Advertisement
MIRROR FOCUS

ಅಡಿಕೆ ಕೌಶಲ್ಯ ಪಡೆ | ದೋಟಿ ಮೂಲಕ ಅಡಿಕೆ ಕೊಯ್ಲು-ಸಿಂಪಡಣೆ ತರಬೇತಿ ಪಡೆಯುವ ಶಿಬಿರಾರ್ಥಿಗಳು |

Share

ಕ್ಯಾಂಪ್ಕೋ ನೇತೃತ್ವದಲ್ಲಿ ಅಡಿಕೆ ಕೌಶಲ್ಯ ಪಡೆ ಸಜ್ಜಾಗುತ್ತಿದೆ. ಕಳೆದ ಬಾರಿ ಆರಂಭವಾದ ಅಡಿಕೆ ಕೌಶಲ್ಯ ಪಡೆ ಈ ಬಾರಿ ಒಂದು ಹೆಜ್ಜೆ ಮುಂದೆ ಹೋಗಿ ದೋಟಿಯ ಮೂಲಕ ಅಡಿಕೆ ಕೊಯ್ಲು ಹಾಗೂ ಔಷಧಿ ಸಿಂಪಡಣೆಯ ಬಗ್ಗೆ ತರಬೇತಿ ಶಿಬಿರ ಆಯೋಜಿಸಿದೆ. ಮೂರು ದಿನಗಳ ಕಾಲ ವಿಟ್ಲದಲ್ಲಿ ಈ ಶಿಬಿರ ನಡೆಯಲಿದೆ.

Advertisement
Advertisement
Advertisement
Advertisement
Advertisement

ವಿಟ್ಲದ ಸಿಪಿಸಿಆರ್‌ಐ ವಠಾರದಲ್ಲಿ ಕ್ಯಾಂಪ್ಕೋ ನೇತೃತ್ವದಲ್ಲಿ ಅಡಿಕೆ ಪತ್ರಿಕೆ, ಸಿಪಿಸಿಆರ್‌ಐ ಹಾಗೂ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಆಶ್ರಯದಲ್ಲಿ ಆಯೋಜನಗೊಂಡ ಅಡಿಕೆ ಕೌಶಲ್ಯ ಪಡೆಯ ಫೈಬರ್‌ದೋಟಿ ಮೂಲಕ ಅಡಿಕೆ ಕೊಯ್ಲು ಮತ್ತು ಸಿಂಪಡಣೆ ತರಬೇತಿ ಶಿಬಿರದಲ್ಲಿ 19  ಮಂದಿ ಶಿಬಿರಾರ್ಥಿಗಳು ಇದ್ದಾರೆ. ಪೈಬರ್‌ ದೋಟಿಯ ಮೂಲಕ ಅಡಿಕೆ ಕೊಯ್ಲು ಮಾಡುವ ವಿಧಾನಗಳು ಹಾಗೂ ದೋಟಿಯನ್ನು ಸುಲಭವಾಗಿ ಆಧರಿಸುವ ಹಾಗೂ ತಾಂತ್ರಿಕ ವಿಧಾನಗಳನ್ನು ತಿಳಿಸಿಕೊಡಲಾಗುತ್ತಿದೆ. ಅದರ ಜೊತೆಗೆ ವಿದ್ಯುತ್‌ ಅವಘಡ ತಪ್ಪಿಸುವುದು , ಸೂಕ್ತ ಮುಂಜಾಗ್ರತಾ ಕ್ರಮಗಳು ಇತ್ಯಾದಿಗಳನ್ನು ತಿಳಿಸಲಾಗುತ್ತಿದೆ. ವಿಶೇಷವಾಗಿ ತರಬೇತಿ ನೀಡಲು ಉತ್ತರ ಕನ್ನಡ ಜಿಲ್ಲೆಯ ಮುರೂರು ಕಲ್ಲಬ್ಬೆಯ ರಾಜೇಶ್‌ಭಟ್‌, ಆರ್‌ಜಿ ಹೆಗಡೆ , ರಾಜು ಶೆಟ್ಟಿ, ರಮೇಶ್ ಭಟ್ ಆಗಮಿಸಿದ್ದಾರೆ. ಅವರ ಜೊತೆಗೆ ಸ್ಥಳೀಯವಾಗಿ ಕೆಲವು ವರ್ಷಗಳಿಂದ ಫೈಬರ್‌ ದೋಟಿ ಬಳಕೆ ಮಾಡುತ್ತಿರುವ ಮೈಕೆ ಗಣೇಶ್‌ ಭಟ್‌ ಅವರೂ ಇದ್ದಾರೆ.

ದೋಟಿ ಬಳಕೆಯ ವಿಧಾನಗಳಲ್ಲಿ ಪ್ರಮುಖವಾಗಿ ದೈಹಿಕ ಶ್ರಮ ಕಡಿಮೆಯಾಗುವಂತೆ ಹಾಗೂ ಕತ್ತು ನೋವು ಇತ್ಯಾದಿಗಳಿಂದ ದೂರ ಇರುವ ಬಗ್ಗೆಯೂ ಮಾಹಿತಿ ನೀಡಲಾಗುತ್ತಿದೆ. ಪೈಬರ್‌ ದೋಟಿಯು ಮುಂದಿನ ದಿನಗಳಲ್ಲಿ  ಅನಿವಾರ್ಯವಾಗುವ ಸ್ಥಿತಿ ಅಡಿಕೆ ಬೆಳೆಗಾರರಿಗೆ ಬರಲಿದೆ. ಇದಕ್ಕಾಗಿ ಸೂಕ್ತ ರೀತಿಯ ತರಬೇತಿ ಅಗತ್ಯವಾಗಿದೆ ಎನ್ನುವುದು ಅಭಿಪ್ರಾಯವಾಗಿದೆ. ಶಿಬಿರದಲ್ಲಿ ಯುವಕರೇ ಹೆಚ್ಚಾಗಿ ಭಾಗವಹಿಸಿದ್ದು ಸೀಮಿತ ಜನರಿಗೆ ಮಾತ್ರಾ ಅವಕಾಶ ಮಾಡಲಾಗಿತ್ತು. ಸುಮಾರು 50 ಕ್ಕೂ ಹೆಚ್ಚು ಅರ್ಜಿಗಳು ಬಂದಿದ್ದವು. ಅದರಲ್ಲಿ  20 ಜನ ಶಿಬಿರಾರ್ಥಿಗಳಿಗೆ ಮಾತ್ರವೇ ಈ ಬಾರಿ ಅವಕಾಶ ಲಭ್ಯವಾಗಿದೆ. ಮುಂದಿನ ದಿನಗಳಲ್ಲಿ ಇಂತಹ ತಾಂತ್ರಿಕ ಶಿಬಿರಗಳು ಹಳ್ಳಿಗಳಲ್ಲಿ  ಆರಂಭವಾಗಬೇಕಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

9 hours ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

24 hours ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

1 day ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

2 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

2 days ago

ಬೆಂಗಳೂರಲ್ಲಿ ದಾಖಲೆ ತಾಪಮಾನ | ಬೇಸಿಗೆಯಲ್ಲಿ ಈ ಬಾರಿ ಉಷ್ಣಾಂಶ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ

ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…

2 days ago