ರಾಜ್ಯದ ಹಲವೆಡೆ ಜಾನುವಾರುಗಳಲ್ಲಿ ಹರಡುತ್ತಿರುವ ಚರ್ಮ ಗಂಟು ಕಾಯಿಲೆ ವೈರಾಣುವನ್ನು ನಿಯಂತ್ರಿಸಲು ಲಸಿಕೆ ಅಭಿಯಾನದ ಭಾಗವಾಗಿ ದಕ್ಷಿಣ ಕನ್ನಡ ಜಿಲ್ಲೆಗೆ 20,000 ಲಸಿಕೆ ಹಂಚಿಕೆಯಾಗಿದೆ.
ಬೆಂಗಳೂರಿನಿಂದ ಸೋಮವಾರ ಸರಬರಾಜು ಆಗಲಿದ್ದು, ಮಂಗಳವಾರದಿಂದ ವಿತರಣೆ ನಡೆಯಲಿದೆ.
ಭಾರತ ಸರ್ಕಾರದ ಮಾರ್ಗಸೂಚಿಯಂತೆ ರೋಗ ಕಾಣಿಸಿಕೊಂಡ 5 ಕಿ.ಮೀ. ಸುತ್ತಳತೆಯಲ್ಲಿ ಆರೋಗ್ಯವಂತ ಜಾನುವಾರುಗಳಿಗೆ ಲಸಿಕೆ ಹಾಕಬೇಕು. ಹೀಗಾಗಿ ಮೊದಲ ‘ಶಂಕಿತ’ ಚರ್ಮಗಂಟು ರೋಗ ಕಾಣಿಸಿಕೊಂಡ ಬಂಟ್ವಾಳ ತಾಲೂಕಿನ ಬಿಳಿಯೂರು ಸುತ್ತಲಿನ ಸುಮಾರು 5 ಕಿ.ಮೀ. ವ್ಯಾಪ್ತಿಯಲ್ಲಿ ಮತ್ತು ಕೆಲವೊಂದು ಗೋ ಶಾಲೆಗಳಲ್ಲಿ ಮೊದಲನೇ ಹಂತದಲ್ಲಿ ಲಸಿಕೆ ಹಂಚಿಕೆ ನಡೆಯಲಿದೆ.
ಇದಾದ ಕೆಲವೇ ದಿನಗಳಲ್ಲಿ ಮತ್ತಷ್ಟು ಡೋಸ್ ಲಸಿಕೆ ಜಿಲ್ಲೆಗೆ ಸರಬರಾಜಾಗುವ ಸಾಧ್ಯತೆ ಇದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel