Advertisement
ಸುದ್ದಿಗಳು

ಆರೋಗ್ಯದ ಸಮತೋಲನಕ್ಕೆ ಸಿರಿಧಾನ್ಯಗಳೇ ಮದ್ದು

Share

ಆಧುನಿಕ ಜೀವನ ಶೈಲಿಯ ಪರಿಣಾಮವಾಗಿ ಮಾನವನ ಆಯಸ್ಸು ದಿನೇದಿನೇ ಕ್ಷೀಣಿಸುತ್ತಿದ್ದು, ಆರೋಗ್ಯವನ್ನು ಸಮತೋಲನದಿಂದ ಕಾಪಾಡಿಕೊಳ್ಳಲು ಸಾಂಪ್ರದಾಯಿಕ ಆಹಾರ ಪದ್ಧತಿಯಾದ ಸಿರಿಧಾನ್ಯಗಳ ಸೇವನೆಗೆ ಮರಳಬೇಕಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಮುನಿಯಪ್ಪಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಕ್ರೀಡಾಂಗಣದಲ್ಲಿ ಕೃಷಿ ಇಲಾಖೆ ವತಿಯಿಂದ ಆಯೋಜಿಸಲಾದ “ಜಿಲ್ಲಾ ಮಟ್ಟದ ಸಿರಿಧಾನ್ಯ ನಡಿಗೆ” ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ದಿನನಿತ್ಯದ ಆಹಾರದಲ್ಲಿ ನವಣೆ, ಸಜ್ಜೆ, ಉದ್ದು, ರಾಗಿ ಹಾಗೂ ಜೋಳದಂತಹ ಸಿರಿಧಾನ್ಯಗಳನ್ನು ಸೇರಿಸಿಕೊಳ್ಳುವುದು ಅತ್ಯಂತ ಅಗತ್ಯವೆಂದು ಸಲಹೆ ನೀಡಿದರು.

ಹಿಂದಿನ ಕಾಲದಲ್ಲಿ ಭಾರತದಲ್ಲಿ ಜನಸಂಖ್ಯೆಯ ಶೇಕಡಾ 75ರಷ್ಟು ಮಂದಿ ಕೃಷಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಗುಣಮಟ್ಟದ ಸಿರಿಧಾನ್ಯ ಆಹಾರ ಮತ್ತು ಹಣ್ಣು–ಹಂಪಲುಗಳನ್ನು ಸೇವಿಸುತ್ತಾ ಗಟ್ಟಿ ದೇಹಾರೋಗ್ಯದೊಂದಿಗೆ ಶತಮಾನವರೆಗೆ ಬದುಕುತ್ತಿದ್ದರೆಂದು ಅವರು ನೆನಪಿಸಿದರು. ಆ ಕಾಲದ ಆಹಾರ ಪದ್ಧತಿ ಮಾನವನ ಜೀವನದಲ್ಲಿ ಸಮತೋಲನವನ್ನು ಕಾಪಾಡಲು ಸಹಕಾರಿಯಾಗಿತ್ತು ಎಂದರು.

ಇಂದಿನ ದಿನಗಳಲ್ಲಿ ಜೀವನಶೈಲಿ ಸಂಬಂಧಿತ ರೋಗಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸಿರಿಧಾನ್ಯಗಳ ಮಹತ್ವ ಮತ್ತಷ್ಟು ಹೆಚ್ಚಾಗಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಆರೋಗ್ಯ ವೃದ್ಧಿಸುವ ಸಿರಿಧಾನ್ಯಗಳಿಗೆ ವಿಶೇಷ ಒತ್ತು ನೀಡಿ, ಸಿರಿಧಾನ್ಯ ಬೆಳೆಸುವ ರೈತರಿಗೆ ಪ್ರೋತ್ಸಾಹ ನೀಡುತ್ತಿವೆ ಎಂದು ಸಚಿವ ಮುನಿಯಪ್ಪ ತಿಳಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…

5 hours ago

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ

ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…

9 hours ago

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

1 day ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

1 day ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

1 day ago

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

2 days ago