Advertisement
MIRROR FOCUS

ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವ |

Share

ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ ಹಣ್ಣು, ಆಹಾರ ಮತ್ತು ತರಕಾರಿ ಮೇಳ ಆಯೋಜಿಸಲಾಗಿದೆ. ಮೇಳದಲ್ಲಿ ವಿಜಯಪುರ, ಬಾಗಲಕೋಟೆ, ಗದಗ, ಮೈಸೂರು, ಹಾಸನ ಸೇರಿದಂತೆ ವಿವಿಧ ಜಿಲ್ಲೆಗಳ ರೈತರು, ಸ್ವಸಹಾಯ ಸಂಘಟನೆಗಳ ಸದಸ್ಯರು ಪಾಲ್ಗೊಂಡು, ಮೌಲ್ಯಾಧಾರಿತ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಹಮ್ಮಿಕೊಳ್ಳಲಾಗಿದೆ.

ಕರಿಮೆಣಸು, ವಿವಿಧ ಬಗೆಯ ಅಕ್ಕಿ ಮಾರಾಟ, ಪ್ರದರ್ಶನದ ಜತೆಗೆ ಏಲಕ್ಕಿ, ದಾಲ್ಚಿನ್ನಿ, ಬಿದಿರು, ಕಾಫಿ, ಗೋಡಂಬಿ, ಅಡಿಕೆ ಸೇರಿದಂತೆ ವಿವಿಧ ತಳಿಗಳ ಸಸಿಗಳನ್ನು ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಇಡಲಾಗಿದೆ. ಮೇಳದಲ್ಲಿ ಸಾವಿರಾರು ಮಂದಿ ಸಾರ್ವಜನಿಕರು, ರೈತರು ಭಾಗವಹಿಸಿ, ಕೃಷಿ ಸಂಬಂಧ ಅಗತ್ಯ ಮಾಹಿತಿ ಪಡೆದರು. ಮೇಳದಲ್ಲಿ ಪ್ರಮುಖವಾಗಿ ಜೇನು ಸಾಕಾಣಿಕೆ, ಕುರಿ ಮತ್ತು ಕೋಳಿ ಸಾಕಾಣಿಕೆ, ಎರೆಹುಳು, ಗೊಬ್ಬರ ತಯಾರಿಕೆ ಸೇರಿದಂತೆ ಸ್ವಾವಲಂಬx ಕೃಷಿ ಬಗ್ಗೆ ಮಾಹಿತಿ ನೀಡಲಾಗುತ್ತಿದೆ. ಸುಮಾರು 150ಕ್ಕೂ ಹೆಚ್ಚು ಮಳಿಗೆಗಳನ್ನು ಇಡಲಾಗಿದೆ ಎಂದು ಕೃಷಿ ವಿಶ್ವವಿದ್ಯಾಲಯದ ಹಿರಿಯ ವಿಜ್ಞಾನಿ ಡಾ.ಸುನಿಲ್ ಹೇಳಿದರು.

ಈ ಸಂದರ್ಭ ಮಾತನಾಡಿದ ಗ್ರಾಹಕ ಶೇಷಗಿರಿ, ವಿಶ್ವವಿದ್ಯಾಲಯಗಳು ದೇಸೀಯ ತಳಿಗಳ ಮೇಲೆ ಸಂಶೋಧನೆ ನಡೆಸುವ ಮೂಲಕ ಹೊಸ ತಳಿಗಳ ಮೇಲೆ ಬೆಳಕು ಚೆಲ್ಲಬೇಕು ಎಂದರು.

ಹೊಸ ತಳಿಯ ಹಣ್ಣುಗಳನ್ನು ಬೆಳೆಯಲು ಹೆಚ್ಚಿನ ಸಂಶೋಧನೆ ನಡೆದಿದ್ದು, ಮೇಳದಲ್ಲಿ ಮಾವು ಮತ್ತು ಹಲಸಿನ ತಳಿಯ ಬಗ್ಗೆ ಹೆಚ್ಚಿನ ಮಾಹಿತಿ ಲಭಿಸಿದೆ ಎಂದು ಸ್ಥಳೀಯರಾದ ಸ್ಥಳೀಯರಾದ ಚಂದ್ರಶೇಖರ್ ಹೇಳಿದರು.

ಮತ್ತೊಬ್ಬ ಮಾರಾಟಗಾರರಾದ ಸೌದಾಮಿನಿ, ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಯೋಜನೆಯಿಂದ ಆರ್ಥಿಕ ಸಹಕಾರ ಪಡೆದು ಯಂತ್ರಗಳ ಮೂಲಕ ಗೃಹ ಉತ್ಪನ್ನಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದೇನೆ. ಇಂತಹ ಮೇಳಗಳು ವ್ಯಾಪಾರ ವಹಿವಾಟಿಗೆ ಸಹಕರಿಸುತ್ತವೆ ಎಂದು ಸಂತಸ ವ್ಯಕ್ತಪಡಿಸಿದರು.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

17 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

18 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

2 days ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

3 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

3 days ago