Advertisement
MIRROR FOCUS

ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವ |

Share

ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ ಹಣ್ಣು, ಆಹಾರ ಮತ್ತು ತರಕಾರಿ ಮೇಳ ಆಯೋಜಿಸಲಾಗಿದೆ. ಮೇಳದಲ್ಲಿ ವಿಜಯಪುರ, ಬಾಗಲಕೋಟೆ, ಗದಗ, ಮೈಸೂರು, ಹಾಸನ ಸೇರಿದಂತೆ ವಿವಿಧ ಜಿಲ್ಲೆಗಳ ರೈತರು, ಸ್ವಸಹಾಯ ಸಂಘಟನೆಗಳ ಸದಸ್ಯರು ಪಾಲ್ಗೊಂಡು, ಮೌಲ್ಯಾಧಾರಿತ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಹಮ್ಮಿಕೊಳ್ಳಲಾಗಿದೆ.

ಕರಿಮೆಣಸು, ವಿವಿಧ ಬಗೆಯ ಅಕ್ಕಿ ಮಾರಾಟ, ಪ್ರದರ್ಶನದ ಜತೆಗೆ ಏಲಕ್ಕಿ, ದಾಲ್ಚಿನ್ನಿ, ಬಿದಿರು, ಕಾಫಿ, ಗೋಡಂಬಿ, ಅಡಿಕೆ ಸೇರಿದಂತೆ ವಿವಿಧ ತಳಿಗಳ ಸಸಿಗಳನ್ನು ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಇಡಲಾಗಿದೆ. ಮೇಳದಲ್ಲಿ ಸಾವಿರಾರು ಮಂದಿ ಸಾರ್ವಜನಿಕರು, ರೈತರು ಭಾಗವಹಿಸಿ, ಕೃಷಿ ಸಂಬಂಧ ಅಗತ್ಯ ಮಾಹಿತಿ ಪಡೆದರು. ಮೇಳದಲ್ಲಿ ಪ್ರಮುಖವಾಗಿ ಜೇನು ಸಾಕಾಣಿಕೆ, ಕುರಿ ಮತ್ತು ಕೋಳಿ ಸಾಕಾಣಿಕೆ, ಎರೆಹುಳು, ಗೊಬ್ಬರ ತಯಾರಿಕೆ ಸೇರಿದಂತೆ ಸ್ವಾವಲಂಬx ಕೃಷಿ ಬಗ್ಗೆ ಮಾಹಿತಿ ನೀಡಲಾಗುತ್ತಿದೆ. ಸುಮಾರು 150ಕ್ಕೂ ಹೆಚ್ಚು ಮಳಿಗೆಗಳನ್ನು ಇಡಲಾಗಿದೆ ಎಂದು ಕೃಷಿ ವಿಶ್ವವಿದ್ಯಾಲಯದ ಹಿರಿಯ ವಿಜ್ಞಾನಿ ಡಾ.ಸುನಿಲ್ ಹೇಳಿದರು.

ಈ ಸಂದರ್ಭ ಮಾತನಾಡಿದ ಗ್ರಾಹಕ ಶೇಷಗಿರಿ, ವಿಶ್ವವಿದ್ಯಾಲಯಗಳು ದೇಸೀಯ ತಳಿಗಳ ಮೇಲೆ ಸಂಶೋಧನೆ ನಡೆಸುವ ಮೂಲಕ ಹೊಸ ತಳಿಗಳ ಮೇಲೆ ಬೆಳಕು ಚೆಲ್ಲಬೇಕು ಎಂದರು.

ಹೊಸ ತಳಿಯ ಹಣ್ಣುಗಳನ್ನು ಬೆಳೆಯಲು ಹೆಚ್ಚಿನ ಸಂಶೋಧನೆ ನಡೆದಿದ್ದು, ಮೇಳದಲ್ಲಿ ಮಾವು ಮತ್ತು ಹಲಸಿನ ತಳಿಯ ಬಗ್ಗೆ ಹೆಚ್ಚಿನ ಮಾಹಿತಿ ಲಭಿಸಿದೆ ಎಂದು ಸ್ಥಳೀಯರಾದ ಸ್ಥಳೀಯರಾದ ಚಂದ್ರಶೇಖರ್ ಹೇಳಿದರು.

ಮತ್ತೊಬ್ಬ ಮಾರಾಟಗಾರರಾದ ಸೌದಾಮಿನಿ, ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಯೋಜನೆಯಿಂದ ಆರ್ಥಿಕ ಸಹಕಾರ ಪಡೆದು ಯಂತ್ರಗಳ ಮೂಲಕ ಗೃಹ ಉತ್ಪನ್ನಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದೇನೆ. ಇಂತಹ ಮೇಳಗಳು ವ್ಯಾಪಾರ ವಹಿವಾಟಿಗೆ ಸಹಕರಿಸುತ್ತವೆ ಎಂದು ಸಂತಸ ವ್ಯಕ್ತಪಡಿಸಿದರು.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

8 hours ago

ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ

ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…

8 hours ago

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

2 days ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago