ಜಾನುವಾರುಗಳಲ್ಲಿ ಚರ್ಮಗಂಟು ರೋಗಕ್ಕೆ ದಕ್ಷಿಣ ಕನ್ನಡ ಜಿಲ್ಲೆಗೆ ಇಪ್ಪತ್ತು ಸಾವಿರ ಲಸಿಕೆ ಹಂಚಿಕೆ

October 17, 2022
4:51 PM

 ರಾಜ್ಯದ ಹಲವೆಡೆ ಜಾನುವಾರುಗಳಲ್ಲಿ ಹರಡುತ್ತಿರುವ ಚರ್ಮ ಗಂಟು ಕಾಯಿಲೆ ವೈರಾಣುವನ್ನು ನಿಯಂತ್ರಿಸಲು ಲಸಿಕೆ ಅಭಿಯಾನದ ಭಾಗವಾಗಿ ದಕ್ಷಿಣ ಕನ್ನಡ ಜಿಲ್ಲೆಗೆ 20,000 ಲಸಿಕೆ ಹಂಚಿಕೆಯಾಗಿದೆ.

ಬೆಂಗಳೂರಿನಿಂದ ಸೋಮವಾರ ಸರಬರಾಜು ಆಗಲಿದ್ದು, ಮಂಗಳವಾರದಿಂದ ವಿತರಣೆ ನಡೆಯಲಿದೆ.

ಭಾರತ ಸರ್ಕಾರದ ಮಾರ್ಗಸೂಚಿಯಂತೆ ರೋಗ ಕಾಣಿಸಿಕೊಂಡ 5 ಕಿ.ಮೀ. ಸುತ್ತಳತೆಯಲ್ಲಿ ಆರೋಗ್ಯವಂತ ಜಾನುವಾರುಗಳಿಗೆ ಲಸಿಕೆ ಹಾಕಬೇಕು. ಹೀಗಾಗಿ ಮೊದಲ ‘ಶಂಕಿತ’ ಚರ್ಮಗಂಟು ರೋಗ ಕಾಣಿಸಿಕೊಂಡ ಬಂಟ್ವಾಳ ತಾಲೂಕಿನ ಬಿಳಿಯೂರು ಸುತ್ತಲಿನ ಸುಮಾರು 5 ಕಿ.ಮೀ. ವ್ಯಾಪ್ತಿಯಲ್ಲಿ ಮತ್ತು ಕೆಲವೊಂದು ಗೋ ಶಾಲೆಗಳಲ್ಲಿ ಮೊದಲನೇ ಹಂತದಲ್ಲಿ ಲಸಿಕೆ ಹಂಚಿಕೆ ನಡೆಯಲಿದೆ.

ಇದಾದ ಕೆಲವೇ ದಿನಗಳಲ್ಲಿ ಮತ್ತಷ್ಟು ಡೋಸ್‌ ಲಸಿಕೆ ಜಿಲ್ಲೆಗೆ ಸರಬರಾಜಾಗುವ ಸಾಧ್ಯತೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಮಾಜಕ್ಕೆ ಸರಿದಾರಿಯನ್ನು ತೋರುವುದು ಗುರುವಿನ ಕಾರ್ಯ : ರಾಘವೇಶ್ವರ ಶ್ರೀ
July 30, 2026
7:39 AM
by: ದ ರೂರಲ್ ಮಿರರ್.ಕಾಂ
ಅಪೊಲೊ ಫಾರ್ಮಸಿಯಲ್ಲಿ ಉದ್ಯೋಗಾವಕಾಶ : ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ ಸಂದರ್ಶನ
July 30, 2026
7:26 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?
July 29, 2026
2:00 PM
by: ಸಾಯಿಶೇಖರ್ ಕರಿಕಳ
ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!
July 29, 2026
6:52 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror