ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

July 26, 2026
3:04 PM
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು ಶಿಕ್ಷಣಕ್ಕೆ ಹಾನಿಯಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೆಗೌಡ ಹೇಳಿದ್ದಾರೆ. ಹವಾಮಾನ ಇಲಾಖೆಯು ಹೆಚ್ಚು ನಿಖರವಾದ ಸ್ಥಳೀಯ ಮುನ್ಸೂಚನೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆಯಿಂದ ಪ್ರಕಟವಾಗುತ್ತಿರುವ ಮಳೆ ಮುನ್ಸೂಚನೆಗಳು ವಾಸ್ತವ ಪರಿಸ್ಥಿತಿಗೆ ಹೊಂದಿಕೆಯಾಗದೆ, ಅದರ ಆಧಾರದ ಮೇಲೆ ಜಿಲ್ಲಾಡಳಿತಗಳು ನಿರಂತರವಾಗಿ ರಜೆ ಘೋಷಿಸುತ್ತಿರುವುದು ಶೈಕ್ಷಣಿಕ ವಲಯದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೆಗೌಡ ಕಳವಳ ವ್ಯಕ್ತಪಡಿಸಿದರು.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳು ಶಿಕ್ಷಣ ಕ್ಷೇತ್ರದಲ್ಲಿ ರಾಜ್ಯದ ಪ್ರಮುಖ ಜಿಲ್ಲೆಗಳಾಗಿದ್ದು, ಇಲ್ಲಿನ ಶಿಕ್ಷಣ ಸಂಸ್ಥೆಗಳಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಮಳೆಯ ತೀವ್ರತೆ ಇಲ್ಲದಿದ್ದರೂ ಮುಂಜಾಗ್ರತಾ ಕ್ರಮದ ಹೆಸರಿನಲ್ಲಿ ಪದೇ ಪದೇ ರಜೆ ಘೋಷಿಸುವುದು ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ಅಡ್ಡಿಯಾಗುತ್ತಿದೆ ಎಂದು ಹೇಳಿದರು.

ವಿಶೇಷವಾಗಿ ವಸತಿ ಶಾಲೆಗಳಿಗೂ ರಜೆ ಅನ್ವಯವಾಗುವಂತೆ ಆದೇಶ ಹೊರಡಿಸಲಾಗುತ್ತಿರುವುದು ಎಷ್ಟರ ಮಟ್ಟಿಗೆ ಸಮಂಜಸ ಎಂಬ ಪ್ರಶ್ನೆಯನ್ನು ಅವರು ಎತ್ತಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

ಹವಾಮಾನ ಇಲಾಖೆಯು ಸ್ಥಳೀಯ ವಾಸ್ತವ ಪರಿಸ್ಥಿತಿಯನ್ನು ಸಮರ್ಪಕವಾಗಿ ಪರಿಗಣಿಸದೆ ಅವೈಜ್ಞಾನಿಕ ವರದಿಗಳನ್ನು ನೀಡುತ್ತಿರುವುದರಿಂದ, ಮಳೆಯೇ ಇಲ್ಲದ ಸಂದರ್ಭದಲ್ಲಿಯೂ ಜಿಲ್ಲಾಡಳಿತಗಳು ರಜೆ ಘೋಷಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ಆರೋಪಿಸಿದರು.

ಹವಾಮಾನ ಮುನ್ಸೂಚನೆಗಳನ್ನು ಇನ್ನಷ್ಟು ನಿಖರ ಹಾಗೂ ಸ್ಥಳೀಯ ಪರಿಸ್ಥಿತಿಗೆ ಅನುಗುಣವಾಗಿ ನೀಡುವಂತೆ ಸಂಬಂಧಿಸಿದ ಇಲಾಖೆ ಕ್ರಮ ಕೈಗೊಳ್ಳಬೇಕು. ಜೊತೆಗೆ ಶಿಕ್ಷಣದ ಹಿತದೃಷ್ಟಿಯಿಂದ ರಜೆ ಘೋಷಣೆ ಮಾಡುವಾಗ ವಾಸ್ತವ ಪರಿಸ್ಥಿತಿ ಹಾಗೂ ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಪರಿಗಣಿಸಬೇಕು ಎಂದು ಭೋಜೆಗೌಡ ಒತ್ತಾಯಿಸಿದರು.

MLC S.L. Bhojegowda has expressed concern that inaccurate rainfall forecasts are affecting the education sector in Dakshina Kannada and Udupi. He said repeated holiday declarations based on forecasts, even when there is little or no rain, are disrupting academic activities and urged authorities to rely on more accurate, location-specific weather assessments.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ
ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!
August 15, 2026
7:18 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror