Advertisement
MIRROR FOCUS

ಏರಿದ ಕೆ.ಜಿ ಬೆಳ್ಳುಳ್ಳಿ ಬೆಲೆ | 500ರ ಗಡಿ ದಾಟಿದ ದರ

Share

ಒಂದಾದ ಮೇಲೊಂದರಂತೆ ತರಕಾರಿ ಬೆಲೆ(Vegetable price) ಏರೋದು ಮಾಮೂಲು. ಗ್ರಾಹಕ(Customer) ಮಾತ್ರ ಇದರ ಹೊಡೆತಕ್ಕೆ ನಲುಗಿ ಪರದಾಡುವ ಸ್ಥಿತಿ ಬರುತ್ತದೆ. ಅತ್ತ ರೈತರಿಗೆ(Farmer) ಲಾಭ ಬಂದ್ರೆ ಬಂತು.. ಇಲ್ಲಾಂದ್ರೆ ಇಲ್ಲ. ಕಳೆದ ಕೆಲ ತಿಂಗಳಿಂದ ಟೊಮೇಟೋ,(Tomato) ಈರುಳ್ಳಿ(Onion) ಬೆಲೆ(Price) ಏರಿಳಿತ ಕಾಣುತ್ತಲೇ ಇದೆ. ಇದೀಗ  ಬೆಳ್ಳುಳ್ಳಿ(Garlic) ಸರದಿ. ಬೆಳ್ಳುಳ್ಳಿ ಕೆ.ಜಿಗೆ ನೂರಲ್ಲ, ಇನ್ನೂರಲ್ಲ ಬರೋಬ್ಬರಿ 500ರೂ ತಲುಪಿದೆ.

ರಸಂ, ಸಾಂಬರ್, ಗೋಬಿ, ನಾನ್‍ವೆಜ್ ಹೀಗೆ ಟೇಸ್ಟಿ ಟೇಸ್ಟಿಯಾದ ಅಡುಗೆ ಮಾಡಬೇಕಾದ್ರೂ ಬೆಳ್ಳುಳ್ಳಿ ಬೇಕೇ ಬೇಕು. ಬೆಳ್ಳುಳ್ಳಿ ಹಾಕೋದ್ರಿಂದ ಈ ಅಡುಗೆಗಳ ಟೇಸ್ಟ್ ಹೆಚ್ಚಾಗುತ್ತೆ. ಆದರೆ ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿ ಬೆಲೆ ಗಗನಕ್ಕೇರಿದೆ. ಈ ವರ್ಷ ಸರಿಯಾಗಿ ಮಳೆಯಾಗದ ಕಾರಣ ಬೆಳ್ಳುಳ್ಳಿ (Garlic Rate) ಬೆಲೆ ಸರಿಯಾಗಿ ಬಂದಿಲ್ಲ. ಪೂರೈಕೆಯಲ್ಲಿ ಕೊರತೆ ಉಂಟಾಗಿದೆ. ಬೆಳ್ಳುಳ್ಳಿ ಕೆ.ಜಿಗೆ ಹಾಪ್ ಕಾಮ್ಸ್‍ನಲ್ಲಿ 500ರ ಗಡಿ ದಾಟಿದೆ. ಬಿಡಿಸಿದ ಬೆಳ್ಳುಳ್ಳಿ 540 ರೂ. ಆಗಿದ್ರೆ, ಉಂಡೆ ಬೆಳ್ಳುಳ್ಳಿಗೆ ಕೆ.ಜಿಗೆ 492 ರೂ. ಇದೆ.

ಬೆಳ್ಳುಳ್ಳಿ ಬೆಲೆ ಏರಿಕೆಗೆ ಪ್ರಮುಖ ಕಾರಣವೆಂದರೆ ಈ ವರ್ಷ ಸರಿಯಾದ ಮಳೆಯಾಗಿಲ್ಲ. ಅಕಾಲಿಕ ಮಳೆ, ಹವಾಮಾನ ವೈಪರೀತ್ಯ ಹಿನ್ನೆಲೆ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಇಷ್ಟು ದಿನಗಳ ಕಾಲ ನಾಸಿಕ್, ಪೂನಾದಿಂದ ಬರುತ್ತಿದ್ದ ಬೆಳ್ಳುಳ್ಳಿಯ ರಫ್ತು ಕಡಿಮೆಯಾಗಿದೆ. ರಾಜ್ಯದಲ್ಲಿ ಬೆಳಗಾವಿ ಭಾಗಗಳಿಂದ ಬರೋ ಬೆಳ್ಳುಳ್ಳಿ ಸಹ ಕಡಿಮೆಯಾಗಿದೆ. ಹೀಗಾಗಿ ಬೆಳ್ಳುಳ್ಳಿ ಒಗ್ಗರಣೆ ಘಾಟು ಜೋರಾಗಿದೆ. ಬೆಳ್ಳುಳ್ಳಿ ಹೊಸ ಬೆಳೆ ಬರೋವರೆಗೂ ರೇಟ್ ಕಡಿಮೆಯಾಗೋ ಸಾಧ್ಯತೆಯಿಲ್ಲ. ಇದ್ರಿಂದಾಗಿ ಗೃಹಿಣಿಯರು ಅರ್ಧ ಕೆ.ಜಿ, ಒಂದು ಕೆಜಿ ಕೊಳ್ಳೋ ಕಡೆ 100 ಗ್ರಾಂ, 200 ಗ್ರಾಂ ಕೊಳ್ಳೋ ಹಾಗೆ ಆಗಿದೆ.

  • ಅಂತರ್ಜಾಲ ಮಾಹಿತಿ
The price of garlic has skyrocketed in the market. The price of garlic has not come properly due to the lack of rain this year. There is a shortage in supply. Garlic has crossed the 500 mark at Hop Coms per kg. Minced garlic 540 Rs. 492 per kg for lump garlic. 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವಯನಾಡಿನಲ್ಲಿ ಮತ್ತೆ ಭೂಕುಸಿತ ಭೀತಿ- ಸುರಂಗ ಯೋಜನಾ ಸ್ಥಳದಲ್ಲಿ ಮಣ್ಣು ಕುಸಿತ, ಹಲವರು ಸಿಲುಕಿರುವ ಶಂಕೆ

ವಯನಾಡಿನ ಮೆಪ್ಪಾಡಿ ಸಮೀಪ ಸುರಂಗ ಯೋಜನಾ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಹಲವರು ಸಿಲುಕಿರುವ…

2 hours ago

ಹವಾಮಾನ ವರದಿ | 07-07-2026 | ಕರ್ನಾಟಕದಲ್ಲಿ ಇನ್ನೂ ಮೂರು ದಿನ ಮಳೆ – ಜುಲೈ 11 ರಿಂದ ಮಳೆ ತೀವ್ರ ಇಳಿಕೆ ಸಾಧ್ಯತೆ

ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಮಳೆ ಮುಂದುವರಿಯಲಿದ್ದು, ಜುಲೈ 11ರಿಂದ ರಾಜ್ಯಾದ್ಯಂತ ಮಳೆಯ…

2 hours ago

ತೂಗುಸೇತುವೆಗಳ ಸರದಾರ ಡಾ. ಗಿರೀಶ್‌ ಭಾರದ್ವಾಜ್‌ ಅವರಿಗೆ ಗ್ರಾಮೀಣ ಭಾರತದ ಭಾವಪೂರ್ಣ ನಮನ

ತೂಗುಸೇತುವೆಗಳ ಮೂಲಕ ಸಾವಿರಾರು ಗ್ರಾಮಗಳ ಬದುಕನ್ನು ಜೋಡಿಸಿದ ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ಗೆ…

3 hours ago

ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ ನಿಧನ – ‘ತೂಗುಸೇತುವೆಗಳ ಸರದಾರ’ ಇನ್ನಿಲ್ಲ

ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್‌ ಭಾರದ್ವಾಜ್‌ ಅವರು ನಿಧನರಾಗಿದ್ದಾರೆ. ಕಡಿಮೆ ವೆಚ್ಚದ ತೂಗುಸೇತುವೆಗಳ…

7 hours ago

ಸಂಕಷ್ಟದಿಂದ ರೈತರನ್ನು ರಕ್ಷಿಸುವ ಶಕ್ತಿ ಗೋ ಆಧಾರಿತ ಆರ್ಥಿಕತೆಗಿದೆ – ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡಣವೀಸ್

ಗೋ ಆಧಾರಿತ ಆರ್ಥಿಕ ವ್ಯವಸ್ಥೆ ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಬಲ್ಲದು ಎಂದು…

7 hours ago

ಜೂನ್‌ನಲ್ಲಿ 40% ಮಳೆ ಕೊರತೆ – ಜುಲೈನಲ್ಲಿ ಮುಂಗಾರು ಭರ್ಜರಿ..! ದೇಶಾದ್ಯಂತ ಮಳೆ ಚುರುಕು

ಜೂನ್‌ನಲ್ಲಿ ದಾಖಲಾಗಿದ್ದ ಮಳೆ ಕೊರತೆ ಜುಲೈ ಆರಂಭದ ಭಾರೀ ಮಳೆಯಿಂದ ವೇಗವಾಗಿ ಕಡಿಮೆಯಾಗುತ್ತಿದೆ.…

18 hours ago