Advertisement
MIRROR FOCUS

ಸರ್ಕಾರಿ ಪಾಠಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ವ್ಯವಸ್ಥೆ | ಗ್ರಾಮೀಣ ವಿದ್ಯಾರ್ಥಿಗಳ ಕಲಿಕೆಗೆ ಅವಕಾಶ

Share

ಸರ್ಕಾರಿ ಶಾಲೆಗಳಲ್ಲಿ ಈಚೆಗೆ ಗುಣಮಟ್ಟದ ಶಿಕ್ಷಣ ಲಭ್ಯವಾಗುತ್ತಿದೆ. ಆದರೆ ಗ್ರಾಮೀಣ ಭಾಗದಲ್ಲಿ ಶಿಕ್ಷಣದ ವ್ಯವಸ್ಥೆ ಇದ್ದರೂ ಹಲವು ಮೂಲಭೂತ ವ್ಯವಸ್ಥೆಗಳ ಕೊರತೆ ಕಾಡುತ್ತಿದೆ. ಶಿಕ್ಷಕರ ಕೊರತೆ, ಕಟ್ಟಡದ ಸಮಸ್ಯೆ, ಸಂಪರ್ಕ ವ್ಯವಸ್ಥೆ ಇದೆಲ್ಲಾ ಇದ್ದರೂ ಇರುವ ವ್ಯವಸ್ಥೆಯಲ್ಲಿ ಗುಣಮಟ್ಟದ ಸೇವೆ ನೀಡಲು ಎಲ್ಲಾ ವ್ಯವಸ್ಥೆಗಳು ನಡೆಯುತ್ತದೆ. ಇದೇ ಮಾದರಿಯಲ್ಲಿ ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಸಾಥಖೇಡಾ ಸರ್ಕಾರಿ ಪ್ರಾಥಮಿಕ ಪಾಠಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ವ್ಯವಸ್ಥೆ ಕಲ್ಪಿಸುವ ಮೂಲಕ ವಿದ್ಯಾರ್ಥಿಗಳ ಕಲಿಕೆಗೆ ಅವಕಾಶ ಮಾಡಿಕೊಡಲಾಗಿದೆ.…..ಮುಂದೆ ಓದಿ….

ಸಾಥಖೇಡಾದ ಸರ್ಕಾರಿ ಪ್ರಾಥಮಿಕ ಪಾಠಶಾಲೆಯಲ್ಲಿ ಕಲಿತು ಸರ್ಕಾರಿ ಉದ್ಯೋಗದಲ್ಲಿರುವವರು, ಹಳೆಯ ವಿದ್ಯಾರ್ಥಿಗಳ ಹಾಗೂ ಗ್ರಾಮಸ್ಥರ ಸಹಕಾರದಿಂದ ಸುಮಾರು ಒಂದು ಲಕ್ಷ ರೂಪಾಯಿಗೂ ಅಧಿಕ ವೆಚ್ಚದಲ್ಲಿ ಸ್ಮಾರ್ಟ್ ಕ್ಲಾಸ್ ಮೂಲಕ ಮಕ್ಕಳಿಗೆ ಪಾಠ,ಪ್ರವಚನ ಮಾಡಲು ಅನುಕೂಲ ಮಾಡಿಕೊಡಲಾಗಿದೆ. ಸರ್ಕಾರಿ ಶಾಲೆಯ ಮಕ್ಕಳಿಗೂ ಕೂಡ ಗುಣಮಟ್ಟದ ಶಿಕ್ಷಣ ಸಿಗಬೇಕು ಎನ್ನುವ ಉದ್ದೇಶದಿಂದ ಗ್ರಾಮದ ಪ್ರಮುಖರು ಸೇರಿ ಕೈಗೊಂಡ ನಿರ್ಧಾರದಿಂದ ಮಕ್ಕಳು ಡಿಜಿಟಲ್ ಮೂಲಕ ಶಿಕ್ಷಣ ಕಲಿಯುತ್ತಿದ್ದು, ಇದರಿಂದ ಕಲಿಕೆಗೂ ಮತ್ತಷ್ಟು ಪೂರಕವಾಗಿದೆ.

ಶಾಲೆಯಲ್ಲಿ ಓದಿದ ಹಳೆಯ ವಿದ್ಯಾರ್ಥಿಗಳು ಒಗ್ಗೂಡಿ ಶಾಲೆಗೆ ಕಾಯಕಲ್ಪ ಕಲ್ಪಿಸಿದ್ದೇವೆ. ಸಾಥಖೇಡಾದಲ್ಲಿ ಗ್ರಾಮ ಪಂಚಾಯತ್ ಕಾರ್ಯಾಲಯವಿದ್ದರೂ ಯಾವುದೇ ಮೂಲಸೌಕರ್ಯ ಕಲ್ಪಿಸಿಲ್ಲ. ಜೊತೆಗೆ ಸರ್ಕಾರವೂ ಈ ಬಗ್ಗೆ ಗಮನಹರಿಸಿಲ್ಲ. ಈ ಬಗ್ಗೆ ಇನ್ನಷ್ಟು ಸೌಲಭ್ಯ ಕಲ್ಪಿಸಿದರೆ ಗ್ರಾಮೀಣ ಪ್ರದೇಶದ ಬಡಮಕ್ಕಳು ಕೂಡ ಖಾಸಗಿ ಶಾಲೆಗಳಿಗೆ ಸರಿಸಮವಾಗಿ ಗುಣಮಟ್ಟದ ಶಿಕ್ಷಣ ಪಡೆಯಲು ಸಹಕಾರಿಯಾಗಲಿದೆ‌ ಎನ್ನುತ್ತಾರೆ ಶಾಲೆಯ ಹಳೆಯ ವಿದ್ಯಾರ್ಥಿ ಈರಣ್ಣ ಪೂಜಾರಿ.

ಸರ್ಕಾರಿ ನೌಕರರು, ಗ್ರಾಮದ ಮುಖಂಡರು ಸೇರಿ ಶಾಲೆಗೆ ಸುಣ್ಣ, ಬಣ್ಣದ ವ್ಯವಸ್ಥೆ ಮಾಡುವುದರ ಜೊತೆಗೆ ಸ್ಮಾರ್ಟ್ ಕ್ಲಾಸ್ ವ್ಯವಸ್ಥೆ ಕಲ್ಪಿಸಿರುವುದರಿಂದ ಮಕ್ಕಳ ಕಲಿಕೆಗೆ ಮತ್ತಷ್ಟು ಉತ್ತೇಜನ ಸಿಕ್ಕಿದೆ  ಎನ್ನುತ್ತಾರೆ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕ ಶಾಂತಪ್ಪ.

ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಬಡ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ಸಿಗಬೇಕು ಎನ್ನುವ ಉದ್ದೇಶದಿಂದ ಕಲಬುರಗಿ ಜಿಲ್ಲೆಯ ಸಾಥಖೇಡಾದ ಗ್ರಾಮಸ್ಥರು ತಮ್ಮೂರಿನ ಶಾಲೆಗೆ ಸ್ಮಾರ್ಟ್ ಕ್ಲಾಸ್ ವ್ಯವಸ್ಥೆ ಮಾಡುವ ಮೂಲಕ ರಾಜ್ಯದ ಇತರೆ ಗ್ರಾಮಗಳಿಗೂ ಮಾದರಿಯಾಗಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

1 day ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

2 days ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

2 days ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

2 days ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

2 days ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

2 days ago