Advertisement
MIRROR FOCUS

ಏರಿದ ಕೆ.ಜಿ ಬೆಳ್ಳುಳ್ಳಿ ಬೆಲೆ | 500ರ ಗಡಿ ದಾಟಿದ ದರ

Share

ಒಂದಾದ ಮೇಲೊಂದರಂತೆ ತರಕಾರಿ ಬೆಲೆ(Vegetable price) ಏರೋದು ಮಾಮೂಲು. ಗ್ರಾಹಕ(Customer) ಮಾತ್ರ ಇದರ ಹೊಡೆತಕ್ಕೆ ನಲುಗಿ ಪರದಾಡುವ ಸ್ಥಿತಿ ಬರುತ್ತದೆ. ಅತ್ತ ರೈತರಿಗೆ(Farmer) ಲಾಭ ಬಂದ್ರೆ ಬಂತು.. ಇಲ್ಲಾಂದ್ರೆ ಇಲ್ಲ. ಕಳೆದ ಕೆಲ ತಿಂಗಳಿಂದ ಟೊಮೇಟೋ,(Tomato) ಈರುಳ್ಳಿ(Onion) ಬೆಲೆ(Price) ಏರಿಳಿತ ಕಾಣುತ್ತಲೇ ಇದೆ. ಇದೀಗ  ಬೆಳ್ಳುಳ್ಳಿ(Garlic) ಸರದಿ. ಬೆಳ್ಳುಳ್ಳಿ ಕೆ.ಜಿಗೆ ನೂರಲ್ಲ, ಇನ್ನೂರಲ್ಲ ಬರೋಬ್ಬರಿ 500ರೂ ತಲುಪಿದೆ.

ರಸಂ, ಸಾಂಬರ್, ಗೋಬಿ, ನಾನ್‍ವೆಜ್ ಹೀಗೆ ಟೇಸ್ಟಿ ಟೇಸ್ಟಿಯಾದ ಅಡುಗೆ ಮಾಡಬೇಕಾದ್ರೂ ಬೆಳ್ಳುಳ್ಳಿ ಬೇಕೇ ಬೇಕು. ಬೆಳ್ಳುಳ್ಳಿ ಹಾಕೋದ್ರಿಂದ ಈ ಅಡುಗೆಗಳ ಟೇಸ್ಟ್ ಹೆಚ್ಚಾಗುತ್ತೆ. ಆದರೆ ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿ ಬೆಲೆ ಗಗನಕ್ಕೇರಿದೆ. ಈ ವರ್ಷ ಸರಿಯಾಗಿ ಮಳೆಯಾಗದ ಕಾರಣ ಬೆಳ್ಳುಳ್ಳಿ (Garlic Rate) ಬೆಲೆ ಸರಿಯಾಗಿ ಬಂದಿಲ್ಲ. ಪೂರೈಕೆಯಲ್ಲಿ ಕೊರತೆ ಉಂಟಾಗಿದೆ. ಬೆಳ್ಳುಳ್ಳಿ ಕೆ.ಜಿಗೆ ಹಾಪ್ ಕಾಮ್ಸ್‍ನಲ್ಲಿ 500ರ ಗಡಿ ದಾಟಿದೆ. ಬಿಡಿಸಿದ ಬೆಳ್ಳುಳ್ಳಿ 540 ರೂ. ಆಗಿದ್ರೆ, ಉಂಡೆ ಬೆಳ್ಳುಳ್ಳಿಗೆ ಕೆ.ಜಿಗೆ 492 ರೂ. ಇದೆ.

ಬೆಳ್ಳುಳ್ಳಿ ಬೆಲೆ ಏರಿಕೆಗೆ ಪ್ರಮುಖ ಕಾರಣವೆಂದರೆ ಈ ವರ್ಷ ಸರಿಯಾದ ಮಳೆಯಾಗಿಲ್ಲ. ಅಕಾಲಿಕ ಮಳೆ, ಹವಾಮಾನ ವೈಪರೀತ್ಯ ಹಿನ್ನೆಲೆ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಇಷ್ಟು ದಿನಗಳ ಕಾಲ ನಾಸಿಕ್, ಪೂನಾದಿಂದ ಬರುತ್ತಿದ್ದ ಬೆಳ್ಳುಳ್ಳಿಯ ರಫ್ತು ಕಡಿಮೆಯಾಗಿದೆ. ರಾಜ್ಯದಲ್ಲಿ ಬೆಳಗಾವಿ ಭಾಗಗಳಿಂದ ಬರೋ ಬೆಳ್ಳುಳ್ಳಿ ಸಹ ಕಡಿಮೆಯಾಗಿದೆ. ಹೀಗಾಗಿ ಬೆಳ್ಳುಳ್ಳಿ ಒಗ್ಗರಣೆ ಘಾಟು ಜೋರಾಗಿದೆ. ಬೆಳ್ಳುಳ್ಳಿ ಹೊಸ ಬೆಳೆ ಬರೋವರೆಗೂ ರೇಟ್ ಕಡಿಮೆಯಾಗೋ ಸಾಧ್ಯತೆಯಿಲ್ಲ. ಇದ್ರಿಂದಾಗಿ ಗೃಹಿಣಿಯರು ಅರ್ಧ ಕೆ.ಜಿ, ಒಂದು ಕೆಜಿ ಕೊಳ್ಳೋ ಕಡೆ 100 ಗ್ರಾಂ, 200 ಗ್ರಾಂ ಕೊಳ್ಳೋ ಹಾಗೆ ಆಗಿದೆ.

  • ಅಂತರ್ಜಾಲ ಮಾಹಿತಿ
The price of garlic has skyrocketed in the market. The price of garlic has not come properly due to the lack of rain this year. There is a shortage in supply. Garlic has crossed the 500 mark at Hop Coms per kg. Minced garlic 540 Rs. 492 per kg for lump garlic. 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

16 hours ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

16 hours ago

ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ

ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…

21 hours ago

ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ

ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್‌ನಲ್ಲಿ ಆಮದು…

21 hours ago

ಕೇರಳದಲ್ಲಿ ಪ್ರತಿವರ್ಷ ₹1,200 ಕೋಟಿ ಮೌಲ್ಯದ ಹಲಸು ವ್ಯರ್ಥ..! ಮೌಲ್ಯವರ್ಧನೆಗೆ ಸರ್ಕಾರ ಮುಂದಾಗಲಿ ಎಂಬ ಒತ್ತಾಯ

ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…

21 hours ago

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

2 days ago