Advertisement
ಪ್ರಮುಖ

#RakshaBandhan | ಪ್ರಧಾನಿ ಮೋದಿಗೆ ರಾಖಿ ಕಟ್ಟಿದ ಪಾಕಿಸ್ತಾನಿ ಸಹೋದರಿ | ಮತ್ತೊಮ್ಮೆ ಭಾರತದ ಪ್ರಧಾನಿಯಾಗಲಿ ಎಂದು ಹಾರೈಕೆ |

Share

ಭಾರತದಲ್ಲಿ ಸಹೋದರ, ಸಹೋದರಿ ಸಂಬಂಧದ ದ್ಯೋತಕವಾಗಿ ರಕ್ಷಾ ಬಂಧನ #RakshaBandhan ಹಬ್ಬವನ್ನು ವಿಶೇಷವಾಗಿ ಆಚರಿಸಲಾಗುತ್ತಿದೆ. ಪ್ರಧಾನಿಗಳು ಈ ಹಬ್ಬಕ್ಕೆ ವಿಶೇಷ ಸ್ಥಾನ ಮಾನವನ್ನು ನೀಡಿದ್ದಾರೆ. ಈ ಬಾರಿ ಪ್ರಧಾನಿ ನರೇಂದ್ರ ಮೋದಿ ಅವರ ಪಾಕಿಸ್ತಾನಿ ಸಹೋದರಿ ಖಮರ್ ಜಹಾನ್ ರಕ್ಷಾ ಬಂಧನ ಹಿನ್ನೆಲೆ ದೆಹಲಿ ತಲುಪಿದ್ದಾರೆ.  

ಪಾಕಿಸ್ತಾನದಿಂದ ಬಂದು ಅಹಮದಾಬಾದ್‌ನಲ್ಲಿ ನೆಲೆಸಿರುವ ಕಮರ್ ಜಹಾನ್ ಅವರು ಕಳೆದ ಹಲವು ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಖಿ ಕಟ್ಟುತ್ತಿದ್ದಾರೆ. ಕಳೆದ  3 ವರ್ಷಗಳ ನಂತರ ರಾಖಿ ಕಟ್ಟಲು ದೆಹಲಿಗೆ ಬಂದಿದ್ದೇನೆ ಮತ್ತು ಪ್ರಧಾನಿ ಮೋದಿಗೆ ತನ್ನ ಕೈಯಿಂದಲೇ ರಾಖಿ ಕಟ್ಟಿದ್ದೇನೆ ಎಂದು ಕಮರ್ ಜಹಾನ್ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ. ಮೋದಿ ವಿಶ್ವಗುರುವಾಗಿ ಹೊರಹೊಮ್ಮಿದ್ದಾರೆ. ನರೇಂದ್ರ ಮೋದಿಯವರ ದೀರ್ಘಾಯುಷ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ. ಮತ್ತು 2024 ರಲ್ಲಿ ಅವರು ಮತ್ತೊಮ್ಮೆ ಭಾರತದ ಪ್ರಧಾನಿಯಾಗಲಿ ಎಂದು ಹಾರೈಸುತ್ತೇನೆ ಎಂದು ಖಮರ್‌ ಹೇಳಿದ್ದಾರೆ.

ಖಮರ್ ಜಹಾನ್ ಕರಾಚಿಯಿಂದ ತನ್ನ ತಾಯಿಯೊಂದಿಗೆ ತನ್ನ ಸಂಬಂಧಿಕರನ್ನು ಭೇಟಿ ಮಾಡಲು ಭಾರತಕ್ಕೆ ಬಂದಿದ್ದರು. ಮತ್ತು ನಂತರ ಇಲ್ಲಿಯೇ ಮದುವೆಯಾಗಿ ವೈವಾಹಿಕ ಜೀವನ ಆರಂಭಿಸಿದ್ದಾರೆ. ನಾನು ಪಾಕಿಸ್ತಾನದಲ್ಲಿಲ್ಲ ಆದರೆ ಭಾರತದಲ್ಲಿರುವುದು ನನ್ನ ಅದೃಷ್ಟ ಎಂದು ನಾನು ಭಾವಿಸುತ್ತೇನೆ, ಇಲ್ಲಿರುವುದಕ್ಕೆ ನನಗೆ ತುಂಬಾ ಸಂತೋಷವಾಗಿದೆ ಎನ್ನುತ್ತಾರೆ ಅವರು.

Source: ANI

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು

ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…

27 minutes ago

ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…

11 hours ago

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

16 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

1 day ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

1 day ago