Advertisement
ಸುದ್ದಿಗಳು

ಆರೋಗ್ಯದ ಸಮತೋಲನಕ್ಕೆ ಸಿರಿಧಾನ್ಯಗಳೇ ಮದ್ದು

Share

ಆಧುನಿಕ ಜೀವನ ಶೈಲಿಯ ಪರಿಣಾಮವಾಗಿ ಮಾನವನ ಆಯಸ್ಸು ದಿನೇದಿನೇ ಕ್ಷೀಣಿಸುತ್ತಿದ್ದು, ಆರೋಗ್ಯವನ್ನು ಸಮತೋಲನದಿಂದ ಕಾಪಾಡಿಕೊಳ್ಳಲು ಸಾಂಪ್ರದಾಯಿಕ ಆಹಾರ ಪದ್ಧತಿಯಾದ ಸಿರಿಧಾನ್ಯಗಳ ಸೇವನೆಗೆ ಮರಳಬೇಕಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಮುನಿಯಪ್ಪಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಕ್ರೀಡಾಂಗಣದಲ್ಲಿ ಕೃಷಿ ಇಲಾಖೆ ವತಿಯಿಂದ ಆಯೋಜಿಸಲಾದ “ಜಿಲ್ಲಾ ಮಟ್ಟದ ಸಿರಿಧಾನ್ಯ ನಡಿಗೆ” ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ದಿನನಿತ್ಯದ ಆಹಾರದಲ್ಲಿ ನವಣೆ, ಸಜ್ಜೆ, ಉದ್ದು, ರಾಗಿ ಹಾಗೂ ಜೋಳದಂತಹ ಸಿರಿಧಾನ್ಯಗಳನ್ನು ಸೇರಿಸಿಕೊಳ್ಳುವುದು ಅತ್ಯಂತ ಅಗತ್ಯವೆಂದು ಸಲಹೆ ನೀಡಿದರು.

ಹಿಂದಿನ ಕಾಲದಲ್ಲಿ ಭಾರತದಲ್ಲಿ ಜನಸಂಖ್ಯೆಯ ಶೇಕಡಾ 75ರಷ್ಟು ಮಂದಿ ಕೃಷಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಗುಣಮಟ್ಟದ ಸಿರಿಧಾನ್ಯ ಆಹಾರ ಮತ್ತು ಹಣ್ಣು–ಹಂಪಲುಗಳನ್ನು ಸೇವಿಸುತ್ತಾ ಗಟ್ಟಿ ದೇಹಾರೋಗ್ಯದೊಂದಿಗೆ ಶತಮಾನವರೆಗೆ ಬದುಕುತ್ತಿದ್ದರೆಂದು ಅವರು ನೆನಪಿಸಿದರು. ಆ ಕಾಲದ ಆಹಾರ ಪದ್ಧತಿ ಮಾನವನ ಜೀವನದಲ್ಲಿ ಸಮತೋಲನವನ್ನು ಕಾಪಾಡಲು ಸಹಕಾರಿಯಾಗಿತ್ತು ಎಂದರು.

ಇಂದಿನ ದಿನಗಳಲ್ಲಿ ಜೀವನಶೈಲಿ ಸಂಬಂಧಿತ ರೋಗಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸಿರಿಧಾನ್ಯಗಳ ಮಹತ್ವ ಮತ್ತಷ್ಟು ಹೆಚ್ಚಾಗಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಆರೋಗ್ಯ ವೃದ್ಧಿಸುವ ಸಿರಿಧಾನ್ಯಗಳಿಗೆ ವಿಶೇಷ ಒತ್ತು ನೀಡಿ, ಸಿರಿಧಾನ್ಯ ಬೆಳೆಸುವ ರೈತರಿಗೆ ಪ್ರೋತ್ಸಾಹ ನೀಡುತ್ತಿವೆ ಎಂದು ಸಚಿವ ಮುನಿಯಪ್ಪ ತಿಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

6 hours ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

6 hours ago

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

21 hours ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

1 day ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

1 day ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

2 days ago