ಏರಿದ ಕೆ.ಜಿ ಬೆಳ್ಳುಳ್ಳಿ ಬೆಲೆ | 500ರ ಗಡಿ ದಾಟಿದ ದರ

February 10, 2024
12:05 PM

ಒಂದಾದ ಮೇಲೊಂದರಂತೆ ತರಕಾರಿ ಬೆಲೆ(Vegetable price) ಏರೋದು ಮಾಮೂಲು. ಗ್ರಾಹಕ(Customer) ಮಾತ್ರ ಇದರ ಹೊಡೆತಕ್ಕೆ ನಲುಗಿ ಪರದಾಡುವ ಸ್ಥಿತಿ ಬರುತ್ತದೆ. ಅತ್ತ ರೈತರಿಗೆ(Farmer) ಲಾಭ ಬಂದ್ರೆ ಬಂತು.. ಇಲ್ಲಾಂದ್ರೆ ಇಲ್ಲ. ಕಳೆದ ಕೆಲ ತಿಂಗಳಿಂದ ಟೊಮೇಟೋ,(Tomato) ಈರುಳ್ಳಿ(Onion) ಬೆಲೆ(Price) ಏರಿಳಿತ ಕಾಣುತ್ತಲೇ ಇದೆ. ಇದೀಗ  ಬೆಳ್ಳುಳ್ಳಿ(Garlic) ಸರದಿ. ಬೆಳ್ಳುಳ್ಳಿ ಕೆ.ಜಿಗೆ ನೂರಲ್ಲ, ಇನ್ನೂರಲ್ಲ ಬರೋಬ್ಬರಿ 500ರೂ ತಲುಪಿದೆ.

ರಸಂ, ಸಾಂಬರ್, ಗೋಬಿ, ನಾನ್‍ವೆಜ್ ಹೀಗೆ ಟೇಸ್ಟಿ ಟೇಸ್ಟಿಯಾದ ಅಡುಗೆ ಮಾಡಬೇಕಾದ್ರೂ ಬೆಳ್ಳುಳ್ಳಿ ಬೇಕೇ ಬೇಕು. ಬೆಳ್ಳುಳ್ಳಿ ಹಾಕೋದ್ರಿಂದ ಈ ಅಡುಗೆಗಳ ಟೇಸ್ಟ್ ಹೆಚ್ಚಾಗುತ್ತೆ. ಆದರೆ ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿ ಬೆಲೆ ಗಗನಕ್ಕೇರಿದೆ. ಈ ವರ್ಷ ಸರಿಯಾಗಿ ಮಳೆಯಾಗದ ಕಾರಣ ಬೆಳ್ಳುಳ್ಳಿ (Garlic Rate) ಬೆಲೆ ಸರಿಯಾಗಿ ಬಂದಿಲ್ಲ. ಪೂರೈಕೆಯಲ್ಲಿ ಕೊರತೆ ಉಂಟಾಗಿದೆ. ಬೆಳ್ಳುಳ್ಳಿ ಕೆ.ಜಿಗೆ ಹಾಪ್ ಕಾಮ್ಸ್‍ನಲ್ಲಿ 500ರ ಗಡಿ ದಾಟಿದೆ. ಬಿಡಿಸಿದ ಬೆಳ್ಳುಳ್ಳಿ 540 ರೂ. ಆಗಿದ್ರೆ, ಉಂಡೆ ಬೆಳ್ಳುಳ್ಳಿಗೆ ಕೆ.ಜಿಗೆ 492 ರೂ. ಇದೆ.

ಬೆಳ್ಳುಳ್ಳಿ ಬೆಲೆ ಏರಿಕೆಗೆ ಪ್ರಮುಖ ಕಾರಣವೆಂದರೆ ಈ ವರ್ಷ ಸರಿಯಾದ ಮಳೆಯಾಗಿಲ್ಲ. ಅಕಾಲಿಕ ಮಳೆ, ಹವಾಮಾನ ವೈಪರೀತ್ಯ ಹಿನ್ನೆಲೆ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಇಷ್ಟು ದಿನಗಳ ಕಾಲ ನಾಸಿಕ್, ಪೂನಾದಿಂದ ಬರುತ್ತಿದ್ದ ಬೆಳ್ಳುಳ್ಳಿಯ ರಫ್ತು ಕಡಿಮೆಯಾಗಿದೆ. ರಾಜ್ಯದಲ್ಲಿ ಬೆಳಗಾವಿ ಭಾಗಗಳಿಂದ ಬರೋ ಬೆಳ್ಳುಳ್ಳಿ ಸಹ ಕಡಿಮೆಯಾಗಿದೆ. ಹೀಗಾಗಿ ಬೆಳ್ಳುಳ್ಳಿ ಒಗ್ಗರಣೆ ಘಾಟು ಜೋರಾಗಿದೆ. ಬೆಳ್ಳುಳ್ಳಿ ಹೊಸ ಬೆಳೆ ಬರೋವರೆಗೂ ರೇಟ್ ಕಡಿಮೆಯಾಗೋ ಸಾಧ್ಯತೆಯಿಲ್ಲ. ಇದ್ರಿಂದಾಗಿ ಗೃಹಿಣಿಯರು ಅರ್ಧ ಕೆ.ಜಿ, ಒಂದು ಕೆಜಿ ಕೊಳ್ಳೋ ಕಡೆ 100 ಗ್ರಾಂ, 200 ಗ್ರಾಂ ಕೊಳ್ಳೋ ಹಾಗೆ ಆಗಿದೆ.

  • ಅಂತರ್ಜಾಲ ಮಾಹಿತಿ
The price of garlic has skyrocketed in the market. The price of garlic has not come properly due to the lack of rain this year. There is a shortage in supply. Garlic has crossed the 500 mark at Hop Coms per kg. Minced garlic 540 Rs. 492 per kg for lump garlic. 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್‌ ಘಟಕ ಆರಂಭ – ಮಹಿಳೆಯರ ನೇತೃತ್ವದಲ್ಲಿ ಗ್ರಾಮೀಣ ಉದ್ಯಮಕ್ಕೆ ಹೊಸ ದಿಕ್ಕು
April 29, 2026
10:45 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಎಲೆಚುಕ್ಕೆ ರೋಗದ ವಿರುದ್ಧ ಹೋರಾಟ – ಸಮುದಾಯ ಮಟ್ಟದಲ್ಲಿ ಕ್ರಿಯಾ ಯೋಜನೆಗೆ ಸಂಸದ ಬ್ರಿಜೇಶ್ ಚೌಟ ಕರೆ
April 29, 2026
10:05 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ
April 28, 2026
2:11 PM
by: ಸಾಯಿಶೇಖರ್ ಕರಿಕಳ
ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ
April 27, 2026
9:34 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror