Advertisement
MIRROR FOCUS

ಅಡಿಕೆ ಕೌಶಲ್ಯ ಪಡೆ | ದೋಟಿ ಮೂಲಕ ಅಡಿಕೆ ಕೊಯ್ಲು-ಸಿಂಪಡಣೆ ತರಬೇತಿ ಪಡೆಯುವ ಶಿಬಿರಾರ್ಥಿಗಳು |

Share

ಕ್ಯಾಂಪ್ಕೋ ನೇತೃತ್ವದಲ್ಲಿ ಅಡಿಕೆ ಕೌಶಲ್ಯ ಪಡೆ ಸಜ್ಜಾಗುತ್ತಿದೆ. ಕಳೆದ ಬಾರಿ ಆರಂಭವಾದ ಅಡಿಕೆ ಕೌಶಲ್ಯ ಪಡೆ ಈ ಬಾರಿ ಒಂದು ಹೆಜ್ಜೆ ಮುಂದೆ ಹೋಗಿ ದೋಟಿಯ ಮೂಲಕ ಅಡಿಕೆ ಕೊಯ್ಲು ಹಾಗೂ ಔಷಧಿ ಸಿಂಪಡಣೆಯ ಬಗ್ಗೆ ತರಬೇತಿ ಶಿಬಿರ ಆಯೋಜಿಸಿದೆ. ಮೂರು ದಿನಗಳ ಕಾಲ ವಿಟ್ಲದಲ್ಲಿ ಈ ಶಿಬಿರ ನಡೆಯಲಿದೆ.

ವಿಟ್ಲದ ಸಿಪಿಸಿಆರ್‌ಐ ವಠಾರದಲ್ಲಿ ಕ್ಯಾಂಪ್ಕೋ ನೇತೃತ್ವದಲ್ಲಿ ಅಡಿಕೆ ಪತ್ರಿಕೆ, ಸಿಪಿಸಿಆರ್‌ಐ ಹಾಗೂ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಆಶ್ರಯದಲ್ಲಿ ಆಯೋಜನಗೊಂಡ ಅಡಿಕೆ ಕೌಶಲ್ಯ ಪಡೆಯ ಫೈಬರ್‌ದೋಟಿ ಮೂಲಕ ಅಡಿಕೆ ಕೊಯ್ಲು ಮತ್ತು ಸಿಂಪಡಣೆ ತರಬೇತಿ ಶಿಬಿರದಲ್ಲಿ 19  ಮಂದಿ ಶಿಬಿರಾರ್ಥಿಗಳು ಇದ್ದಾರೆ. ಪೈಬರ್‌ ದೋಟಿಯ ಮೂಲಕ ಅಡಿಕೆ ಕೊಯ್ಲು ಮಾಡುವ ವಿಧಾನಗಳು ಹಾಗೂ ದೋಟಿಯನ್ನು ಸುಲಭವಾಗಿ ಆಧರಿಸುವ ಹಾಗೂ ತಾಂತ್ರಿಕ ವಿಧಾನಗಳನ್ನು ತಿಳಿಸಿಕೊಡಲಾಗುತ್ತಿದೆ. ಅದರ ಜೊತೆಗೆ ವಿದ್ಯುತ್‌ ಅವಘಡ ತಪ್ಪಿಸುವುದು , ಸೂಕ್ತ ಮುಂಜಾಗ್ರತಾ ಕ್ರಮಗಳು ಇತ್ಯಾದಿಗಳನ್ನು ತಿಳಿಸಲಾಗುತ್ತಿದೆ. ವಿಶೇಷವಾಗಿ ತರಬೇತಿ ನೀಡಲು ಉತ್ತರ ಕನ್ನಡ ಜಿಲ್ಲೆಯ ಮುರೂರು ಕಲ್ಲಬ್ಬೆಯ ರಾಜೇಶ್‌ಭಟ್‌, ಆರ್‌ಜಿ ಹೆಗಡೆ , ರಾಜು ಶೆಟ್ಟಿ, ರಮೇಶ್ ಭಟ್ ಆಗಮಿಸಿದ್ದಾರೆ. ಅವರ ಜೊತೆಗೆ ಸ್ಥಳೀಯವಾಗಿ ಕೆಲವು ವರ್ಷಗಳಿಂದ ಫೈಬರ್‌ ದೋಟಿ ಬಳಕೆ ಮಾಡುತ್ತಿರುವ ಮೈಕೆ ಗಣೇಶ್‌ ಭಟ್‌ ಅವರೂ ಇದ್ದಾರೆ.

ದೋಟಿ ಬಳಕೆಯ ವಿಧಾನಗಳಲ್ಲಿ ಪ್ರಮುಖವಾಗಿ ದೈಹಿಕ ಶ್ರಮ ಕಡಿಮೆಯಾಗುವಂತೆ ಹಾಗೂ ಕತ್ತು ನೋವು ಇತ್ಯಾದಿಗಳಿಂದ ದೂರ ಇರುವ ಬಗ್ಗೆಯೂ ಮಾಹಿತಿ ನೀಡಲಾಗುತ್ತಿದೆ. ಪೈಬರ್‌ ದೋಟಿಯು ಮುಂದಿನ ದಿನಗಳಲ್ಲಿ  ಅನಿವಾರ್ಯವಾಗುವ ಸ್ಥಿತಿ ಅಡಿಕೆ ಬೆಳೆಗಾರರಿಗೆ ಬರಲಿದೆ. ಇದಕ್ಕಾಗಿ ಸೂಕ್ತ ರೀತಿಯ ತರಬೇತಿ ಅಗತ್ಯವಾಗಿದೆ ಎನ್ನುವುದು ಅಭಿಪ್ರಾಯವಾಗಿದೆ. ಶಿಬಿರದಲ್ಲಿ ಯುವಕರೇ ಹೆಚ್ಚಾಗಿ ಭಾಗವಹಿಸಿದ್ದು ಸೀಮಿತ ಜನರಿಗೆ ಮಾತ್ರಾ ಅವಕಾಶ ಮಾಡಲಾಗಿತ್ತು. ಸುಮಾರು 50 ಕ್ಕೂ ಹೆಚ್ಚು ಅರ್ಜಿಗಳು ಬಂದಿದ್ದವು. ಅದರಲ್ಲಿ  20 ಜನ ಶಿಬಿರಾರ್ಥಿಗಳಿಗೆ ಮಾತ್ರವೇ ಈ ಬಾರಿ ಅವಕಾಶ ಲಭ್ಯವಾಗಿದೆ. ಮುಂದಿನ ದಿನಗಳಲ್ಲಿ ಇಂತಹ ತಾಂತ್ರಿಕ ಶಿಬಿರಗಳು ಹಳ್ಳಿಗಳಲ್ಲಿ  ಆರಂಭವಾಗಬೇಕಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

7 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

7 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

8 hours ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

12 hours ago

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

1 day ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

1 day ago