ಗುಜರಾತಿನ ಮುಂದ್ರಾ ಬಂದರು ಮೂಲಕ ಅಡಿಕೆ ಕಳ್ಳಸಾಗಾಣಿಕೆಯ ಮೂಲಕ ಆಮದು ಮಾಡುವ ಪ್ರಯತ್ನವನ್ನು ಡೈರೆಕ್ಟರೇಟ್ ಆಫ್ ರೆವೆನ್ಯೂ ಇಂಟೆಲಿಜೆನ್ಸ್ (DRI) ಅಧಿಕಾರಿಗಳ ತಂಡ ಪತ್ತೆ ಮಾಡಿದೆ. ಸುಮಾರು 81.85 ಮೆಟ್ರಿಕ್ ಟನ್ ಅಡಿಕೆಯನ್ನು ವಶಪಡಿಸಿಕೊಂಡಿದೆ.
ಆಮದು ಸರಕನ್ನು ತಪ್ಪಾಗಿ ಘೋಷಣೆ ಮಾಡಿ ಅಡಿಕೆಯನ್ನು ಭಾರತಕ್ಕೆ ಕಳ್ಳಸಾಗಾಣಿಕೆ ಮೂಲಕ ತರಲಾಗಿತ್ತು.ಈ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸಿತ್ತು.ಯುಎಇಯ ಜೆಬೆಲ್ ಅಲಿ ಬಂದರಿನಿಂದ ಕಂಟೈನರ್ಗಳಲ್ಲಿ ಸರಕುಗಳು ಮುಂದ್ರಾ ಬಂದರಿಗೆ ಬಂದಿತ್ತು.7.1 ಕೋಟಿ ಮೌಲ್ಯದ 81.85 ಮೆಟ್ರಿಕ್ ಟನ್ ಅಡಿಕೆಯನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣದ ಪ್ರಮುಖ ಆರೋಪಿಯನ್ನು ಕಸ್ಟಮ್ಸ್ ಕಾಯ್ದೆಯಡಿ ಬಂಧಿಸಲಾಗಿದೆ. ಅಡಿಕೆ ಆಮದು ಮೇಲೆ 110% ತೆರಿಗೆ ವಿಧಿಸಲಾಗುತ್ತಿದೆ.ವಿದೇಶಿ ಮುಕ್ತ ವ್ಯಾಪಾರ ನೀತಿಯ ಅಡಿಯಲ್ಲಿ ಅಡಿಕೆ ಆಮದು ಕೂಡಾ ನಿಷೇಧಿಸಿದೆ. ಹೀಗಾಗಿ ಈಗ ಅಡಿಕೆ ಆಮದು ಮೇಲೆ ಬಿಗುವಾದ ಕ್ರಮ ಕೈಗೊಳ್ಳಲಾಗುತ್ತಿದೆ.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…