ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

March 28, 2026
7:38 AM
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್ ಇಲಾಖೆ ಸೂಚಿಸಿದೆ. ವಿದ್ಯಾರ್ಥಿಗಳ ರಕ್ಷಣೆಗಾಗಿ ಡ್ರಗ್ಸ್ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ–ಕಾಲೇಜುಗಳ ಸುತ್ತಮುತ್ತ ಧೂಮಪಾನ ಮತ್ತು ಮಾದಕ ವಸ್ತುಗಳ ಮಾರಾಟಕ್ಕೆ ಕಡಿವಾಣ ಹಾಕಲು ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ನಾರ್ಕೋ ಸಮನ್ವಯ ಕೇಂದ್ರ ಸಮಿತಿ ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ಅವರು ಮಾತನಾಡಿ, ಶಿಕ್ಷಣ ಸಂಸ್ಥೆಗಳ ಸನಿಹದಲ್ಲಿರುವ ಅಂಗಡಿ ಹಾಗೂ ವಾಣಿಜ್ಯ ಕೇಂದ್ರಗಳಲ್ಲಿ ಸಿಗರೇಟ್, ತಂಬಾಕು ಸೇರಿದಂತೆ ಯಾವುದೇ ಧೂಮಪಾನ ವಸ್ತುಗಳ ಮಾರಾಟ ಕಂಡುಬಂದರೆ ಅವರ ಲೈಸನ್ಸ್ ರದ್ದುಗೊಳಿಸುವಂತೆ ಸೂಚಿಸಿದರು.

ಶಾಲಾ ಪರಿಸರದಲ್ಲಿ ಧೂಮಪಾನ ಮತ್ತು ಮಾದಕ ವಸ್ತುಗಳ ಚಟುವಟಿಕೆಗಳು ನಡೆಯದಂತೆ ಎಲ್ಲಾ ಶಾಲಾ ಎಸ್‌ಡಿಎಂಸಿಗಳು ಪರಿಶೀಲನೆ ನಡೆಸಬೇಕು. ಈ ಕುರಿತು ಶಾಲಾ ಶಿಕ್ಷಣ ಇಲಾಖೆ ವರದಿ ಪಡೆಯಬೇಕೆಂದು ಅವರು ತಿಳಿಸಿದರು.

ಶಾಲಾ–ಕಾಲೇಜುಗಳಲ್ಲಿ ಮಾದಕ ವಸ್ತುಗಳ ವಿರುದ್ಧ ಜಾಗೃತಿ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸುವಂತೆ ಸೂಚನೆ ನೀಡಲಾಗಿದೆ. ವಿವಿಧ ಇಲಾಖೆ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಜನರಲ್ಲಿ ಡ್ರಗ್ಸ್ ಮುಕ್ತ ಅಭಿಯಾನವನ್ನು ಬಲಪಡಿಸಬೇಕು ಎಂದು ಹೇಳಿದರು.

ಹೋಂಸ್ಟೇ ಮತ್ತು ಲಾಡ್ಜ್‌ಗಳಲ್ಲಿ ಆಗ್ಗಿಂದಾಗೆ ತಪಾಸಣೆ ನಡೆಸುವುದು, ಕರಾವಳಿ ಭದ್ರತಾ ಪೊಲೀಸರು ಬೋಟ್‌ಗಳನ್ನು ಅನಿರೀಕ್ಷಿತವಾಗಿ ಪರಿಶೀಲಿಸುವುದು, ಕೆ.ಎಸ್.ಆರ್.ಟಿ.ಸಿ ಬಸ್‌ಗಳಲ್ಲಿ ಪಾರ್ಸೆಲ್‌ಗಳ ಮೇಲೆ ನಿಗಾವಹಿಸುವಂತೆ ಸೂಚಿಸಲಾಗಿದೆ.

ಇದಲ್ಲದೆ ಕೈಗಾರಿಕಾ ಘಟಕಗಳು, ರೈಲ್ವೆ ನಿಲ್ದಾಣಗಳು ಮತ್ತು ವಿಮಾನ ನಿಲ್ದಾಣಗಳಲ್ಲಿ ಮಾದಕ ವಸ್ತುಗಳ ವಿರುದ್ಧ ನಿಗಾವಹಿಸಲು ಸೂಚಿಸಲಾಗಿದೆ.

ಡ್ರಗ್ಸ್ ಮತ್ತು ಇತರೆ ಮಾದಕ ವಸ್ತುಗಳ ಚಟಕ್ಕೆ ಒಳಗಾದ ಮಕ್ಕಳನ್ನು ಹೊರತೆಗೆಯಲು ಜಿಲ್ಲಾ ವೆನ್‌ಲಾಕ್ ಆಸ್ಪತ್ರೆಯಲ್ಲಿ ವಿಶೇಷ ಕೌನ್ಸಿಲಿಂಗ್ ಕೇಂದ್ರ ಕಾರ್ಯನಿರ್ವಹಿಸುತ್ತಿದೆ. ಪಾಲಕರು ತಮ್ಮ ಮಕ್ಕಳನ್ನು ಇಲ್ಲಿ ಕರೆತಂದು ಚಿಕಿತ್ಸೆ ಪಡೆಯಬಹುದಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಮಾಹಿತಿ ನೀಡಿದರು.

ಸಭೆಯಲ್ಲಿ ಉಪ ಪೊಲೀಸ್ ಆಯುಕ್ತ ಮಿಥುನ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಶಿಕಾಂತ್ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Authorities in Mangalore have issued strict instructions to cancel licenses of shops selling cigarettes, tobacco, or drugs near schools and colleges. Increased inspections and awareness campaigns are being implemented to ensure student safety and curb substance abuse.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ
July 21, 2026
11:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ
July 21, 2026
4:32 PM
by: ಸಾಯಿಶೇಖರ್ ಕರಿಕಳ
ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ
July 20, 2026
10:59 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್
July 20, 2026
10:18 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror