MIRROR FOCUS

ಅಡಿಕೆ ಕೌಶಲ್ಯ ಪಡೆ | ದೋಟಿ ಮೂಲಕ ಅಡಿಕೆ ಕೊಯ್ಲು-ಸಿಂಪಡಣೆ ತರಬೇತಿ ಪಡೆಯುವ ಶಿಬಿರಾರ್ಥಿಗಳು |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕ್ಯಾಂಪ್ಕೋ ನೇತೃತ್ವದಲ್ಲಿ ಅಡಿಕೆ ಕೌಶಲ್ಯ ಪಡೆ ಸಜ್ಜಾಗುತ್ತಿದೆ. ಕಳೆದ ಬಾರಿ ಆರಂಭವಾದ ಅಡಿಕೆ ಕೌಶಲ್ಯ ಪಡೆ ಈ ಬಾರಿ ಒಂದು ಹೆಜ್ಜೆ ಮುಂದೆ ಹೋಗಿ ದೋಟಿಯ ಮೂಲಕ ಅಡಿಕೆ ಕೊಯ್ಲು ಹಾಗೂ ಔಷಧಿ ಸಿಂಪಡಣೆಯ ಬಗ್ಗೆ ತರಬೇತಿ ಶಿಬಿರ ಆಯೋಜಿಸಿದೆ. ಮೂರು ದಿನಗಳ ಕಾಲ ವಿಟ್ಲದಲ್ಲಿ ಈ ಶಿಬಿರ ನಡೆಯಲಿದೆ.

Advertisement
Advertisement

ವಿಟ್ಲದ ಸಿಪಿಸಿಆರ್‌ಐ ವಠಾರದಲ್ಲಿ ಕ್ಯಾಂಪ್ಕೋ ನೇತೃತ್ವದಲ್ಲಿ ಅಡಿಕೆ ಪತ್ರಿಕೆ, ಸಿಪಿಸಿಆರ್‌ಐ ಹಾಗೂ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಆಶ್ರಯದಲ್ಲಿ ಆಯೋಜನಗೊಂಡ ಅಡಿಕೆ ಕೌಶಲ್ಯ ಪಡೆಯ ಫೈಬರ್‌ದೋಟಿ ಮೂಲಕ ಅಡಿಕೆ ಕೊಯ್ಲು ಮತ್ತು ಸಿಂಪಡಣೆ ತರಬೇತಿ ಶಿಬಿರದಲ್ಲಿ 19  ಮಂದಿ ಶಿಬಿರಾರ್ಥಿಗಳು ಇದ್ದಾರೆ. ಪೈಬರ್‌ ದೋಟಿಯ ಮೂಲಕ ಅಡಿಕೆ ಕೊಯ್ಲು ಮಾಡುವ ವಿಧಾನಗಳು ಹಾಗೂ ದೋಟಿಯನ್ನು ಸುಲಭವಾಗಿ ಆಧರಿಸುವ ಹಾಗೂ ತಾಂತ್ರಿಕ ವಿಧಾನಗಳನ್ನು ತಿಳಿಸಿಕೊಡಲಾಗುತ್ತಿದೆ. ಅದರ ಜೊತೆಗೆ ವಿದ್ಯುತ್‌ ಅವಘಡ ತಪ್ಪಿಸುವುದು , ಸೂಕ್ತ ಮುಂಜಾಗ್ರತಾ ಕ್ರಮಗಳು ಇತ್ಯಾದಿಗಳನ್ನು ತಿಳಿಸಲಾಗುತ್ತಿದೆ. ವಿಶೇಷವಾಗಿ ತರಬೇತಿ ನೀಡಲು ಉತ್ತರ ಕನ್ನಡ ಜಿಲ್ಲೆಯ ಮುರೂರು ಕಲ್ಲಬ್ಬೆಯ ರಾಜೇಶ್‌ಭಟ್‌, ಆರ್‌ಜಿ ಹೆಗಡೆ , ರಾಜು ಶೆಟ್ಟಿ, ರಮೇಶ್ ಭಟ್ ಆಗಮಿಸಿದ್ದಾರೆ. ಅವರ ಜೊತೆಗೆ ಸ್ಥಳೀಯವಾಗಿ ಕೆಲವು ವರ್ಷಗಳಿಂದ ಫೈಬರ್‌ ದೋಟಿ ಬಳಕೆ ಮಾಡುತ್ತಿರುವ ಮೈಕೆ ಗಣೇಶ್‌ ಭಟ್‌ ಅವರೂ ಇದ್ದಾರೆ.

ದೋಟಿ ಬಳಕೆಯ ವಿಧಾನಗಳಲ್ಲಿ ಪ್ರಮುಖವಾಗಿ ದೈಹಿಕ ಶ್ರಮ ಕಡಿಮೆಯಾಗುವಂತೆ ಹಾಗೂ ಕತ್ತು ನೋವು ಇತ್ಯಾದಿಗಳಿಂದ ದೂರ ಇರುವ ಬಗ್ಗೆಯೂ ಮಾಹಿತಿ ನೀಡಲಾಗುತ್ತಿದೆ. ಪೈಬರ್‌ ದೋಟಿಯು ಮುಂದಿನ ದಿನಗಳಲ್ಲಿ  ಅನಿವಾರ್ಯವಾಗುವ ಸ್ಥಿತಿ ಅಡಿಕೆ ಬೆಳೆಗಾರರಿಗೆ ಬರಲಿದೆ. ಇದಕ್ಕಾಗಿ ಸೂಕ್ತ ರೀತಿಯ ತರಬೇತಿ ಅಗತ್ಯವಾಗಿದೆ ಎನ್ನುವುದು ಅಭಿಪ್ರಾಯವಾಗಿದೆ. ಶಿಬಿರದಲ್ಲಿ ಯುವಕರೇ ಹೆಚ್ಚಾಗಿ ಭಾಗವಹಿಸಿದ್ದು ಸೀಮಿತ ಜನರಿಗೆ ಮಾತ್ರಾ ಅವಕಾಶ ಮಾಡಲಾಗಿತ್ತು. ಸುಮಾರು 50 ಕ್ಕೂ ಹೆಚ್ಚು ಅರ್ಜಿಗಳು ಬಂದಿದ್ದವು. ಅದರಲ್ಲಿ  20 ಜನ ಶಿಬಿರಾರ್ಥಿಗಳಿಗೆ ಮಾತ್ರವೇ ಈ ಬಾರಿ ಅವಕಾಶ ಲಭ್ಯವಾಗಿದೆ. ಮುಂದಿನ ದಿನಗಳಲ್ಲಿ ಇಂತಹ ತಾಂತ್ರಿಕ ಶಿಬಿರಗಳು ಹಳ್ಳಿಗಳಲ್ಲಿ  ಆರಂಭವಾಗಬೇಕಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ

ವಿಶ್ವ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ  ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಬಾಲಕಿ ಋತ್ವಿ ಯೋಗ…

4 hours ago

ರಾಜ್ಯದ ಮಾವು ಬೆಳೆಗಾರರ ನೆರವಿಗೆ ಮನವಿ | 3 ಲಕ್ಷ ಸಿಬ್ಬಂದಿಗಳಿಗೆ ನಗದುರಹಿತ  ಆರೋಗ್ಯ ಯೋಜನೆ | ರಾಜ್ಯದ ದುರ್ಗಮ ಪ್ರದೇಶಗಳಿಗೆ ಸಂಚಾರಿ ಆರೋಗ್ಯ ಘಟಕ |

ರಾಜ್ಯದ ಮಾವು  ಬೆಳೆಗಾರರು ಸಂಕಷ್ಟದಲ್ಲಿದ್ದು, ಅವರ ನೆರವಿಗೆ   ಧಾವಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ…

4 hours ago

ಭಾರತದ ಕಾಫಿ ರಫ್ತು ಶೇಕಡ 40 ರಷ್ಟು ವೃದ್ಧಿ | ಒಡಿಶಾ, ಈಶಾನ್ಯ ರಾಜ್ಯಗಳಲ್ಲಿ ಕಾಫಿ ಬೆಳೆಯುವ ಬಗ್ಗೆ ಪ್ರಯೋಗ

ಭಾರತದ ಕಾಫಿ ರಫ್ತು ಕಳೆದ 5 ವರ್ಷದಲ್ಲಿ ಗಣನೀಯ ಬೆಳವಣಿಗೆ ಸಾಧಿಸಿದ್ದು, ಶೇಕಡ…

4 hours ago

ಏಕೆ ಕೆಲವು ಹಿಂಡಿ ದನಗಳಿಗೆ ಹಿಡಿಸುವುದಿಲ್ಲ…?

ಮೊನ್ನೆ ತಾನೆ ಆತ್ಮೀಯ ಮಿತ್ರರೊಬ್ಬರ ಮನೆಗೆ ಹೋಗಿದ್ದೆ. ಮನೆಯ ಹಟ್ಟಿಯಲ್ಲಿ ದೇವನಿ ಜಾತಿಯ…

5 hours ago

ಒಂದು ಮೊಟ್ಟೆಯ ಕತೆ | ಮಕ್ಕಳಿಗೆ ಸರ್ಕಾರ ನೀಡುವ ಮೊಟ್ಟೆ ಶಿಕ್ಷಕರಿಗೆ ತಲೆನೋವು ಏಕೆ..?

ಸರ್ಕಾರವು ಶಾಲಾ ಮಕ್ಕಳಿಗೆ ಬಿಸಿಯೂಟದ ಜೊತೆ ನೀಡುವ ಮೊಟ್ಟೆ ಈಗ ಶಿಕ್ಷಕರಿಗೆ ತಲೆನೋವಾಗುತ್ತಿದೆ.…

6 hours ago

ಹೀಗೊಂದು ಸೇವೆ… ನಮಗೂ-ನಿಮಗೂ ಮಾಡಬಹುದು…!

ನಮ್ಮ ಊರಿನಲ್ಲೂ ನಾವು ಮಾಡಬಹುದಾದ ಸೇವಾ ಕಾರ್ಯ ಇದು.  ಊರಿನ ಆಸು ಪಾಸಿನಲ್ಲಿರುವ…

7 hours ago