Advertisement
ಪ್ರಮುಖ

#RakshaBandhan | ಪ್ರಧಾನಿ ಮೋದಿಗೆ ರಾಖಿ ಕಟ್ಟಿದ ಪಾಕಿಸ್ತಾನಿ ಸಹೋದರಿ | ಮತ್ತೊಮ್ಮೆ ಭಾರತದ ಪ್ರಧಾನಿಯಾಗಲಿ ಎಂದು ಹಾರೈಕೆ |

Share

ಭಾರತದಲ್ಲಿ ಸಹೋದರ, ಸಹೋದರಿ ಸಂಬಂಧದ ದ್ಯೋತಕವಾಗಿ ರಕ್ಷಾ ಬಂಧನ #RakshaBandhan ಹಬ್ಬವನ್ನು ವಿಶೇಷವಾಗಿ ಆಚರಿಸಲಾಗುತ್ತಿದೆ. ಪ್ರಧಾನಿಗಳು ಈ ಹಬ್ಬಕ್ಕೆ ವಿಶೇಷ ಸ್ಥಾನ ಮಾನವನ್ನು ನೀಡಿದ್ದಾರೆ. ಈ ಬಾರಿ ಪ್ರಧಾನಿ ನರೇಂದ್ರ ಮೋದಿ ಅವರ ಪಾಕಿಸ್ತಾನಿ ಸಹೋದರಿ ಖಮರ್ ಜಹಾನ್ ರಕ್ಷಾ ಬಂಧನ ಹಿನ್ನೆಲೆ ದೆಹಲಿ ತಲುಪಿದ್ದಾರೆ.  

ಪಾಕಿಸ್ತಾನದಿಂದ ಬಂದು ಅಹಮದಾಬಾದ್‌ನಲ್ಲಿ ನೆಲೆಸಿರುವ ಕಮರ್ ಜಹಾನ್ ಅವರು ಕಳೆದ ಹಲವು ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಖಿ ಕಟ್ಟುತ್ತಿದ್ದಾರೆ. ಕಳೆದ  3 ವರ್ಷಗಳ ನಂತರ ರಾಖಿ ಕಟ್ಟಲು ದೆಹಲಿಗೆ ಬಂದಿದ್ದೇನೆ ಮತ್ತು ಪ್ರಧಾನಿ ಮೋದಿಗೆ ತನ್ನ ಕೈಯಿಂದಲೇ ರಾಖಿ ಕಟ್ಟಿದ್ದೇನೆ ಎಂದು ಕಮರ್ ಜಹಾನ್ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ. ಮೋದಿ ವಿಶ್ವಗುರುವಾಗಿ ಹೊರಹೊಮ್ಮಿದ್ದಾರೆ. ನರೇಂದ್ರ ಮೋದಿಯವರ ದೀರ್ಘಾಯುಷ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ. ಮತ್ತು 2024 ರಲ್ಲಿ ಅವರು ಮತ್ತೊಮ್ಮೆ ಭಾರತದ ಪ್ರಧಾನಿಯಾಗಲಿ ಎಂದು ಹಾರೈಸುತ್ತೇನೆ ಎಂದು ಖಮರ್‌ ಹೇಳಿದ್ದಾರೆ.

ಖಮರ್ ಜಹಾನ್ ಕರಾಚಿಯಿಂದ ತನ್ನ ತಾಯಿಯೊಂದಿಗೆ ತನ್ನ ಸಂಬಂಧಿಕರನ್ನು ಭೇಟಿ ಮಾಡಲು ಭಾರತಕ್ಕೆ ಬಂದಿದ್ದರು. ಮತ್ತು ನಂತರ ಇಲ್ಲಿಯೇ ಮದುವೆಯಾಗಿ ವೈವಾಹಿಕ ಜೀವನ ಆರಂಭಿಸಿದ್ದಾರೆ. ನಾನು ಪಾಕಿಸ್ತಾನದಲ್ಲಿಲ್ಲ ಆದರೆ ಭಾರತದಲ್ಲಿರುವುದು ನನ್ನ ಅದೃಷ್ಟ ಎಂದು ನಾನು ಭಾವಿಸುತ್ತೇನೆ, ಇಲ್ಲಿರುವುದಕ್ಕೆ ನನಗೆ ತುಂಬಾ ಸಂತೋಷವಾಗಿದೆ ಎನ್ನುತ್ತಾರೆ ಅವರು.

Source: ANI

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

18 hours ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

19 hours ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

21 hours ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

21 hours ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

1 day ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

2 days ago