MIRROR FOCUS

ರಾಜ್ಯಾದ್ಯಂತ ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ಏಕಕಾಲಕ್ಕೆ ‘ಜನತಾ ದರ್ಶನ’ | ಸ್ಥಳೀಯ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ರಾಜ್ಯಾದ್ಯಂತ ಇಂದು ಏಕಕಾಲಕ್ಕೆ ಜಿಲ್ಲಾ ಮಟ್ಟದ ‘ಜನತಾ ದರ್ಶನ’ ನಡೆಸಲು ಸರ್ಕಾರt ನಿರ್ಧರಿಸಿದೆ. ಸಾರ್ವಜನಿಕರ ದಿನನಿತ್ಯದ ಸಮಸ್ಯೆಗಳಿಗೆ ಸ್ಥಳೀಯ ಮಟ್ಟದಲ್ಲೇ ಪರಿಹಾರ ಒದಗಿಸುವುದು ಇದರ ಉದ್ದೇಶ. ರಾಜ್ಯದ ಇತಿಹಾದಲ್ಲೇ ಮೊದಲ ಬಾರಿಗೆ ಇಡಿ ರಾಜ್ಯಾದ್ಯಂತ ಏಕ ಕಾಲಕ್ಕೆ ಜನತಾ ದರ್ಶನಕ್ಕೆ  ನಾಡು ಇಂದು ಸಾಕ್ಷಿಯಾಗಲಿದೆ.

Advertisement

ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಮೇರೆಗೆ ನಡೆಯಲಿರುವ ಈ ಅರ್ಥಪೂರ್ಣ ಕಾರ್ಯಕ್ರಮದ ಹೊಣೆಗಾರಿಕೆ ಜಿಲ್ಲಾಧಿಕಾರಿಗಳು, ಜಿಲ್ಲಾಪಂಚಾಯತ್‌ ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಮೇಲಿದೆ. ಜಿಲ್ಲಾ ಉಸ್ತುವಾರಿ ಸಚಿವರುಗಳ ಸಮ್ಮುಖದಲ್ಲೇ ಸಾರ್ವಜನಿಕರ ಅಹವಾಲು ಸ್ವೀಕರಿಸುವ ಮತ್ತು ಸಾಧ್ಯವಾದಷ್ಟು ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳುವ ಧ್ಯೇಯವನ್ನು ಹಾಕಿಕೊಳ್ಳಲಾಗಿದೆ. ಆಡಳಿತಕ್ಕೆ ಚುರುಕು ಮುಟ್ಟಿಸಿ, ಸರ್ಕಾರಿ ಯಂತ್ರಾಂಗವನ್ನು ಕ್ರಿಯಾಶೀಲಗೊಳಿಸುವ ಪ್ರಯತ್ನವಾಗಿ ನಡೆಸಿದ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾಪಂಚಾಯತ್‌ ಮುಖ್ಯಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹತ್ತು ದಿನಗಳ ಹಿಂದೆ ಒಂದು ಸೂಚನೆ ನೀಡಿದ್ದರು.

ಇಡಿ ರಾಜ್ಯಾದ್ಯಂತ ಜಿಲ್ಲಾ ಮಟ್ಟದ ಜನತಾ ದರ್ಶನ ಸಭೆ ನಡೆದ ಬೆನ್ನಲ್ಲೇ ಪ್ರತಿ ಹದಿನೈದು ದಿನಗಳಿಗೆ ಒಮ್ಮೆ ಜಿಲ್ಲಾಧಿಕಾರಿಗಳು ಒಂದು ತಾಲ್ಲೂಕನ್ನು ಆರಿಸಿಕೊಂಡು ತಾಲ್ಲೂಕು ಮಟ್ಟದ ಜನತಾ ದರ್ಶನ ಸಭೆ ನಡೆಸಬೇಕು ಎನ್ನುವ ಆದೇಶವನ್ನೂ ಈಗಾಗಲೇ ಮುಖ್ಯಮಂತ್ರಿಗಳ ಸೂಚನೆಯಂತೆ, ಅಪರ ಮುಖ್ಯ ಕಾರ್ಯದರ್ಶಿ ಆಗಿರುವ ರಜನೀಶ್ ಗೋಯಲ್ ಅವರು ಹೊರಡಿಸಿದ್ದಾರೆ.

ಸಾರ್ವಜನಿಕರು ಪದೇ ಪದೇ ಸಣ್ಣ ಪುಟ್ಟ ಕೆಲಸಗಳಿಗೂ ಸರ್ಕಾರಿ ಕಚೇರಿಗಳಿಗೆ, ಶಾಸಕರ, ಜಿಲ್ಲಾ ಮಂತ್ರಿಗಳ, ಮುಖ್ಯಮಂತ್ರಿಗಳ ಬಳಿಗೆ ಅಲೆಯುವುದು ತಪ್ಪುತ್ತದೆ. ಅರ್ಜಿದಾರರ ದೂರು ಸತ್ಯವಾಗಿದ್ದು, ಯಾವುದೇ ದುರುದ್ದೇಶದಿಂದ ಕೂಡಿರದಿದ್ದರೆ ಅಂತಹ ಅರ್ಜಿಗಳಿಗೆ ಸೂಕ್ತ ಪರಿಹಾರ ಒದಗಿಸದಿದ್ದರೆ ಸಂಬಂಧಪಟ್ಟ ಅಧಿಕಾರಿಯನ್ನು ಇದಕ್ಕೆ ಹೊಣೆಗಾರರನ್ನಾಗಿಸಿ ಸರ್ಕಾರ ಕ್ರಮ ಜರುಗಿಸಲಿದೆ. ಹೀಗೆ ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಇಡಿ ರಾಜ್ಯಾದ್ಯಂತ ಏಕ ಕಾಲಕ್ಕೆ ಒಂದೇ ದಿನ ಜನತಾ ದರ್ಶನ ದಾಖಲಾಗುತ್ತಿದೆ.

ಜಾತಿ ಪ್ರಮಾಣಪತ್ರ, ಖಾತೆ ಬದಲಾವಣೆ, ಟ್ರಾನ್ಸ್ ಫಾರ್ಮರ್ ರಿಪೇರಿ, ವಿದ್ಯುತ್ ಕಂಬ ಅಳವಡಿಕೆಯಂತಹ ಸಣ್ಣ ಪುಟ್ಟ ಕೆಲಸಗಳಿಗೂ ಜನ ನನ್ನ ಬಳಿಗೆ ಬರುತ್ತಿದ್ದಾರೆ. ನಾನು ಜಿಲ್ಲೆಗಳಿಗೆ ಭೇಟಿ ನೀಡಿದಾಗ ಜನರು ಇಷ್ಟು ಸಣ್ಣ ಪುಟ್ಟ ಕೆಲಸಗಳಿಗೂ ನನ್ನನ್ನು ಹುಡುಕಿಕೊಂಡು ಬರುವಂತಾಗಿದೆ ಎಂದರೆ ನೀವುಗಳಿದ್ದೂ ಏನು ಪ್ರಯೋಜನ ಎಂದು ಸಭೆಯಲ್ಲಿ ಪ್ರಶ್ನಿಸಿದ್ದರು. ಬಳಿಕ ಪ್ರತಿ ಜಿಲ್ಲೆ ಮತ್ತು ತಾಲ್ಲೂಕುಗಳಲ್ಲೂ ಜನತಾ ದರ್ಶನ ನಡೆಸಬೇಕು ಎನ್ನುವ ಸೂಚನೆಯನ್ನೂ ನೀಡಿದ್ದರು. ಈ ಸೂಚನೆಯ ಫಲವೇ ಇಂದು ರಾಜ್ಯದಾದ್ಯಂತ ಏಕ ಕಾಲಕ್ಕೆ ನಡೆಯಲಿರುವ ಜನತಾ ದರ್ಶನ ಕಾರ್ಯಕ್ರಮ. ಇದು ನಿಗದಿತವಾಗಿ ನಡೆಯಲಿದೆ.

Advertisement

ಜನತಾ ದರ್ಶನದಲ್ಲಿ ಸಲ್ಲಿಕೆಯಾಗುವ ಸಾರ್ವಜನಿಕರ ಅಹವಾಲುಗಳು ಈಗಾಗಲೇ ಚಾಲ್ತಿಯಲ್ಲಿರುವ “ಸಾರ್ವಜನಿಕ ಕುಂದುಕೊರತೆ ನಿವಾರಣಾ ವ್ಯವಸ್ಥೆ (ಐಪಿಜಿಆರ್‌ಎಸ್-ಇಂಟೆಗ್ರೇಟೆಡ್ ಪಬ್ಲಿಕ್ ಗ್ರಿವಿಯೆನ್ಸ್ ರಿಡ್ರೆಸಲ್ ಸಿಸ್ಟಂ) ತಂತ್ರಾಂಶದಲ್ಲಿ ದಾಖಲಾಗುತ್ತದೆ ಮತ್ತು ಇಲ್ಲಿಂದಲೇ ಸಂಬಂಧಪಟ್ಟ ಇಲಾಖೆಯ ಟೇಬಲ್ಲಿಗೆ ಅರ್ಜಿಗಳ ವಿಲೇವಾರಿಯೂ ನಡೆಯುತ್ತದೆ. ಬಳಿಕ ಕಾಳಜಿ ವಹಿಸಿ ಕಾಲಮಿತಿಯಲ್ಲಿ ಪರಿಹಾರ ಒದಗಿಸಲು ಕ್ರಮ ವಹಿಸಬೇಕು ಎನ್ನುವ ಸೂಚನೆ ಈಗಾಗಲೇ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ರವಾನೆಯಾಗಿದೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಇಳಿಮುಖ

ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವೆಡೆ ಅಬ್ಬರಿಸಿದ್ದ ಮಳೆ ಇಂದು ಇಳಿಮುಖವಾಗಿದೆ. ಕರಾವಳಿ…

1 hour ago

ವಿದ್ಯಾರ್ಥಿಗಳ ಓದಿನ ವಿಷಯದ ಆಯ್ಕೆ ಹೇಗಿರಬೇಕು..?

ಹಲವಾರು ವಿದ್ಯಾರ್ಥಿಗಳಿಗೆ, ಪೋಷಕರಿಗೆ ತಮ್ಮ ಮಕ್ಕಳು ಎಸ್‌ಎಸ್‌ ಎಲ್‌ಸಿ , ಪಿಯುಸಿ ಆದ…

1 hour ago

ರೈತರು ಗಮನಿಸಿ | ಭತ್ತದ ಬೆಳೆಗೆ ಫಸಲ್‌ ಭಿಮಾ ಯೋಜನೆ ವಿಮಾ ಪ್ರೀಮಿಯಂ ಪಾವತಿ ಪ್ರಾರಂಭ

ಭತ್ತದ ಬೆಳೆ ಬೆಳೆಯುವ ರೈತರಿಗೆ ಪ್ರಧಾನಮಂತ್ರಿ ಫಸಲ್‌ ಭಿಮಾ ಯೋಜನೆಯ ವಿಮಾ ಪ್ರೀಮಿಯಂ…

2 hours ago

ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆ | ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ

ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ  ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ…

2 hours ago

ಪ್ಲೈಓವರ್‌ ನಿರ್ಮಾಣದ ಬಳಿಕ ಹೇಗಿದೆ ಕಲ್ಲಡ್ಕ..?

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕದಲ್ಲಿ ಪ್ಲೈಓವರ್‌ ಮೂಲಕ ವಾಹನ ಓಡಾಟ ಆರಂಭವಾಗಿದೆ. ಹೀಗಾಗಿ…

2 hours ago

ಗೇರು ವಾಣಿಜ್ಯ ಬೆಳೆ ಗ್ರಾಮೀಣ ಭಾಗದ ರೈತರ ಮೂಲಸಂಪತ್ತು

‌ ಗೇರು ಒಂದು ವಾಣಿಜ್ಯ ಬೆಳೆಯಾಗಿದ್ದು ಇದು ಗ್ರಾಮೀಣ ಭಾಗದ ರೈತರ ಮೂಲಸಂಪತ್ತು.…

3 hours ago