Advertisement
ಮಕ್ಕಳ ಪುಟ

#Brave | ಬಾವಿಗೆ ಬಿದ್ದ ತಮ್ಮನ ಪ್ರಾಣ ಉಳಿಸಿದ ಅಕ್ಕ| 8 ವರ್ಷದ ಪುಟ್ಟ ಪೋರಿಯ ದಿಟ್ಟ ಸಾಧನೆ |

Share

ಕೆಲವೊಮ್ಮೆ ಮಕ್ಕಳು ತಮ್ಮ ವಯಸ್ಸಿಗೆ ಮೀರಿದ ಸಾಧನೆ ಮಾಡುತ್ತಾರೆ. ಅದಕ್ಕೆ ಧೈರ್ಯ, ಗಟ್ಟಿತನ ಬೇಕು. ಅದು ಎಲ್ಲರಲ್ಲೂ ಬರೋದಿಲ್ಲ. ಇಲ್ಲೊಬ್ಬ 8 ವರ್ಷದ ಬಾಲಕಿ ಬಾವಿಗೆ ಬಿದ್ದಿದ್ದ 7 ವರ್ಷದ ತನ್ನ ತಮ್ಮನನ್ನು ರಕ್ಷಿಸಲು ಸ್ವತಃ ಬಾವಿಗೆ ಹಾರಿ ಜೀವ ಉಳಿಸಿದ್ದಾಳೆ. 

ತುಮಕೂರು ತಾಲೂಕಿನ ಕುಚ್ಚಂಗಿಯಲ್ಲಿ 8 ವರ್ಷದ ಶಾಲೂ ಎಂಬ ಧೀರ ಬಾಲಕಿ. ಈಕೆ ಬಾವಿಗೆ ಹಾರಿ ಹಿಮಾಂಶೂ ಎಂಬ ತಮ್ಮನ ರಕ್ಷಣೆ ಮಾಡಿದ್ದಾಳೆ. ತೋಟದ ಮನೆಯಲ್ಲಿ ಕೆಲಸಕ್ಕೆ ಇದ್ದ ಉತ್ತರ ಪ್ರದೇಶ‌ ಮೂಲದ ಜೀತೇಂದ್ರ- ರಾಜಕುಮಾರಿ ದಂಪತಿಗೆ 8 ವರ್ಷದ ಶಾಲೂ, 7 ವರ್ಷದ ಹಿಮಾಂಶೂ, 3 ವರ್ಷದ ರಾಶಿ, 2 ವರ್ಷದ ಕಪಿಲ್ ಎಂಬ ನಾಲ್ವರು ಮಕ್ಕಳು. ಇವರ ಪೈಕಿ ಹಿಮಾಂಶೂ ಹಾಗೂ ರಾಶಿ ತೋಟದಲ್ಲಿ ಆಟವಾಡುವಾಗ ಬಾವಿಗೆ ಬಾಲ್ ಬಿದ್ದಿದೆ. ಬಾಲ್ ತೆಗೆಯಲು‌ ಹೋದ ಹಿಮಾಂಶು ಸಹ ಬಾವಿಯಲ್ಲಿ ಬಿದ್ದಿದ್ದಾನೆ. ಬಾವಿಯಲ್ಲಿ ಬಿದ್ದು ಜೀವನ್ಮರಣ ಹೋರಾಟ ನಡೆಸುತ್ತಿದ್ದ ಹಿಮಾಂಶೂವನ್ನು ಕಂಡು ಅಕ್ಕ ಶಾಲೂ ಸಹ ಮನೆಯಲ್ಲಿದ್ದ ಲೈಫ್ ಜಾಕೆಟ್ ಧರಿಸಿ ಬಾವಿಗೆ ಹಾರಿದ್ದಾಳೆ.‌

ಇದೇ ವೇಳೆ ಅಕ್ಕ ಪಕ್ಕದ ಜನರು ಶಾಲೂ ಸಹಾಯಕ್ಕೆ ಬಂದಿದ್ದಾರೆ. ಎಲ್ಲರೂ ಸೇರಿ ಇಬ್ಬರನ್ನು ಬಾವಿಯಿಂದ ಮೇಲಕ್ಕೆ ಎತ್ತಿದ್ದಾರೆ.‌ ಕಳೆದ ಮೂರ್ನಾಲ್ಕು ತಿಂಗಳಿಂದ ಬಾಡಿಗೆ ಮನೆ ಮಾಲೀಕ ಧನಂಜಯ್ಯ ಎಂಬುವವರ ಬಳಿ ಶಾಲೂ ಈಜು ಕಲಿಯುತ್ತಿದ್ದಳು. ಹೀಗಾಗಿ ತಮ್ಮನನ್ನು ರಕ್ಷಿಸಲು ಶಾಲೂ ಧೈರ್ಯ ಮಾಡಿದ್ದಾಳೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಇಂಧನಕ್ಕೂ ರೈತನೇ ಆಧಾರ…! ಇಥೆನಾಲ್‌ ಯೋಜನೆಯಿಂದ ರೈತರಿಗೆ ₹1.6 ಲಕ್ಷ ಕೋಟಿ ಹೆಚ್ಚುವರಿ ಆದಾಯ

ಇಥೆನಾಲ್‌ ಮಿಶ್ರಣ ಯೋಜನೆಯಿಂದ ಕಳೆದ ಹತ್ತು ವರ್ಷಗಳಲ್ಲಿ ರೈತರಿಗೆ ₹1.6 ಲಕ್ಷ ಕೋಟಿಗೂ…

26 minutes ago

ಅಮೆರಿಕ-ಇರಾನ್ ಯುದ್ಧ ಮತ್ತೆ ಭುಗಿಲೇ..? ಕದನ ವಿರಾಮ ಅಂತ್ಯ ಎಂದ ಟ್ರಂಪ್ – ಹೊಸ ದಾಳಿಗಳಿಂದ ಜಾಗತಿಕ ಆತಂಕ

ಅಮೆರಿಕ-ಇರಾನ್ ನಡುವಿನ ಕದನ ವಿರಾಮ ಮತ್ತೆ ಮುರಿಯುವ ಹಂತಕ್ಕೆ ತಲುಪಿದ್ದು, ಹೊಸ ಅಮೆರಿಕನ್…

38 minutes ago

ಮಳೆಗಾಲದ ಪರಿಸರದ ಸೊಬಗು ಜಲವರ್ಣದಲ್ಲಿ ಸೆರೆ – ಗುತ್ತಿಗಾರಿನಲ್ಲಿ ಮೂರು ದಿನಗಳ ‘ಮಾನ್ಸೂನ್ ಕಲರ್ಸ್’ ಚಿತ್ರಕಲಾ ಶಿಬಿರ

ಗುತ್ತಿಗಾರಿನಲ್ಲಿ ‘ಮಾನ್ಸೂನ್ ಕಲರ್ಸ್’ ಜಲವರ್ಣ ಚಿತ್ರಕಲಾ ಶಿಬಿರ ನಡೆಯುತ್ತಿದೆ. ಮಲೆನಾಡಿನ ನಿಸರ್ಗ ಸೌಂದರ್ಯವನ್ನು…

14 hours ago

ಹಳ್ಳಿಗಳನ್ನು ಪರಿವರ್ತಿಸಲು ಹಸುವಿನ ಸಗಣಿ – ಗೋಮಯದಿಂದ ಗ್ರಾಮಗಳ ಆರ್ಥಿಕ ಕ್ರಾಂತಿ..!

ಗೋಮಯವನ್ನು ಶುದ್ಧ ಇಂಧನ ಹಾಗೂ ಸಾವಯವ ಗೊಬ್ಬರವಾಗಿ ಬಳಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಉತ್ತರ…

16 hours ago

ಕಾಫಿ ಬೆಲೆ ಗರಿಗೆದರಿಕೆ- ಬ್ರೆಜಿಲ್‌ನಲ್ಲಿ ನಿರಂತರ ಮಳೆಯಿಂದ ಜಾಗತಿಕ ಮಾರುಕಟ್ಟೆಯಲ್ಲಿ ಏರಿಕೆ

ಬ್ರೆಜಿಲ್‌ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…

21 hours ago

ಹವಾಮಾನ ವರದಿ | 08-07-2026 | ಕರ್ನಾಟಕದಲ್ಲಿ ಮಳೆ ಇಳಿಮುಖ – ರೈತರಿಗೆ ಮಹತ್ವದ ಹವಾಮಾನ ಮಾಹಿತಿ..!

ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…

24 hours ago