Advertisement
MIRROR FOCUS

ಅಡಿಕೆ ಕೌಶಲ್ಯ ಪಡೆ | ದೋಟಿ ಮೂಲಕ ಅಡಿಕೆ ಕೊಯ್ಲು-ಸಿಂಪಡಣೆ ತರಬೇತಿ ಪಡೆಯುವ ಶಿಬಿರಾರ್ಥಿಗಳು |

Share

ಕ್ಯಾಂಪ್ಕೋ ನೇತೃತ್ವದಲ್ಲಿ ಅಡಿಕೆ ಕೌಶಲ್ಯ ಪಡೆ ಸಜ್ಜಾಗುತ್ತಿದೆ. ಕಳೆದ ಬಾರಿ ಆರಂಭವಾದ ಅಡಿಕೆ ಕೌಶಲ್ಯ ಪಡೆ ಈ ಬಾರಿ ಒಂದು ಹೆಜ್ಜೆ ಮುಂದೆ ಹೋಗಿ ದೋಟಿಯ ಮೂಲಕ ಅಡಿಕೆ ಕೊಯ್ಲು ಹಾಗೂ ಔಷಧಿ ಸಿಂಪಡಣೆಯ ಬಗ್ಗೆ ತರಬೇತಿ ಶಿಬಿರ ಆಯೋಜಿಸಿದೆ. ಮೂರು ದಿನಗಳ ಕಾಲ ವಿಟ್ಲದಲ್ಲಿ ಈ ಶಿಬಿರ ನಡೆಯಲಿದೆ.

ವಿಟ್ಲದ ಸಿಪಿಸಿಆರ್‌ಐ ವಠಾರದಲ್ಲಿ ಕ್ಯಾಂಪ್ಕೋ ನೇತೃತ್ವದಲ್ಲಿ ಅಡಿಕೆ ಪತ್ರಿಕೆ, ಸಿಪಿಸಿಆರ್‌ಐ ಹಾಗೂ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಆಶ್ರಯದಲ್ಲಿ ಆಯೋಜನಗೊಂಡ ಅಡಿಕೆ ಕೌಶಲ್ಯ ಪಡೆಯ ಫೈಬರ್‌ದೋಟಿ ಮೂಲಕ ಅಡಿಕೆ ಕೊಯ್ಲು ಮತ್ತು ಸಿಂಪಡಣೆ ತರಬೇತಿ ಶಿಬಿರದಲ್ಲಿ 19  ಮಂದಿ ಶಿಬಿರಾರ್ಥಿಗಳು ಇದ್ದಾರೆ. ಪೈಬರ್‌ ದೋಟಿಯ ಮೂಲಕ ಅಡಿಕೆ ಕೊಯ್ಲು ಮಾಡುವ ವಿಧಾನಗಳು ಹಾಗೂ ದೋಟಿಯನ್ನು ಸುಲಭವಾಗಿ ಆಧರಿಸುವ ಹಾಗೂ ತಾಂತ್ರಿಕ ವಿಧಾನಗಳನ್ನು ತಿಳಿಸಿಕೊಡಲಾಗುತ್ತಿದೆ. ಅದರ ಜೊತೆಗೆ ವಿದ್ಯುತ್‌ ಅವಘಡ ತಪ್ಪಿಸುವುದು , ಸೂಕ್ತ ಮುಂಜಾಗ್ರತಾ ಕ್ರಮಗಳು ಇತ್ಯಾದಿಗಳನ್ನು ತಿಳಿಸಲಾಗುತ್ತಿದೆ. ವಿಶೇಷವಾಗಿ ತರಬೇತಿ ನೀಡಲು ಉತ್ತರ ಕನ್ನಡ ಜಿಲ್ಲೆಯ ಮುರೂರು ಕಲ್ಲಬ್ಬೆಯ ರಾಜೇಶ್‌ಭಟ್‌, ಆರ್‌ಜಿ ಹೆಗಡೆ , ರಾಜು ಶೆಟ್ಟಿ, ರಮೇಶ್ ಭಟ್ ಆಗಮಿಸಿದ್ದಾರೆ. ಅವರ ಜೊತೆಗೆ ಸ್ಥಳೀಯವಾಗಿ ಕೆಲವು ವರ್ಷಗಳಿಂದ ಫೈಬರ್‌ ದೋಟಿ ಬಳಕೆ ಮಾಡುತ್ತಿರುವ ಮೈಕೆ ಗಣೇಶ್‌ ಭಟ್‌ ಅವರೂ ಇದ್ದಾರೆ.

ದೋಟಿ ಬಳಕೆಯ ವಿಧಾನಗಳಲ್ಲಿ ಪ್ರಮುಖವಾಗಿ ದೈಹಿಕ ಶ್ರಮ ಕಡಿಮೆಯಾಗುವಂತೆ ಹಾಗೂ ಕತ್ತು ನೋವು ಇತ್ಯಾದಿಗಳಿಂದ ದೂರ ಇರುವ ಬಗ್ಗೆಯೂ ಮಾಹಿತಿ ನೀಡಲಾಗುತ್ತಿದೆ. ಪೈಬರ್‌ ದೋಟಿಯು ಮುಂದಿನ ದಿನಗಳಲ್ಲಿ  ಅನಿವಾರ್ಯವಾಗುವ ಸ್ಥಿತಿ ಅಡಿಕೆ ಬೆಳೆಗಾರರಿಗೆ ಬರಲಿದೆ. ಇದಕ್ಕಾಗಿ ಸೂಕ್ತ ರೀತಿಯ ತರಬೇತಿ ಅಗತ್ಯವಾಗಿದೆ ಎನ್ನುವುದು ಅಭಿಪ್ರಾಯವಾಗಿದೆ. ಶಿಬಿರದಲ್ಲಿ ಯುವಕರೇ ಹೆಚ್ಚಾಗಿ ಭಾಗವಹಿಸಿದ್ದು ಸೀಮಿತ ಜನರಿಗೆ ಮಾತ್ರಾ ಅವಕಾಶ ಮಾಡಲಾಗಿತ್ತು. ಸುಮಾರು 50 ಕ್ಕೂ ಹೆಚ್ಚು ಅರ್ಜಿಗಳು ಬಂದಿದ್ದವು. ಅದರಲ್ಲಿ  20 ಜನ ಶಿಬಿರಾರ್ಥಿಗಳಿಗೆ ಮಾತ್ರವೇ ಈ ಬಾರಿ ಅವಕಾಶ ಲಭ್ಯವಾಗಿದೆ. ಮುಂದಿನ ದಿನಗಳಲ್ಲಿ ಇಂತಹ ತಾಂತ್ರಿಕ ಶಿಬಿರಗಳು ಹಳ್ಳಿಗಳಲ್ಲಿ  ಆರಂಭವಾಗಬೇಕಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

3 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

3 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

3 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

4 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

5 days ago