Advertisement
MIRROR FOCUS

ಹವಾಮಾನ ಬದಲಾವಣೆ | ಕೃಷಿಯನ್ನು ರಕ್ಷಿಸಲು ಹವಾಮಾನ ಸ್ಮಾರ್ಟ್ ಗ್ರಾಮಗಳು ಬರಲಿವೆ | ತಮಿಳುನಾಡಿನಲ್ಲಿ ಕೃಷಿ ರಕ್ಷಣೆಗೆ ಮುಂದಾದ ಸರ್ಕಾರ |

Share

ಹವಾಮಾನ ಬದಲಾವಣೆ ಈ ದೇಶದಲ್ಲಿ ಬಹುದೊಡ್ಡ ಸಮಸ್ಯೆಯಾಗಿ ಕಾಡುತ್ತಿದೆ. ಬಹುಮುಖ್ಯವಾಗಿ ಕೃಷಿ ವಲಯದಲ್ಲಿ ಹವಾಮಾನ ಬದಲಾವಣೆಯ ಸಮಸ್ಯೆ ತೀವ್ರವಾಗುತ್ತಿದೆ. ಪ್ರಪಂಚದಾದ್ಯಂತ ಈ ಸಮಸ್ಯೆ ಇದ್ದರೂ  ಭಾರತೀಯ ಭಾರತೀಯ ಕೃಷಿಯ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಏರುತ್ತಿರುವ ತಾಪಮಾನಗಳು ಮತ್ತು ಮಳೆಯ ಕೊರತೆ , ಕೆಲವು ಪ್ರದೇಶಗಳಲ್ಲಿ ಬರಗಾಲ ಮತ್ತು ಇತರ ಪ್ರದೇಶಗಳಲ್ಲಿ ಪ್ರವಾಹಗಳು ಈಗ ಸಮಸ್ಯೆಯಾಗುತ್ತಿದೆ. ಇಂತಹ ಘಟನೆಗಳು ಕೃಷಿ ನಾಶಮಾಡಬಹುದು, ಇಳುವರಿಯನ್ನು ಕಡಿಮೆ ಮಾಡಬಹುದು. ಇದರಿಂದ ರೈತರ ಸಂಕಷ್ಟ ಹೆಚ್ಚಾಗುತ್ತಿದೆ. ಇಂತಹ ಸಮಯದಲ್ಲಿ ತಮಿಳುನಾಡಿನಲ್ಲಿ ವಿಶೇಷ ಪ್ರಯತ್ನವೊಂದು ನಡೆಯುತ್ತಿದೆ.

ಈಗಿನ ಹವಾಮಾನ ಬದಲಾವಣೆ ರೈತರ ಬದುಕಿನ ಮೇಲೆ ಪರಿಣಾಮ ಬೀರುವುದಲ್ಲದೆ, ದೇಶಾದ್ಯಂತ ಲಕ್ಷಾಂತರ ಜನರ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ರೈತರಿಗೆ ಇಳುವರಿ ಕೊರತೆಯಾದರೆ ದೇಶದ ಆಹಾರದ ಮೇಲೂ , ಆರ್ಥಿಕತೆಯ ಮೇಲೂ ಪರಿಣಾಮ ಬೀರುತ್ತದೆ. ಇದಕ್ಕಾಗಿ ತಮಿಳುನಾಡಿನಲ್ಲಿ”ಹವಾಮಾನ ಸ್ಮಾರ್ಟ್ ಗ್ರಾಮಗಳು” ಎಂದು ಕರೆಯಲ್ಪಡುವ ವಿಶೇಷ ಯೋಜನೆಗಳಿಗೆ ಸಿದ್ಧತೆ ನಡೆದಿದೆ.ಹವಾಮಾನ ಬದಲಾವಣೆಯು ಮುಂಬರುವ ಎರಡು ದಶಕಗಳಲ್ಲಿ ಜೀವವೈವಿಧ್ಯ, ಬೆಳೆ ಇಳುವರಿ ಮತ್ತು ಆಹಾರ ಭದ್ರತೆಗೆ ಸಾಕಷ್ಟು ಸವಾಲುಗಳನ್ನು ಪ್ರಸ್ತುತಪಡಿಸುವ ಸಾಧ್ಯತೆಯಿದೆ. ಇದಕ್ಕಾಗಿ ತಮಿಳುನಾಡಿನಲ್ಲಿ ಕೃಷಿಗೆ ಈ ಅಪಾಯವನ್ನು ಗುರುತಿಸಿ, ದಕ್ಷಿಣ ಭಾರತದ ರಾಜ್ಯ ಸರ್ಕಾರವು  ಮೊದಲ ಬಾರಿಗೆ ತನ್ನ  ಬಜೆಟ್‌ನಲ್ಲಿ ರೈತರನ್ನು ಬೆಂಬಲಿಸಲು ಮತ್ತು ಆಹಾರ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಹಲವಾರು ಕ್ರಮಗಳಿಗೆ ಮುಂದಾಗಿದೆ.

“ಹವಾಮಾನ ಸ್ಮಾರ್ಟ್ ಗ್ರಾಮಗಳು” ಎಂದು ಕರೆಯಲ್ಪಡುವ ಯೋಜನೆ ಮೂಲಕ ರೈತರಿಗೆ ಹವಾಮಾನ ಬದಲಾವಣೆ ತಗ್ಗಿಸುವ ತಂತ್ರಜ್ಞಾನಗಳನ್ನು ಪ್ರದರ್ಶಿಸಲು ಈ ಗ್ರಾಮಗಳು ಸಹಾಯ ಮಾಡುತ್ತವೆ. ಈ ಕ್ರಮವು ಜಾಗೃತಿ ಮೂಡಿಸಲು ಮತ್ತು ಬದಲಾಗುತ್ತಿರುವ ಹವಾಮಾನದ ಮಾದರಿಗಳಿಗೆ ಹೊಂದಿಕೊಳ್ಳಲು ಮತ್ತು ಅವರ ಬೆಳೆಗಳನ್ನು ರಕ್ಷಿಸಲು ಪ್ರಾಯೋಗಿಕ ಪರಿಹಾರಗಳೊಂದಿಗೆ ರೈತರನ್ನು ಸಜ್ಜುಗೊಳಿಸುವ ಗುರಿಯನ್ನು ಹೊಂದಿದೆ. ಇದಕ್ಕಾಗಿ ಬಜೆಟ್‌ನಲ್ಲಿ ಹಣ ಮೀಸಲಿಡಲಾಗಿದೆ.

ನಿರಂತರ ಕೃಷಿ ಉತ್ಪಾದಕತೆಗಾಗಿ ಆರೋಗ್ಯಕರ ಮಣ್ಣಿನ ಪ್ರಾಮುಖ್ಯತೆಯನ್ನು ಗುರುತಿಸಿ, ಸರ್ಕಾರವು ಮಣ್ಣಿನ ಮೈಕ್ರೋಬಯೋಮ್ ಎಂಜಿನಿಯರಿಂಗ್ ಕುರಿತು ಸಂಶೋಧನೆಯನ್ನು ಘೋಷಿಸಿತು. ಸಂಶೋಧನೆಯು ಮಣ್ಣಿನ ಆರೋಗ್ಯ ಮತ್ತು ಬೆಳೆಗಳ ಇಳುವರಿಗೆ ಗಣನೀಯವಾಗಿ ಕೊಡುಗೆ ನೀಡುತ್ತದೆ ಎಂದು ನಿರೀಕ್ಷಿಸಲಾಗಿದೆ. ಈ ಯೋಜನೆಗೆ 1.39 ಕೋಟಿ ರೂಪಾಯಿ ನೀಡಿದೆ.

ರೈತರು ಮತ್ತು ನಗರ ಗ್ರಾಹಕರ ನಡುವಿನ ಅಂತರವನ್ನು ಕಡಿಮೆ ಮಾಡಲು ಸರ್ಕಾರವು ರೈತರ ಮಾರುಕಟ್ಟೆಗಳ ಮಾದರಿಯಲ್ಲಿ 100 ರೈತ ಮಳಿಗೆಗಳನ್ನು ಸ್ಥಾಪಿಸಲು ಯೋಜಿಸಿದೆ. ಈ ಮಳಿಗೆಗಳು ನಗರ ಗ್ರಾಹಕರಿಗೆ ಉತ್ತಮ ಗುಣಮಟ್ಟದ ಕೃಷಿ ಉತ್ಪನ್ನಗಳು ಮತ್ತು ಮೌಲ್ಯವರ್ಧಿತ ಉತ್ಪನ್ನಗಳಿಗೆ ನೇರ ಪ್ರವೇಶವನ್ನು ಒದಗಿಸುತ್ತವೆ. ರೈತರು ತಮ್ಮ ಉತ್ಪನ್ನಗಳ ನೇರ ಖರೀದಿಯಿಂದ ನ್ಯಾಯಯುತ ಬೆಲೆಗೆ ಪ್ರಯೋಜನ ಪಡೆಯುತ್ತಾರೆ, ಆದರೆ ಗ್ರಾಹಕರು ತಾಜಾ ಮತ್ತು ಸ್ಥಳೀಯವಾಗಿ ಮೂಲದ ಆಹಾರವನ್ನು ಖರೀದಿಸುತ್ತಾರೆ.

ತಮಿಳುನಾಡು ರಾಜ್ಯದ ಮಾದರಿಯಲ್ಲಿಯೇ ಕರ್ನಾಟಕವೂ  ಕೃಷಿ ಭಾಗ್ಯ ಯೋಜನೆಯ ಮೂಲಕ ಮಳೆ ನೀರು ಉಳಿತಾಯ ಸೇರಿದಂತೆ ಹಲವು ಕ್ರಮ ಕೈಗೊಂಡರೆ, ಕೇಂದ್ರ ಸರ್ಕಾರವು ಸೋಲಾರ್‌ ಬಳಕೆಗೆ ಆದ್ಯತೆ ನೀಡಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪಶ್ಚಿಮ ಘಟ್ಟಕ್ಕೆ ಮತ್ತೆ ಕೇಂದ್ರದ ಹೊಸ ನೋಟಿಫಿಕೇಶನ್ – ಕರ್ನಾಟಕದ ಸಾವಿರಾರು ಗ್ರಾಮಗಳ ಮೇಲೆ ಪರಿಣಾಮವೇ?

ಪಶ್ಚಿಮ ಘಟ್ಟದ 56,825 ಚದರ ಕಿ.ಮೀ. ಪ್ರದೇಶವನ್ನು ಪರಿಸರ ಸೂಕ್ಷ್ಮ ವಲಯವಾಗಿ ಘೋಷಿಸಲು…

43 minutes ago

ಸಮಯ ತಪ್ಪಿ ತಿಂದ ಆಹಾರವೇ ವಿಷವಾಗಬಹುದು – ರಾಘವೇಶ್ವರ ಶ್ರೀ

ಹಿತವಾದ ಆಹಾರವನ್ನು ಮಿತ ಪ್ರಮಾಣದಲ್ಲಿ ಮತ್ತು ಸಕಾಲದಲ್ಲಿ ಸೇವಿಸುವುದು ಆರೋಗ್ಯಕರ ಜೀವನದ ಮೂಲಮಂತ್ರ…

11 hours ago

ಭಾರೀ ಮಳೆ ಹಿನ್ನೆಲೆ – ಆಗಸ್ಟ್‌ 1ರಂದು ದಕ್ಷಿಣ ಕನ್ನಡದಲ್ಲಿ ಶಾಲೆ-ಕಾಲೇಜುಗಳಿಗೆ ರಜೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು, ಐಟಿಐ…

12 hours ago

ಹವಾಮಾನ ವರದಿ | 31-06-2026 | ಆಗಸ್ಟ್ 4ಕ್ಕೆ ಇನ್ನೊಂದು ವಾಯುಭಾರ ಕುಸಿತ ಸಾಧ್ಯತೆ..?

ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 1ರವರೆಗೆ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ…

15 hours ago

ಸುಳ್ಯ ಸುತ್ತಮುತ್ತ ಭಾರೀ ಮಳೆ – ಬಾಳುಗೋಡಿನಲ್ಲಿ ಈ ವರ್ಷದ ಮೊದಲ ಸೇತುವೆ ಮುಳುಗಡೆ, ಹೊಳೆ-ತೋಡುಗಳು ತುಂಬಿ ಹರಿವು

ಸುಳ್ಯ ತಾಲೂಕಿನ ಬಾಳುಗೋಡು, ಹರಿಹರ, ಬಳ್ಪ, ಗುತ್ತಿಗಾರು, ಸುಬ್ರಹ್ಮಣ್ಯ ಸೇರಿದಂತೆ ಹಲವು ಗ್ರಾಮಗಳಲ್ಲಿ…

15 hours ago

ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ – ಬಾಂಗ್ಲಾದೇಶದ ವಿಜ್ಞಾನಿಗಳಿಂದ ಹೊಸ ತಂತ್ರಜ್ಞಾನಕ್ಕೆ ಪೇಟೆಂಟ್

ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…

22 hours ago