Advertisement
MIRROR FOCUS

ಹವಾಮಾನ ಬದಲಾವಣೆ | ಕೃಷಿಯನ್ನು ರಕ್ಷಿಸಲು ಹವಾಮಾನ ಸ್ಮಾರ್ಟ್ ಗ್ರಾಮಗಳು ಬರಲಿವೆ | ತಮಿಳುನಾಡಿನಲ್ಲಿ ಕೃಷಿ ರಕ್ಷಣೆಗೆ ಮುಂದಾದ ಸರ್ಕಾರ |

Share

ಹವಾಮಾನ ಬದಲಾವಣೆ ಈ ದೇಶದಲ್ಲಿ ಬಹುದೊಡ್ಡ ಸಮಸ್ಯೆಯಾಗಿ ಕಾಡುತ್ತಿದೆ. ಬಹುಮುಖ್ಯವಾಗಿ ಕೃಷಿ ವಲಯದಲ್ಲಿ ಹವಾಮಾನ ಬದಲಾವಣೆಯ ಸಮಸ್ಯೆ ತೀವ್ರವಾಗುತ್ತಿದೆ. ಪ್ರಪಂಚದಾದ್ಯಂತ ಈ ಸಮಸ್ಯೆ ಇದ್ದರೂ  ಭಾರತೀಯ ಭಾರತೀಯ ಕೃಷಿಯ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಏರುತ್ತಿರುವ ತಾಪಮಾನಗಳು ಮತ್ತು ಮಳೆಯ ಕೊರತೆ , ಕೆಲವು ಪ್ರದೇಶಗಳಲ್ಲಿ ಬರಗಾಲ ಮತ್ತು ಇತರ ಪ್ರದೇಶಗಳಲ್ಲಿ ಪ್ರವಾಹಗಳು ಈಗ ಸಮಸ್ಯೆಯಾಗುತ್ತಿದೆ. ಇಂತಹ ಘಟನೆಗಳು ಕೃಷಿ ನಾಶಮಾಡಬಹುದು, ಇಳುವರಿಯನ್ನು ಕಡಿಮೆ ಮಾಡಬಹುದು. ಇದರಿಂದ ರೈತರ ಸಂಕಷ್ಟ ಹೆಚ್ಚಾಗುತ್ತಿದೆ. ಇಂತಹ ಸಮಯದಲ್ಲಿ ತಮಿಳುನಾಡಿನಲ್ಲಿ ವಿಶೇಷ ಪ್ರಯತ್ನವೊಂದು ನಡೆಯುತ್ತಿದೆ.

ಈಗಿನ ಹವಾಮಾನ ಬದಲಾವಣೆ ರೈತರ ಬದುಕಿನ ಮೇಲೆ ಪರಿಣಾಮ ಬೀರುವುದಲ್ಲದೆ, ದೇಶಾದ್ಯಂತ ಲಕ್ಷಾಂತರ ಜನರ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ರೈತರಿಗೆ ಇಳುವರಿ ಕೊರತೆಯಾದರೆ ದೇಶದ ಆಹಾರದ ಮೇಲೂ , ಆರ್ಥಿಕತೆಯ ಮೇಲೂ ಪರಿಣಾಮ ಬೀರುತ್ತದೆ. ಇದಕ್ಕಾಗಿ ತಮಿಳುನಾಡಿನಲ್ಲಿ”ಹವಾಮಾನ ಸ್ಮಾರ್ಟ್ ಗ್ರಾಮಗಳು” ಎಂದು ಕರೆಯಲ್ಪಡುವ ವಿಶೇಷ ಯೋಜನೆಗಳಿಗೆ ಸಿದ್ಧತೆ ನಡೆದಿದೆ.ಹವಾಮಾನ ಬದಲಾವಣೆಯು ಮುಂಬರುವ ಎರಡು ದಶಕಗಳಲ್ಲಿ ಜೀವವೈವಿಧ್ಯ, ಬೆಳೆ ಇಳುವರಿ ಮತ್ತು ಆಹಾರ ಭದ್ರತೆಗೆ ಸಾಕಷ್ಟು ಸವಾಲುಗಳನ್ನು ಪ್ರಸ್ತುತಪಡಿಸುವ ಸಾಧ್ಯತೆಯಿದೆ. ಇದಕ್ಕಾಗಿ ತಮಿಳುನಾಡಿನಲ್ಲಿ ಕೃಷಿಗೆ ಈ ಅಪಾಯವನ್ನು ಗುರುತಿಸಿ, ದಕ್ಷಿಣ ಭಾರತದ ರಾಜ್ಯ ಸರ್ಕಾರವು  ಮೊದಲ ಬಾರಿಗೆ ತನ್ನ  ಬಜೆಟ್‌ನಲ್ಲಿ ರೈತರನ್ನು ಬೆಂಬಲಿಸಲು ಮತ್ತು ಆಹಾರ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಹಲವಾರು ಕ್ರಮಗಳಿಗೆ ಮುಂದಾಗಿದೆ.

“ಹವಾಮಾನ ಸ್ಮಾರ್ಟ್ ಗ್ರಾಮಗಳು” ಎಂದು ಕರೆಯಲ್ಪಡುವ ಯೋಜನೆ ಮೂಲಕ ರೈತರಿಗೆ ಹವಾಮಾನ ಬದಲಾವಣೆ ತಗ್ಗಿಸುವ ತಂತ್ರಜ್ಞಾನಗಳನ್ನು ಪ್ರದರ್ಶಿಸಲು ಈ ಗ್ರಾಮಗಳು ಸಹಾಯ ಮಾಡುತ್ತವೆ. ಈ ಕ್ರಮವು ಜಾಗೃತಿ ಮೂಡಿಸಲು ಮತ್ತು ಬದಲಾಗುತ್ತಿರುವ ಹವಾಮಾನದ ಮಾದರಿಗಳಿಗೆ ಹೊಂದಿಕೊಳ್ಳಲು ಮತ್ತು ಅವರ ಬೆಳೆಗಳನ್ನು ರಕ್ಷಿಸಲು ಪ್ರಾಯೋಗಿಕ ಪರಿಹಾರಗಳೊಂದಿಗೆ ರೈತರನ್ನು ಸಜ್ಜುಗೊಳಿಸುವ ಗುರಿಯನ್ನು ಹೊಂದಿದೆ. ಇದಕ್ಕಾಗಿ ಬಜೆಟ್‌ನಲ್ಲಿ ಹಣ ಮೀಸಲಿಡಲಾಗಿದೆ.

ನಿರಂತರ ಕೃಷಿ ಉತ್ಪಾದಕತೆಗಾಗಿ ಆರೋಗ್ಯಕರ ಮಣ್ಣಿನ ಪ್ರಾಮುಖ್ಯತೆಯನ್ನು ಗುರುತಿಸಿ, ಸರ್ಕಾರವು ಮಣ್ಣಿನ ಮೈಕ್ರೋಬಯೋಮ್ ಎಂಜಿನಿಯರಿಂಗ್ ಕುರಿತು ಸಂಶೋಧನೆಯನ್ನು ಘೋಷಿಸಿತು. ಸಂಶೋಧನೆಯು ಮಣ್ಣಿನ ಆರೋಗ್ಯ ಮತ್ತು ಬೆಳೆಗಳ ಇಳುವರಿಗೆ ಗಣನೀಯವಾಗಿ ಕೊಡುಗೆ ನೀಡುತ್ತದೆ ಎಂದು ನಿರೀಕ್ಷಿಸಲಾಗಿದೆ. ಈ ಯೋಜನೆಗೆ 1.39 ಕೋಟಿ ರೂಪಾಯಿ ನೀಡಿದೆ.

ರೈತರು ಮತ್ತು ನಗರ ಗ್ರಾಹಕರ ನಡುವಿನ ಅಂತರವನ್ನು ಕಡಿಮೆ ಮಾಡಲು ಸರ್ಕಾರವು ರೈತರ ಮಾರುಕಟ್ಟೆಗಳ ಮಾದರಿಯಲ್ಲಿ 100 ರೈತ ಮಳಿಗೆಗಳನ್ನು ಸ್ಥಾಪಿಸಲು ಯೋಜಿಸಿದೆ. ಈ ಮಳಿಗೆಗಳು ನಗರ ಗ್ರಾಹಕರಿಗೆ ಉತ್ತಮ ಗುಣಮಟ್ಟದ ಕೃಷಿ ಉತ್ಪನ್ನಗಳು ಮತ್ತು ಮೌಲ್ಯವರ್ಧಿತ ಉತ್ಪನ್ನಗಳಿಗೆ ನೇರ ಪ್ರವೇಶವನ್ನು ಒದಗಿಸುತ್ತವೆ. ರೈತರು ತಮ್ಮ ಉತ್ಪನ್ನಗಳ ನೇರ ಖರೀದಿಯಿಂದ ನ್ಯಾಯಯುತ ಬೆಲೆಗೆ ಪ್ರಯೋಜನ ಪಡೆಯುತ್ತಾರೆ, ಆದರೆ ಗ್ರಾಹಕರು ತಾಜಾ ಮತ್ತು ಸ್ಥಳೀಯವಾಗಿ ಮೂಲದ ಆಹಾರವನ್ನು ಖರೀದಿಸುತ್ತಾರೆ.

ತಮಿಳುನಾಡು ರಾಜ್ಯದ ಮಾದರಿಯಲ್ಲಿಯೇ ಕರ್ನಾಟಕವೂ  ಕೃಷಿ ಭಾಗ್ಯ ಯೋಜನೆಯ ಮೂಲಕ ಮಳೆ ನೀರು ಉಳಿತಾಯ ಸೇರಿದಂತೆ ಹಲವು ಕ್ರಮ ಕೈಗೊಂಡರೆ, ಕೇಂದ್ರ ಸರ್ಕಾರವು ಸೋಲಾರ್‌ ಬಳಕೆಗೆ ಆದ್ಯತೆ ನೀಡಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸ್ಪೇನ್‌ನಲ್ಲಿ ಭೀಕರ ಕಾಡ್ಗಿಚ್ಚು | ಕಿತ್ತಳೆ ಬಣ್ಣಕ್ಕೆ ತಿರುಗಿದ ಆಕಾಶ, ಭೀಕರ ಕಾಡ್ಗಿಚ್ಚಿಗೆ 12 ಬಲಿ- ಸ್ಪೇನ್‌ನಲ್ಲಿ ಭಯಾನಕ ದುರಂತ

ದಕ್ಷಿಣ ಸ್ಪೇನ್‌ನಲ್ಲಿ ಭೀಕರ ಕಾಡ್ಗಿಚ್ಚಿನಿಂದ 12 ಮಂದಿ ಸಾವನ್ನಪ್ಪಿದ್ದು, 23 ಮಂದಿ ನಾಪತ್ತೆಯಾಗಿದ್ದಾರೆ.…

3 hours ago

ತೀವ್ರ ಬಿಸಿಗೆ ತುತ್ತಾಗುವ ನಗರಗಳಲ್ಲಿ ಭಾರತ ಅಗ್ರಸ್ಥಾನ: ವಿಶ್ವದ ಟಾಪ್-50 ಪಟ್ಟಿಯಲ್ಲಿ 14 ಭಾರತೀಯ ನಗರಗಳು

ತೀವ್ರ ಬಿಸಿಯ ಅಪಾಯದಲ್ಲಿರುವ ವಿಶ್ವದ ಟಾಪ್-50 ನಗರಗಳಲ್ಲಿ 14 ಭಾರತೀಯ ನಗರಗಳು ಸೇರಿವೆ.…

4 hours ago

ಚೀನಾಕ್ಕೆ ಹಲಸಿನ ಹಣ್ಣು ರಫ್ತು: ಬಾಂಗ್ಲಾದೇಶದ ವಿದೇಶಿ ವಿನಿಮಯ ಆದಾಯ ಹೆಚ್ಚುವ ನಿರೀಕ್ಷೆ

ಚೀನಾಕ್ಕೆ ಹಲಸಿನ ಹಣ್ಣು ರಫ್ತು ಹೆಚ್ಚಿಸುವ ಮೂಲಕ ವಿದೇಶಿ ವಿನಿಮಯ ಆದಾಯವನ್ನು ಹೆಚ್ಚಿಸಲು…

7 hours ago

ಹವಾಮಾನ ವರದಿ | 10-07-2026 | ಕರ್ನಾಟಕದಲ್ಲಿ ಮುಂಗಾರಿಗೆ ತಾತ್ಕಾಲಿಕ ವಿರಾಮ..! ಕರಾವಳಿಯಲ್ಲಿ ಅಲ್ಲಲ್ಲಿ ಸಾಧಾರಣ ಮಳೆ, ಒಳನಾಡಿನಲ್ಲಿ ಬಿಸಿಲು ಹೆಚ್ಚಳ

ಕರ್ನಾಟಕದಲ್ಲಿ ಮುಂಗಾರು ತಾತ್ಕಾಲಿಕ ವಿರಾಮ ಪಡೆದಿದ್ದು, ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಮಾತ್ರ…

1 day ago

ನೆಟ್‌ವರ್ಕ್ ಇಲ್ಲದಿದ್ದರೂ ಕರೆ ಮಾಡಬಹುದು…! ₹1.34 ಲಕ್ಷಕ್ಕೆ BSNL ಸ್ಯಾಟಲೈಟ್ ಫೋನ್ ಬಿಡುಗಡೆ

ಮೊಬೈಲ್ ನೆಟ್‌ವರ್ಕ್ ಇಲ್ಲದ ಪ್ರದೇಶಗಳಲ್ಲಿಯೂ ಸಂಪರ್ಕಕ್ಕಾಗಿ BSNL ₹1.34 ಲಕ್ಷದ ಸ್ಯಾಟಲೈಟ್ ಫೋನ್…

1 day ago

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿ ಪ್ರಶ್ನಿಸಿದ ಬಾಂಬೆ ಹೈಕೋರ್ಟ್ – ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದ ಕೋರ್ಟ್

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿಗೆ ಸಂಬಂಧಿಸಿದ ಎಫ್‌ಡಿಎ ಕ್ರಮವನ್ನು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.…

2 days ago