ರಾಜ್ಯದ ಹಲವೆಡೆ ಜಾನುವಾರುಗಳಲ್ಲಿ ಹರಡುತ್ತಿರುವ ಚರ್ಮ ಗಂಟು ಕಾಯಿಲೆ ವೈರಾಣುವನ್ನು ನಿಯಂತ್ರಿಸಲು ಲಸಿಕೆ ಅಭಿಯಾನದ ಭಾಗವಾಗಿ ದಕ್ಷಿಣ ಕನ್ನಡ ಜಿಲ್ಲೆಗೆ 20,000 ಲಸಿಕೆ ಹಂಚಿಕೆಯಾಗಿದೆ.
ಬೆಂಗಳೂರಿನಿಂದ ಸೋಮವಾರ ಸರಬರಾಜು ಆಗಲಿದ್ದು, ಮಂಗಳವಾರದಿಂದ ವಿತರಣೆ ನಡೆಯಲಿದೆ.
ಭಾರತ ಸರ್ಕಾರದ ಮಾರ್ಗಸೂಚಿಯಂತೆ ರೋಗ ಕಾಣಿಸಿಕೊಂಡ 5 ಕಿ.ಮೀ. ಸುತ್ತಳತೆಯಲ್ಲಿ ಆರೋಗ್ಯವಂತ ಜಾನುವಾರುಗಳಿಗೆ ಲಸಿಕೆ ಹಾಕಬೇಕು. ಹೀಗಾಗಿ ಮೊದಲ ‘ಶಂಕಿತ’ ಚರ್ಮಗಂಟು ರೋಗ ಕಾಣಿಸಿಕೊಂಡ ಬಂಟ್ವಾಳ ತಾಲೂಕಿನ ಬಿಳಿಯೂರು ಸುತ್ತಲಿನ ಸುಮಾರು 5 ಕಿ.ಮೀ. ವ್ಯಾಪ್ತಿಯಲ್ಲಿ ಮತ್ತು ಕೆಲವೊಂದು ಗೋ ಶಾಲೆಗಳಲ್ಲಿ ಮೊದಲನೇ ಹಂತದಲ್ಲಿ ಲಸಿಕೆ ಹಂಚಿಕೆ ನಡೆಯಲಿದೆ.
ಇದಾದ ಕೆಲವೇ ದಿನಗಳಲ್ಲಿ ಮತ್ತಷ್ಟು ಡೋಸ್ ಲಸಿಕೆ ಜಿಲ್ಲೆಗೆ ಸರಬರಾಜಾಗುವ ಸಾಧ್ಯತೆ ಇದೆ.
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…
ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…