ಗುಜರಾತಿನ ಮುಂದ್ರಾ ಬಂದರು ಮೂಲಕ ಅಡಿಕೆ ಕಳ್ಳಸಾಗಾಣಿಕೆಯ ಮೂಲಕ ಆಮದು ಮಾಡುವ ಪ್ರಯತ್ನವನ್ನು ಡೈರೆಕ್ಟರೇಟ್ ಆಫ್ ರೆವೆನ್ಯೂ ಇಂಟೆಲಿಜೆನ್ಸ್ (DRI) ಅಧಿಕಾರಿಗಳ ತಂಡ ಪತ್ತೆ ಮಾಡಿದೆ. ಸುಮಾರು 81.85 ಮೆಟ್ರಿಕ್ ಟನ್ ಅಡಿಕೆಯನ್ನು ವಶಪಡಿಸಿಕೊಂಡಿದೆ.
ಆಮದು ಸರಕನ್ನು ತಪ್ಪಾಗಿ ಘೋಷಣೆ ಮಾಡಿ ಅಡಿಕೆಯನ್ನು ಭಾರತಕ್ಕೆ ಕಳ್ಳಸಾಗಾಣಿಕೆ ಮೂಲಕ ತರಲಾಗಿತ್ತು.ಈ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸಿತ್ತು.ಯುಎಇಯ ಜೆಬೆಲ್ ಅಲಿ ಬಂದರಿನಿಂದ ಕಂಟೈನರ್ಗಳಲ್ಲಿ ಸರಕುಗಳು ಮುಂದ್ರಾ ಬಂದರಿಗೆ ಬಂದಿತ್ತು.7.1 ಕೋಟಿ ಮೌಲ್ಯದ 81.85 ಮೆಟ್ರಿಕ್ ಟನ್ ಅಡಿಕೆಯನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣದ ಪ್ರಮುಖ ಆರೋಪಿಯನ್ನು ಕಸ್ಟಮ್ಸ್ ಕಾಯ್ದೆಯಡಿ ಬಂಧಿಸಲಾಗಿದೆ. ಅಡಿಕೆ ಆಮದು ಮೇಲೆ 110% ತೆರಿಗೆ ವಿಧಿಸಲಾಗುತ್ತಿದೆ.ವಿದೇಶಿ ಮುಕ್ತ ವ್ಯಾಪಾರ ನೀತಿಯ ಅಡಿಯಲ್ಲಿ ಅಡಿಕೆ ಆಮದು ಕೂಡಾ ನಿಷೇಧಿಸಿದೆ. ಹೀಗಾಗಿ ಈಗ ಅಡಿಕೆ ಆಮದು ಮೇಲೆ ಬಿಗುವಾದ ಕ್ರಮ ಕೈಗೊಳ್ಳಲಾಗುತ್ತಿದೆ.
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…