Advertisement
MIRROR FOCUS

ಅಡಿಕೆ ಕೌಶಲ್ಯ ಪಡೆ | ದೋಟಿ ಮೂಲಕ ಅಡಿಕೆ ಕೊಯ್ಲು-ಸಿಂಪಡಣೆ ತರಬೇತಿ ಪಡೆಯುವ ಶಿಬಿರಾರ್ಥಿಗಳು |

Share

ಕ್ಯಾಂಪ್ಕೋ ನೇತೃತ್ವದಲ್ಲಿ ಅಡಿಕೆ ಕೌಶಲ್ಯ ಪಡೆ ಸಜ್ಜಾಗುತ್ತಿದೆ. ಕಳೆದ ಬಾರಿ ಆರಂಭವಾದ ಅಡಿಕೆ ಕೌಶಲ್ಯ ಪಡೆ ಈ ಬಾರಿ ಒಂದು ಹೆಜ್ಜೆ ಮುಂದೆ ಹೋಗಿ ದೋಟಿಯ ಮೂಲಕ ಅಡಿಕೆ ಕೊಯ್ಲು ಹಾಗೂ ಔಷಧಿ ಸಿಂಪಡಣೆಯ ಬಗ್ಗೆ ತರಬೇತಿ ಶಿಬಿರ ಆಯೋಜಿಸಿದೆ. ಮೂರು ದಿನಗಳ ಕಾಲ ವಿಟ್ಲದಲ್ಲಿ ಈ ಶಿಬಿರ ನಡೆಯಲಿದೆ.

ವಿಟ್ಲದ ಸಿಪಿಸಿಆರ್‌ಐ ವಠಾರದಲ್ಲಿ ಕ್ಯಾಂಪ್ಕೋ ನೇತೃತ್ವದಲ್ಲಿ ಅಡಿಕೆ ಪತ್ರಿಕೆ, ಸಿಪಿಸಿಆರ್‌ಐ ಹಾಗೂ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಆಶ್ರಯದಲ್ಲಿ ಆಯೋಜನಗೊಂಡ ಅಡಿಕೆ ಕೌಶಲ್ಯ ಪಡೆಯ ಫೈಬರ್‌ದೋಟಿ ಮೂಲಕ ಅಡಿಕೆ ಕೊಯ್ಲು ಮತ್ತು ಸಿಂಪಡಣೆ ತರಬೇತಿ ಶಿಬಿರದಲ್ಲಿ 19  ಮಂದಿ ಶಿಬಿರಾರ್ಥಿಗಳು ಇದ್ದಾರೆ. ಪೈಬರ್‌ ದೋಟಿಯ ಮೂಲಕ ಅಡಿಕೆ ಕೊಯ್ಲು ಮಾಡುವ ವಿಧಾನಗಳು ಹಾಗೂ ದೋಟಿಯನ್ನು ಸುಲಭವಾಗಿ ಆಧರಿಸುವ ಹಾಗೂ ತಾಂತ್ರಿಕ ವಿಧಾನಗಳನ್ನು ತಿಳಿಸಿಕೊಡಲಾಗುತ್ತಿದೆ. ಅದರ ಜೊತೆಗೆ ವಿದ್ಯುತ್‌ ಅವಘಡ ತಪ್ಪಿಸುವುದು , ಸೂಕ್ತ ಮುಂಜಾಗ್ರತಾ ಕ್ರಮಗಳು ಇತ್ಯಾದಿಗಳನ್ನು ತಿಳಿಸಲಾಗುತ್ತಿದೆ. ವಿಶೇಷವಾಗಿ ತರಬೇತಿ ನೀಡಲು ಉತ್ತರ ಕನ್ನಡ ಜಿಲ್ಲೆಯ ಮುರೂರು ಕಲ್ಲಬ್ಬೆಯ ರಾಜೇಶ್‌ಭಟ್‌, ಆರ್‌ಜಿ ಹೆಗಡೆ , ರಾಜು ಶೆಟ್ಟಿ, ರಮೇಶ್ ಭಟ್ ಆಗಮಿಸಿದ್ದಾರೆ. ಅವರ ಜೊತೆಗೆ ಸ್ಥಳೀಯವಾಗಿ ಕೆಲವು ವರ್ಷಗಳಿಂದ ಫೈಬರ್‌ ದೋಟಿ ಬಳಕೆ ಮಾಡುತ್ತಿರುವ ಮೈಕೆ ಗಣೇಶ್‌ ಭಟ್‌ ಅವರೂ ಇದ್ದಾರೆ.

ದೋಟಿ ಬಳಕೆಯ ವಿಧಾನಗಳಲ್ಲಿ ಪ್ರಮುಖವಾಗಿ ದೈಹಿಕ ಶ್ರಮ ಕಡಿಮೆಯಾಗುವಂತೆ ಹಾಗೂ ಕತ್ತು ನೋವು ಇತ್ಯಾದಿಗಳಿಂದ ದೂರ ಇರುವ ಬಗ್ಗೆಯೂ ಮಾಹಿತಿ ನೀಡಲಾಗುತ್ತಿದೆ. ಪೈಬರ್‌ ದೋಟಿಯು ಮುಂದಿನ ದಿನಗಳಲ್ಲಿ  ಅನಿವಾರ್ಯವಾಗುವ ಸ್ಥಿತಿ ಅಡಿಕೆ ಬೆಳೆಗಾರರಿಗೆ ಬರಲಿದೆ. ಇದಕ್ಕಾಗಿ ಸೂಕ್ತ ರೀತಿಯ ತರಬೇತಿ ಅಗತ್ಯವಾಗಿದೆ ಎನ್ನುವುದು ಅಭಿಪ್ರಾಯವಾಗಿದೆ. ಶಿಬಿರದಲ್ಲಿ ಯುವಕರೇ ಹೆಚ್ಚಾಗಿ ಭಾಗವಹಿಸಿದ್ದು ಸೀಮಿತ ಜನರಿಗೆ ಮಾತ್ರಾ ಅವಕಾಶ ಮಾಡಲಾಗಿತ್ತು. ಸುಮಾರು 50 ಕ್ಕೂ ಹೆಚ್ಚು ಅರ್ಜಿಗಳು ಬಂದಿದ್ದವು. ಅದರಲ್ಲಿ  20 ಜನ ಶಿಬಿರಾರ್ಥಿಗಳಿಗೆ ಮಾತ್ರವೇ ಈ ಬಾರಿ ಅವಕಾಶ ಲಭ್ಯವಾಗಿದೆ. ಮುಂದಿನ ದಿನಗಳಲ್ಲಿ ಇಂತಹ ತಾಂತ್ರಿಕ ಶಿಬಿರಗಳು ಹಳ್ಳಿಗಳಲ್ಲಿ  ಆರಂಭವಾಗಬೇಕಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

9 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

9 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

9 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

9 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

19 hours ago

ಕಾಡು ಪ್ರಾಣಿಗಳ ಹಾವಳಿ: ಕೃಷಿಕರು ಪಾಠ ಕಲಿಯದಿದ್ದರೆ ಕೃಷಿ ಭೂಮಿಯೇ ಉಳಿಯದು

ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…

20 hours ago