ಜಾನುವಾರುಗಳಲ್ಲಿ ಚರ್ಮಗಂಟು ರೋಗಕ್ಕೆ ದಕ್ಷಿಣ ಕನ್ನಡ ಜಿಲ್ಲೆಗೆ ಇಪ್ಪತ್ತು ಸಾವಿರ ಲಸಿಕೆ ಹಂಚಿಕೆ

October 17, 2022
4:51 PM

 ರಾಜ್ಯದ ಹಲವೆಡೆ ಜಾನುವಾರುಗಳಲ್ಲಿ ಹರಡುತ್ತಿರುವ ಚರ್ಮ ಗಂಟು ಕಾಯಿಲೆ ವೈರಾಣುವನ್ನು ನಿಯಂತ್ರಿಸಲು ಲಸಿಕೆ ಅಭಿಯಾನದ ಭಾಗವಾಗಿ ದಕ್ಷಿಣ ಕನ್ನಡ ಜಿಲ್ಲೆಗೆ 20,000 ಲಸಿಕೆ ಹಂಚಿಕೆಯಾಗಿದೆ.

ಬೆಂಗಳೂರಿನಿಂದ ಸೋಮವಾರ ಸರಬರಾಜು ಆಗಲಿದ್ದು, ಮಂಗಳವಾರದಿಂದ ವಿತರಣೆ ನಡೆಯಲಿದೆ.

ಭಾರತ ಸರ್ಕಾರದ ಮಾರ್ಗಸೂಚಿಯಂತೆ ರೋಗ ಕಾಣಿಸಿಕೊಂಡ 5 ಕಿ.ಮೀ. ಸುತ್ತಳತೆಯಲ್ಲಿ ಆರೋಗ್ಯವಂತ ಜಾನುವಾರುಗಳಿಗೆ ಲಸಿಕೆ ಹಾಕಬೇಕು. ಹೀಗಾಗಿ ಮೊದಲ ‘ಶಂಕಿತ’ ಚರ್ಮಗಂಟು ರೋಗ ಕಾಣಿಸಿಕೊಂಡ ಬಂಟ್ವಾಳ ತಾಲೂಕಿನ ಬಿಳಿಯೂರು ಸುತ್ತಲಿನ ಸುಮಾರು 5 ಕಿ.ಮೀ. ವ್ಯಾಪ್ತಿಯಲ್ಲಿ ಮತ್ತು ಕೆಲವೊಂದು ಗೋ ಶಾಲೆಗಳಲ್ಲಿ ಮೊದಲನೇ ಹಂತದಲ್ಲಿ ಲಸಿಕೆ ಹಂಚಿಕೆ ನಡೆಯಲಿದೆ.

ಇದಾದ ಕೆಲವೇ ದಿನಗಳಲ್ಲಿ ಮತ್ತಷ್ಟು ಡೋಸ್‌ ಲಸಿಕೆ ಜಿಲ್ಲೆಗೆ ಸರಬರಾಜಾಗುವ ಸಾಧ್ಯತೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ
August 22, 2026
2:07 PM
by: ಸಾಯಿಶೇಖರ್ ಕರಿಕಳ
ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ
August 22, 2026
6:47 AM
by: ದ ರೂರಲ್ ಮಿರರ್.ಕಾಂ
ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ
August 21, 2026
7:49 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ
August 21, 2026
4:04 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror