Advertisement
ಮಕ್ಕಳ ಪುಟ

#Brave | ಬಾವಿಗೆ ಬಿದ್ದ ತಮ್ಮನ ಪ್ರಾಣ ಉಳಿಸಿದ ಅಕ್ಕ| 8 ವರ್ಷದ ಪುಟ್ಟ ಪೋರಿಯ ದಿಟ್ಟ ಸಾಧನೆ |

Share

ಕೆಲವೊಮ್ಮೆ ಮಕ್ಕಳು ತಮ್ಮ ವಯಸ್ಸಿಗೆ ಮೀರಿದ ಸಾಧನೆ ಮಾಡುತ್ತಾರೆ. ಅದಕ್ಕೆ ಧೈರ್ಯ, ಗಟ್ಟಿತನ ಬೇಕು. ಅದು ಎಲ್ಲರಲ್ಲೂ ಬರೋದಿಲ್ಲ. ಇಲ್ಲೊಬ್ಬ 8 ವರ್ಷದ ಬಾಲಕಿ ಬಾವಿಗೆ ಬಿದ್ದಿದ್ದ 7 ವರ್ಷದ ತನ್ನ ತಮ್ಮನನ್ನು ರಕ್ಷಿಸಲು ಸ್ವತಃ ಬಾವಿಗೆ ಹಾರಿ ಜೀವ ಉಳಿಸಿದ್ದಾಳೆ. 

ತುಮಕೂರು ತಾಲೂಕಿನ ಕುಚ್ಚಂಗಿಯಲ್ಲಿ 8 ವರ್ಷದ ಶಾಲೂ ಎಂಬ ಧೀರ ಬಾಲಕಿ. ಈಕೆ ಬಾವಿಗೆ ಹಾರಿ ಹಿಮಾಂಶೂ ಎಂಬ ತಮ್ಮನ ರಕ್ಷಣೆ ಮಾಡಿದ್ದಾಳೆ. ತೋಟದ ಮನೆಯಲ್ಲಿ ಕೆಲಸಕ್ಕೆ ಇದ್ದ ಉತ್ತರ ಪ್ರದೇಶ‌ ಮೂಲದ ಜೀತೇಂದ್ರ- ರಾಜಕುಮಾರಿ ದಂಪತಿಗೆ 8 ವರ್ಷದ ಶಾಲೂ, 7 ವರ್ಷದ ಹಿಮಾಂಶೂ, 3 ವರ್ಷದ ರಾಶಿ, 2 ವರ್ಷದ ಕಪಿಲ್ ಎಂಬ ನಾಲ್ವರು ಮಕ್ಕಳು. ಇವರ ಪೈಕಿ ಹಿಮಾಂಶೂ ಹಾಗೂ ರಾಶಿ ತೋಟದಲ್ಲಿ ಆಟವಾಡುವಾಗ ಬಾವಿಗೆ ಬಾಲ್ ಬಿದ್ದಿದೆ. ಬಾಲ್ ತೆಗೆಯಲು‌ ಹೋದ ಹಿಮಾಂಶು ಸಹ ಬಾವಿಯಲ್ಲಿ ಬಿದ್ದಿದ್ದಾನೆ. ಬಾವಿಯಲ್ಲಿ ಬಿದ್ದು ಜೀವನ್ಮರಣ ಹೋರಾಟ ನಡೆಸುತ್ತಿದ್ದ ಹಿಮಾಂಶೂವನ್ನು ಕಂಡು ಅಕ್ಕ ಶಾಲೂ ಸಹ ಮನೆಯಲ್ಲಿದ್ದ ಲೈಫ್ ಜಾಕೆಟ್ ಧರಿಸಿ ಬಾವಿಗೆ ಹಾರಿದ್ದಾಳೆ.‌

ಇದೇ ವೇಳೆ ಅಕ್ಕ ಪಕ್ಕದ ಜನರು ಶಾಲೂ ಸಹಾಯಕ್ಕೆ ಬಂದಿದ್ದಾರೆ. ಎಲ್ಲರೂ ಸೇರಿ ಇಬ್ಬರನ್ನು ಬಾವಿಯಿಂದ ಮೇಲಕ್ಕೆ ಎತ್ತಿದ್ದಾರೆ.‌ ಕಳೆದ ಮೂರ್ನಾಲ್ಕು ತಿಂಗಳಿಂದ ಬಾಡಿಗೆ ಮನೆ ಮಾಲೀಕ ಧನಂಜಯ್ಯ ಎಂಬುವವರ ಬಳಿ ಶಾಲೂ ಈಜು ಕಲಿಯುತ್ತಿದ್ದಳು. ಹೀಗಾಗಿ ತಮ್ಮನನ್ನು ರಕ್ಷಿಸಲು ಶಾಲೂ ಧೈರ್ಯ ಮಾಡಿದ್ದಾಳೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ

ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…

1 day ago

ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…

1 day ago

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

2 days ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

3 days ago

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ

‘ರೋಸ್ಟೆಡ್‌ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ತಾತ್ಕಾಲಿಕ…

4 days ago