ಸಕ್ಕರೆ ಕಾಯಿಲೆಯನ್ನು ನಿಯಂತ್ರಣ ಮಾಡಿಕೊಳ್ಳಲು ಸರಳ ಉಪಾಯಗಳು

November 24, 2025
11:39 AM

ಸಕ್ಕರೆ ಕಾಯಿ ಅಥವಾ ಶುಗರ್ ಎಂದೆಲ್ಲಾ ಕರೆಯುವ ಆರೋಗ್ಯದ ಸಮಸ್ಯೆ  ಕಂಡುಬರುವುದೇ ನಮ್ಮ ಆಹಾರದಲ್ಲಿ. ನವಜಾತ ಶಿಶುಗಳಲ್ಲಿಯೂ ಈ ಕಾಯಿಲೆಗಳು ಕಾಣಿಸಿಕೊಳ್ಳುತ್ತದೆ. ಏಕೆಂದರೆ ತುಂಬು ಗರ್ಣಿಣಿಯರಾದ ಬಳಿಕ ಬಯಕೆ ಎಂಬ ನೆಪ ಇಟ್ಟುಕೊಂಡು ಸಿಕ್ಕಿದೆಲ್ಲ ತಿನ್ನುವ ಹವ್ಯಾಸಗಳು ಮುಂದೊಂದಿನ ಪ್ರಾಣಕ್ಕೆ ಕುತ್ತು ತರುತ್ತದೆ.  ನಾಲಗೆಯ ರುಚಿಗೆಂದು ಹೆಚ್ಚು ಸಿಹಿಯನ್ನು ತಿಂದರೆ ಇದೇ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಈ ಸಕ್ಕರೆ ಕಾಯಿಲೆಗಳನ್ನು ಸೀಮಿತದಲ್ಲಿಟ್ಟುಕೊಳ್ಳಲು ನಮ್ಮ ಮನೆಯ ಮದ್ದುವೆ ಸಾಕು ಅವುಗಳೆಂದರೆ:

ನೆನೆಸಿದ ಮೆಂತ್ಯೆ ಕಾಳು: ರಾತ್ರಿ ಒಂದು ಲೋಟ ನೀರಿಗೆ ಒಂದು ಚಮಚ ಮೆಂತ್ಯೆ ಕಾಳುವನ್ನು ನೀರಿನಲ್ಲಿ ನೆನೆಸಿ ಮರುದಿನ ಖಾಲಿ ಹೊಟ್ಟೆಗೆ ಸೇವಿಸುವುದರಿಂದ ಅದರಲ್ಲಿರುವ ಫೈಬರ್ ಗ್ಲೂಕೋಸ್ ಹೀರಿಕೊಳ್ಳುವಿಕೆಯನ್ನು ನಿಧಾನಗೊಳಿಸುತ್ತದೆ. ಇದು ಮುಖದ ಸೌಂದರ್ಯ ವನ್ನು ಹೆಚ್ಚಿಸಲೂ ಸಹಾಕಾರಿ.

ಬಾರ್ಲಿ: ಬೇಸಿಗೆ ಸಮಯದಲ್ಲಿ ಬಾರ್ಲಿ ಗಂಜಿ ಅಥವಾ ಬಾರ್ಲಿ ನೀರನ್ನು ಸೇವಿಸುವುದರಿಂದ ಬೀಟಾ-ಗ್ಲುಕನ್ ಇನ್ಸುಲಿನ್ ಪ್ರತಿಕ್ರಿಯೆಯನ್ನು ಸುಧಾರಿಸುತ್ತದೆ.

ಕರಿಬೇವಿನ ಸೊಪ್ಪು: ದೈನಂದಿನ ಆಹಾರದಲ್ಲಿ ಕರಿಬೇವು ಸೇರಿಸಿಕೊಳ್ಳುವುದು ಉತ್ತಮ. ಏಕೆಂದರೆ ಇದರ ಎಲೆ ಆಂಟಿ-ಡಯಾಬೆಟಿಕ್ ಅನ್ನು ಹೊಂದಿಕೊಂಡಿದೆ. ಇದನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಿಂದ ಜಗಿಯುವುದರಿಂದ ಹೊಟ್ಟೆ ಹಾಗೂ ಕೂದಲಿನ ಸಮಸ್ಯೆಗಳು ನಿವಾರಿಸುತ್ತದೆ.

ನೆಲ್ಲಿಕಾಯಿ: ಬೆಟ್ಟದ ನೆಲ್ಲಿಕಾಯಿ ಇದರಲ್ಲಿ ಕ್ರೋಮಿಯಂ ಅಂಶವುಇನ್ಸುಲಿನ್ ಕಾರ್ಯಕ್ಕೆ ಬೆಂಬಲ ನೀಡುತ್ತದೆ ಮತ್ತು ಕಾರ್ಬೋಹೈಡ್ರೇಟ್‍ಗಳ ಚಯಾಪಚಯ ಕ್ರಿಯೆಗೆ ಸಹಾಯ ಮಾಡುತ್ತದೆ. ಮಾತ್ರವಲ್ಲ ಕೂದಲಿನ ಸಮಸ್ಯೆಗೂ ಸಹಾಕಾರಿ.

ಹಾಗಲಕಾಯಿ: ಇದರಲ್ಲಿ ಚರಾಂತಿನ್ ಮತ್ತು ಪೀನ್ಸುಲೀನ್ ಎಂಬ ಸಕ್ರಿಯ ಪದಾರ್ಥಗಳಿವೆ. ಇವು ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ಕಡಿಮೆ ಮಾಡಲು ನೇರವಾಗಿ ಸಹಾಯ ಮಾಡುತ್ತದೆ.

ಅಗಸೆ ಬೀಜ: ಒಮೆಗಾ-3ಮತ್ತು ಫೈಬರ್ ಅನ್ನು ಒದಗಿಸುತ್ತವೆ, ಇದು ಸಕ್ಕರೆ ನಿಯಂತ್ರಣಕ್ಕೆ ಉತ್ತಮ.

ಅರಶಿನ: ಕಕ್ರ್ಯುಮಿನ್ ಇನ್ಸುಲಿನ್ ಸೂಕ್ಷ್ಮತೆಯನ್ನು ಸುಧಾರಿಸುತ್ತದೆ. ಇದನ್ನು ಆಡುಗೆಯಲ್ಲಿ ಬಳಸುವುದು ಅಥವಾ ರಾತ್ರಿ ಮಲಗುವ ಮುಂಚೆ ಒಂದು ಲೋಟ ಹಾಳಿಗೆ ಒಂದು ಚಿಟಿಕೆಯಷ್ಟು ಅರಶಿನ ಹುಡಿ ಹಾಕಿ ಕುಡಿಯುವುದರಿಂದ ದೇಹಕ್ಕೆ ತುಂಬ ಉತ್ತಿಮ.

ಈ ರೀತಿಯಲ್ಲಿ ಆಡುಗೆ ಮನೆಯಲ್ಲಿರುವ ಪ್ರತಿಯೊಂದು ವಸ್ತುಗಳು ನಮ್ಮ ಆರೋಗ್ಯವನ್ನು ಉತ್ತಮವಾಗಿಟ್ಟಕೊಳ್ಳುವುತ್ತದೆ. ಆದರೆ ನಮ್ಮ ಮನಸ್ಸು ಹಾಗೂ ನಾಲಗೆ ಹೊರಗಿನ ತಿಂಡಿಯನ್ನು ಬೇಡುವುದು ತುಂಬ ಕೆಟ್ಟದು. ಆರೋಗ್ಯವೇ ಜೀವನ ಎಂಬ ಮಾತನ್ನು ಗಮನದಲ್ಲಿಟ್ಟು ಕೊಂಡು ಆಹಾರಪದ್ಧತಿಯನ್ನು ಬದಲಾಗಿಸಿಕೊಂಡು ಹೋಗುವುದು ತುಂಬಾನೆ ಉತ್ತಮ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ
September 12, 2026
7:30 AM
by: ದ ರೂರಲ್ ಮಿರರ್.ಕಾಂ
ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು
September 11, 2026
10:42 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ
September 10, 2026
10:59 AM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ
September 8, 2026
10:02 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror