ರಾಜ್ಯದ ಹಲವೆಡೆ ಜಾನುವಾರುಗಳಲ್ಲಿ ಹರಡುತ್ತಿರುವ ಚರ್ಮ ಗಂಟು ಕಾಯಿಲೆ ವೈರಾಣುವನ್ನು ನಿಯಂತ್ರಿಸಲು ಲಸಿಕೆ ಅಭಿಯಾನದ ಭಾಗವಾಗಿ ದಕ್ಷಿಣ ಕನ್ನಡ ಜಿಲ್ಲೆಗೆ 20,000 ಲಸಿಕೆ ಹಂಚಿಕೆಯಾಗಿದೆ.
ಬೆಂಗಳೂರಿನಿಂದ ಸೋಮವಾರ ಸರಬರಾಜು ಆಗಲಿದ್ದು, ಮಂಗಳವಾರದಿಂದ ವಿತರಣೆ ನಡೆಯಲಿದೆ.
ಭಾರತ ಸರ್ಕಾರದ ಮಾರ್ಗಸೂಚಿಯಂತೆ ರೋಗ ಕಾಣಿಸಿಕೊಂಡ 5 ಕಿ.ಮೀ. ಸುತ್ತಳತೆಯಲ್ಲಿ ಆರೋಗ್ಯವಂತ ಜಾನುವಾರುಗಳಿಗೆ ಲಸಿಕೆ ಹಾಕಬೇಕು. ಹೀಗಾಗಿ ಮೊದಲ ‘ಶಂಕಿತ’ ಚರ್ಮಗಂಟು ರೋಗ ಕಾಣಿಸಿಕೊಂಡ ಬಂಟ್ವಾಳ ತಾಲೂಕಿನ ಬಿಳಿಯೂರು ಸುತ್ತಲಿನ ಸುಮಾರು 5 ಕಿ.ಮೀ. ವ್ಯಾಪ್ತಿಯಲ್ಲಿ ಮತ್ತು ಕೆಲವೊಂದು ಗೋ ಶಾಲೆಗಳಲ್ಲಿ ಮೊದಲನೇ ಹಂತದಲ್ಲಿ ಲಸಿಕೆ ಹಂಚಿಕೆ ನಡೆಯಲಿದೆ.
ಇದಾದ ಕೆಲವೇ ದಿನಗಳಲ್ಲಿ ಮತ್ತಷ್ಟು ಡೋಸ್ ಲಸಿಕೆ ಜಿಲ್ಲೆಗೆ ಸರಬರಾಜಾಗುವ ಸಾಧ್ಯತೆ ಇದೆ.
ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿಗೆ ಸಂಬಂಧಿಸಿದ ಎಫ್ಡಿಎ ಕ್ರಮವನ್ನು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.…
ಮಹಾರಾಷ್ಟ್ರದಲ್ಲಿ ಗುಟ್ಕಾ ಜಾಲದ ವಿರುದ್ಧ ಎಂಸಿಒಸಿಎ ಅಡಿ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ…
ಜುಲೈ 14ರಂದು ಮಂಗಳೂರಿನಲ್ಲಿ ವಿವಿಧ ಖಾಸಗಿ ಸಂಸ್ಥೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಯಲಿದೆ.…
ಮೇ-ಜೂನ್ ತಿಂಗಳಲ್ಲಿ ತೀವ್ರ ಬಿಸಿಲಿನ ಕಾರಣದಿಂದ ಭಾರತದ ಸುಮಾರು 70% ಮಕ್ಕಳು ಶಾಲೆ…
ರಾಜ್ಯದಲ್ಲಿ ಮುಂಗಾರು ದುರ್ಬಲವಾಗುತ್ತಿದ್ದು, ಜುಲೈ 11ರಿಂದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ…
ಜುಲೈ ಮೊದಲ ವಾರದ ಉತ್ತಮ ಮಳೆಯಿಂದ ದೇಶದ ಮಳೆ ಕೊರತೆ 12%ಕ್ಕೆ ಇಳಿದಿದೆ.…