ್ಣುಗಳನ್ನು ಬೆಳೆಯಲು ಹೆಚ್ಚಿನ ಸಂಶೋಧನೆ ನಡೆದಿದ್ದು, ಮೇಳದಲ್ಲಿ ಮಾವು ಮತ್ತು ಹಲಸಿನ ತಳಿಯ ಬಗ್ಗೆ ಹೆಚ್ಚಿನ ಮಾಹಿತಿ ಲಭಿಸಿದೆ ಎಂದು ಸ್ಥಳೀಯರಾದ ಸ್ಥಳೀಯರಾದ ಚಂದ್ರಶೇಖರ್ ಹೇಳಿದರು.

ಮತ್ತೊಬ್ಬ ಮಾರಾಟಗಾರರಾದ ಸೌದಾಮಿನಿ, ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಯೋಜನೆಯಿಂದ ಆರ್ಥಿಕ ಸಹಕಾರ ಪಡೆದು ಯಂತ್ರಗಳ ಮೂಲಕ ಗೃಹ ಉತ್ಪನ್ನಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದೇನೆ. ಇಂತಹ ಮೇಳಗಳು ವ್ಯಾಪಾರ ವಹಿವಾಟಿಗೆ ಸಹಕರಿಸುತ್ತವೆ ಎಂದು ಸಂತಸ ವ್ಯಕ್ತಪಡಿಸಿದರು.

 

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

4 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

5 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

22 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

24 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

1 day ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

1 day ago