ಅಡಿಕೆ ಕೌಶಲ್ಯ ಪಡೆ | ದೋಟಿ ಮೂಲಕ ಅಡಿಕೆ ಕೊಯ್ಲು-ಸಿಂಪಡಣೆ ತರಬೇತಿ ಪಡೆಯುವ ಶಿಬಿರಾರ್ಥಿಗಳು |

January 11, 2022
8:00 AM

ಕ್ಯಾಂಪ್ಕೋ ನೇತೃತ್ವದಲ್ಲಿ ಅಡಿಕೆ ಕೌಶಲ್ಯ ಪಡೆ ಸಜ್ಜಾಗುತ್ತಿದೆ. ಕಳೆದ ಬಾರಿ ಆರಂಭವಾದ ಅಡಿಕೆ ಕೌಶಲ್ಯ ಪಡೆ ಈ ಬಾರಿ ಒಂದು ಹೆಜ್ಜೆ ಮುಂದೆ ಹೋಗಿ ದೋಟಿಯ ಮೂಲಕ ಅಡಿಕೆ ಕೊಯ್ಲು ಹಾಗೂ ಔಷಧಿ ಸಿಂಪಡಣೆಯ ಬಗ್ಗೆ ತರಬೇತಿ ಶಿಬಿರ ಆಯೋಜಿಸಿದೆ. ಮೂರು ದಿನಗಳ ಕಾಲ ವಿಟ್ಲದಲ್ಲಿ ಈ ಶಿಬಿರ ನಡೆಯಲಿದೆ.

ವಿಟ್ಲದ ಸಿಪಿಸಿಆರ್‌ಐ ವಠಾರದಲ್ಲಿ ಕ್ಯಾಂಪ್ಕೋ ನೇತೃತ್ವದಲ್ಲಿ ಅಡಿಕೆ ಪತ್ರಿಕೆ, ಸಿಪಿಸಿಆರ್‌ಐ ಹಾಗೂ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಆಶ್ರಯದಲ್ಲಿ ಆಯೋಜನಗೊಂಡ ಅಡಿಕೆ ಕೌಶಲ್ಯ ಪಡೆಯ ಫೈಬರ್‌ದೋಟಿ ಮೂಲಕ ಅಡಿಕೆ ಕೊಯ್ಲು ಮತ್ತು ಸಿಂಪಡಣೆ ತರಬೇತಿ ಶಿಬಿರದಲ್ಲಿ 19  ಮಂದಿ ಶಿಬಿರಾರ್ಥಿಗಳು ಇದ್ದಾರೆ. ಪೈಬರ್‌ ದೋಟಿಯ ಮೂಲಕ ಅಡಿಕೆ ಕೊಯ್ಲು ಮಾಡುವ ವಿಧಾನಗಳು ಹಾಗೂ ದೋಟಿಯನ್ನು ಸುಲಭವಾಗಿ ಆಧರಿಸುವ ಹಾಗೂ ತಾಂತ್ರಿಕ ವಿಧಾನಗಳನ್ನು ತಿಳಿಸಿಕೊಡಲಾಗುತ್ತಿದೆ. ಅದರ ಜೊತೆಗೆ ವಿದ್ಯುತ್‌ ಅವಘಡ ತಪ್ಪಿಸುವುದು , ಸೂಕ್ತ ಮುಂಜಾಗ್ರತಾ ಕ್ರಮಗಳು ಇತ್ಯಾದಿಗಳನ್ನು ತಿಳಿಸಲಾಗುತ್ತಿದೆ. ವಿಶೇಷವಾಗಿ ತರಬೇತಿ ನೀಡಲು ಉತ್ತರ ಕನ್ನಡ ಜಿಲ್ಲೆಯ ಮುರೂರು ಕಲ್ಲಬ್ಬೆಯ ರಾಜೇಶ್‌ಭಟ್‌, ಆರ್‌ಜಿ ಹೆಗಡೆ , ರಾಜು ಶೆಟ್ಟಿ, ರಮೇಶ್ ಭಟ್ ಆಗಮಿಸಿದ್ದಾರೆ. ಅವರ ಜೊತೆಗೆ ಸ್ಥಳೀಯವಾಗಿ ಕೆಲವು ವರ್ಷಗಳಿಂದ ಫೈಬರ್‌ ದೋಟಿ ಬಳಕೆ ಮಾಡುತ್ತಿರುವ ಮೈಕೆ ಗಣೇಶ್‌ ಭಟ್‌ ಅವರೂ ಇದ್ದಾರೆ.

ದೋಟಿ ಬಳಕೆಯ ವಿಧಾನಗಳಲ್ಲಿ ಪ್ರಮುಖವಾಗಿ ದೈಹಿಕ ಶ್ರಮ ಕಡಿಮೆಯಾಗುವಂತೆ ಹಾಗೂ ಕತ್ತು ನೋವು ಇತ್ಯಾದಿಗಳಿಂದ ದೂರ ಇರುವ ಬಗ್ಗೆಯೂ ಮಾಹಿತಿ ನೀಡಲಾಗುತ್ತಿದೆ. ಪೈಬರ್‌ ದೋಟಿಯು ಮುಂದಿನ ದಿನಗಳಲ್ಲಿ  ಅನಿವಾರ್ಯವಾಗುವ ಸ್ಥಿತಿ ಅಡಿಕೆ ಬೆಳೆಗಾರರಿಗೆ ಬರಲಿದೆ. ಇದಕ್ಕಾಗಿ ಸೂಕ್ತ ರೀತಿಯ ತರಬೇತಿ ಅಗತ್ಯವಾಗಿದೆ ಎನ್ನುವುದು ಅಭಿಪ್ರಾಯವಾಗಿದೆ. ಶಿಬಿರದಲ್ಲಿ ಯುವಕರೇ ಹೆಚ್ಚಾಗಿ ಭಾಗವಹಿಸಿದ್ದು ಸೀಮಿತ ಜನರಿಗೆ ಮಾತ್ರಾ ಅವಕಾಶ ಮಾಡಲಾಗಿತ್ತು. ಸುಮಾರು 50 ಕ್ಕೂ ಹೆಚ್ಚು ಅರ್ಜಿಗಳು ಬಂದಿದ್ದವು. ಅದರಲ್ಲಿ  20 ಜನ ಶಿಬಿರಾರ್ಥಿಗಳಿಗೆ ಮಾತ್ರವೇ ಈ ಬಾರಿ ಅವಕಾಶ ಲಭ್ಯವಾಗಿದೆ. ಮುಂದಿನ ದಿನಗಳಲ್ಲಿ ಇಂತಹ ತಾಂತ್ರಿಕ ಶಿಬಿರಗಳು ಹಳ್ಳಿಗಳಲ್ಲಿ  ಆರಂಭವಾಗಬೇಕಿದೆ.

This slideshow requires JavaScript.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

ಇದನ್ನೂ ಓದಿ

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ
July 14, 2026
7:12 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ
July 14, 2026
7:01 AM
by: ದ ರೂರಲ್ ಮಿರರ್.ಕಾಂ
ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ
July 14, 2026
6:53 AM
by: ದ ರೂರಲ್ ಮಿರರ್.ಕಾಂ
ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ
July 14, 2026
6:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror