Advertisement
ಸುದ್ದಿಗಳು

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

Share

ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ–ಕಾಲೇಜುಗಳ ಸುತ್ತಮುತ್ತ ಧೂಮಪಾನ ಮತ್ತು ಮಾದಕ ವಸ್ತುಗಳ ಮಾರಾಟಕ್ಕೆ ಕಡಿವಾಣ ಹಾಕಲು ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ನಾರ್ಕೋ ಸಮನ್ವಯ ಕೇಂದ್ರ ಸಮಿತಿ ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ಅವರು ಮಾತನಾಡಿ, ಶಿಕ್ಷಣ ಸಂಸ್ಥೆಗಳ ಸನಿಹದಲ್ಲಿರುವ ಅಂಗಡಿ ಹಾಗೂ ವಾಣಿಜ್ಯ ಕೇಂದ್ರಗಳಲ್ಲಿ ಸಿಗರೇಟ್, ತಂಬಾಕು ಸೇರಿದಂತೆ ಯಾವುದೇ ಧೂಮಪಾನ ವಸ್ತುಗಳ ಮಾರಾಟ ಕಂಡುಬಂದರೆ ಅವರ ಲೈಸನ್ಸ್ ರದ್ದುಗೊಳಿಸುವಂತೆ ಸೂಚಿಸಿದರು.

ಶಾಲಾ ಪರಿಸರದಲ್ಲಿ ಧೂಮಪಾನ ಮತ್ತು ಮಾದಕ ವಸ್ತುಗಳ ಚಟುವಟಿಕೆಗಳು ನಡೆಯದಂತೆ ಎಲ್ಲಾ ಶಾಲಾ ಎಸ್‌ಡಿಎಂಸಿಗಳು ಪರಿಶೀಲನೆ ನಡೆಸಬೇಕು. ಈ ಕುರಿತು ಶಾಲಾ ಶಿಕ್ಷಣ ಇಲಾಖೆ ವರದಿ ಪಡೆಯಬೇಕೆಂದು ಅವರು ತಿಳಿಸಿದರು.

ಶಾಲಾ–ಕಾಲೇಜುಗಳಲ್ಲಿ ಮಾದಕ ವಸ್ತುಗಳ ವಿರುದ್ಧ ಜಾಗೃತಿ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸುವಂತೆ ಸೂಚನೆ ನೀಡಲಾಗಿದೆ. ವಿವಿಧ ಇಲಾಖೆ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಜನರಲ್ಲಿ ಡ್ರಗ್ಸ್ ಮುಕ್ತ ಅಭಿಯಾನವನ್ನು ಬಲಪಡಿಸಬೇಕು ಎಂದು ಹೇಳಿದರು.

ಹೋಂಸ್ಟೇ ಮತ್ತು ಲಾಡ್ಜ್‌ಗಳಲ್ಲಿ ಆಗ್ಗಿಂದಾಗೆ ತಪಾಸಣೆ ನಡೆಸುವುದು, ಕರಾವಳಿ ಭದ್ರತಾ ಪೊಲೀಸರು ಬೋಟ್‌ಗಳನ್ನು ಅನಿರೀಕ್ಷಿತವಾಗಿ ಪರಿಶೀಲಿಸುವುದು, ಕೆ.ಎಸ್.ಆರ್.ಟಿ.ಸಿ ಬಸ್‌ಗಳಲ್ಲಿ ಪಾರ್ಸೆಲ್‌ಗಳ ಮೇಲೆ ನಿಗಾವಹಿಸುವಂತೆ ಸೂಚಿಸಲಾಗಿದೆ.

ಇದಲ್ಲದೆ ಕೈಗಾರಿಕಾ ಘಟಕಗಳು, ರೈಲ್ವೆ ನಿಲ್ದಾಣಗಳು ಮತ್ತು ವಿಮಾನ ನಿಲ್ದಾಣಗಳಲ್ಲಿ ಮಾದಕ ವಸ್ತುಗಳ ವಿರುದ್ಧ ನಿಗಾವಹಿಸಲು ಸೂಚಿಸಲಾಗಿದೆ.

ಡ್ರಗ್ಸ್ ಮತ್ತು ಇತರೆ ಮಾದಕ ವಸ್ತುಗಳ ಚಟಕ್ಕೆ ಒಳಗಾದ ಮಕ್ಕಳನ್ನು ಹೊರತೆಗೆಯಲು ಜಿಲ್ಲಾ ವೆನ್‌ಲಾಕ್ ಆಸ್ಪತ್ರೆಯಲ್ಲಿ ವಿಶೇಷ ಕೌನ್ಸಿಲಿಂಗ್ ಕೇಂದ್ರ ಕಾರ್ಯನಿರ್ವಹಿಸುತ್ತಿದೆ. ಪಾಲಕರು ತಮ್ಮ ಮಕ್ಕಳನ್ನು ಇಲ್ಲಿ ಕರೆತಂದು ಚಿಕಿತ್ಸೆ ಪಡೆಯಬಹುದಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಮಾಹಿತಿ ನೀಡಿದರು.

ಸಭೆಯಲ್ಲಿ ಉಪ ಪೊಲೀಸ್ ಆಯುಕ್ತ ಮಿಥುನ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಶಿಕಾಂತ್ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Authorities in Mangalore have issued strict instructions to cancel licenses of shops selling cigarettes, tobacco, or drugs near schools and colleges. Increased inspections and awareness campaigns are being implemented to ensure student safety and curb substance abuse.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

3 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

11 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

14 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

20 hours ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

1 day ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

1 day ago