Advertisement
MIRROR FOCUS

ಅಡಿಕೆ ಕೌಶಲ್ಯ ಪಡೆ | ದೋಟಿ ಮೂಲಕ ಅಡಿಕೆ ಕೊಯ್ಲು-ಸಿಂಪಡಣೆ ತರಬೇತಿ ಪಡೆಯುವ ಶಿಬಿರಾರ್ಥಿಗಳು |

Share

ಕ್ಯಾಂಪ್ಕೋ ನೇತೃತ್ವದಲ್ಲಿ ಅಡಿಕೆ ಕೌಶಲ್ಯ ಪಡೆ ಸಜ್ಜಾಗುತ್ತಿದೆ. ಕಳೆದ ಬಾರಿ ಆರಂಭವಾದ ಅಡಿಕೆ ಕೌಶಲ್ಯ ಪಡೆ ಈ ಬಾರಿ ಒಂದು ಹೆಜ್ಜೆ ಮುಂದೆ ಹೋಗಿ ದೋಟಿಯ ಮೂಲಕ ಅಡಿಕೆ ಕೊಯ್ಲು ಹಾಗೂ ಔಷಧಿ ಸಿಂಪಡಣೆಯ ಬಗ್ಗೆ ತರಬೇತಿ ಶಿಬಿರ ಆಯೋಜಿಸಿದೆ. ಮೂರು ದಿನಗಳ ಕಾಲ ವಿಟ್ಲದಲ್ಲಿ ಈ ಶಿಬಿರ ನಡೆಯಲಿದೆ.

ವಿಟ್ಲದ ಸಿಪಿಸಿಆರ್‌ಐ ವಠಾರದಲ್ಲಿ ಕ್ಯಾಂಪ್ಕೋ ನೇತೃತ್ವದಲ್ಲಿ ಅಡಿಕೆ ಪತ್ರಿಕೆ, ಸಿಪಿಸಿಆರ್‌ಐ ಹಾಗೂ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಆಶ್ರಯದಲ್ಲಿ ಆಯೋಜನಗೊಂಡ ಅಡಿಕೆ ಕೌಶಲ್ಯ ಪಡೆಯ ಫೈಬರ್‌ದೋಟಿ ಮೂಲಕ ಅಡಿಕೆ ಕೊಯ್ಲು ಮತ್ತು ಸಿಂಪಡಣೆ ತರಬೇತಿ ಶಿಬಿರದಲ್ಲಿ 19  ಮಂದಿ ಶಿಬಿರಾರ್ಥಿಗಳು ಇದ್ದಾರೆ. ಪೈಬರ್‌ ದೋಟಿಯ ಮೂಲಕ ಅಡಿಕೆ ಕೊಯ್ಲು ಮಾಡುವ ವಿಧಾನಗಳು ಹಾಗೂ ದೋಟಿಯನ್ನು ಸುಲಭವಾಗಿ ಆಧರಿಸುವ ಹಾಗೂ ತಾಂತ್ರಿಕ ವಿಧಾನಗಳನ್ನು ತಿಳಿಸಿಕೊಡಲಾಗುತ್ತಿದೆ. ಅದರ ಜೊತೆಗೆ ವಿದ್ಯುತ್‌ ಅವಘಡ ತಪ್ಪಿಸುವುದು , ಸೂಕ್ತ ಮುಂಜಾಗ್ರತಾ ಕ್ರಮಗಳು ಇತ್ಯಾದಿಗಳನ್ನು ತಿಳಿಸಲಾಗುತ್ತಿದೆ. ವಿಶೇಷವಾಗಿ ತರಬೇತಿ ನೀಡಲು ಉತ್ತರ ಕನ್ನಡ ಜಿಲ್ಲೆಯ ಮುರೂರು ಕಲ್ಲಬ್ಬೆಯ ರಾಜೇಶ್‌ಭಟ್‌, ಆರ್‌ಜಿ ಹೆಗಡೆ , ರಾಜು ಶೆಟ್ಟಿ, ರಮೇಶ್ ಭಟ್ ಆಗಮಿಸಿದ್ದಾರೆ. ಅವರ ಜೊತೆಗೆ ಸ್ಥಳೀಯವಾಗಿ ಕೆಲವು ವರ್ಷಗಳಿಂದ ಫೈಬರ್‌ ದೋಟಿ ಬಳಕೆ ಮಾಡುತ್ತಿರುವ ಮೈಕೆ ಗಣೇಶ್‌ ಭಟ್‌ ಅವರೂ ಇದ್ದಾರೆ.

ದೋಟಿ ಬಳಕೆಯ ವಿಧಾನಗಳಲ್ಲಿ ಪ್ರಮುಖವಾಗಿ ದೈಹಿಕ ಶ್ರಮ ಕಡಿಮೆಯಾಗುವಂತೆ ಹಾಗೂ ಕತ್ತು ನೋವು ಇತ್ಯಾದಿಗಳಿಂದ ದೂರ ಇರುವ ಬಗ್ಗೆಯೂ ಮಾಹಿತಿ ನೀಡಲಾಗುತ್ತಿದೆ. ಪೈಬರ್‌ ದೋಟಿಯು ಮುಂದಿನ ದಿನಗಳಲ್ಲಿ  ಅನಿವಾರ್ಯವಾಗುವ ಸ್ಥಿತಿ ಅಡಿಕೆ ಬೆಳೆಗಾರರಿಗೆ ಬರಲಿದೆ. ಇದಕ್ಕಾಗಿ ಸೂಕ್ತ ರೀತಿಯ ತರಬೇತಿ ಅಗತ್ಯವಾಗಿದೆ ಎನ್ನುವುದು ಅಭಿಪ್ರಾಯವಾಗಿದೆ. ಶಿಬಿರದಲ್ಲಿ ಯುವಕರೇ ಹೆಚ್ಚಾಗಿ ಭಾಗವಹಿಸಿದ್ದು ಸೀಮಿತ ಜನರಿಗೆ ಮಾತ್ರಾ ಅವಕಾಶ ಮಾಡಲಾಗಿತ್ತು. ಸುಮಾರು 50 ಕ್ಕೂ ಹೆಚ್ಚು ಅರ್ಜಿಗಳು ಬಂದಿದ್ದವು. ಅದರಲ್ಲಿ  20 ಜನ ಶಿಬಿರಾರ್ಥಿಗಳಿಗೆ ಮಾತ್ರವೇ ಈ ಬಾರಿ ಅವಕಾಶ ಲಭ್ಯವಾಗಿದೆ. ಮುಂದಿನ ದಿನಗಳಲ್ಲಿ ಇಂತಹ ತಾಂತ್ರಿಕ ಶಿಬಿರಗಳು ಹಳ್ಳಿಗಳಲ್ಲಿ  ಆರಂಭವಾಗಬೇಕಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

1 day ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

2 days ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

2 days ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

2 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

3 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

3 days ago