ಗುಜರಾತಿನ ಮುಂದ್ರಾ ಬಂದರು ಮೂಲಕ ಅಡಿಕೆ ಕಳ್ಳಸಾಗಾಣಿಕೆಯ ಮೂಲಕ ಆಮದು ಮಾಡುವ ಪ್ರಯತ್ನವನ್ನು ಡೈರೆಕ್ಟರೇಟ್ ಆಫ್ ರೆವೆನ್ಯೂ ಇಂಟೆಲಿಜೆನ್ಸ್ (DRI) ಅಧಿಕಾರಿಗಳ ತಂಡ ಪತ್ತೆ ಮಾಡಿದೆ. ಸುಮಾರು 81.85 ಮೆಟ್ರಿಕ್ ಟನ್ ಅಡಿಕೆಯನ್ನು ವಶಪಡಿಸಿಕೊಂಡಿದೆ.
ಆಮದು ಸರಕನ್ನು ತಪ್ಪಾಗಿ ಘೋಷಣೆ ಮಾಡಿ ಅಡಿಕೆಯನ್ನು ಭಾರತಕ್ಕೆ ಕಳ್ಳಸಾಗಾಣಿಕೆ ಮೂಲಕ ತರಲಾಗಿತ್ತು.ಈ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸಿತ್ತು.ಯುಎಇಯ ಜೆಬೆಲ್ ಅಲಿ ಬಂದರಿನಿಂದ ಕಂಟೈನರ್ಗಳಲ್ಲಿ ಸರಕುಗಳು ಮುಂದ್ರಾ ಬಂದರಿಗೆ ಬಂದಿತ್ತು.7.1 ಕೋಟಿ ಮೌಲ್ಯದ 81.85 ಮೆಟ್ರಿಕ್ ಟನ್ ಅಡಿಕೆಯನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣದ ಪ್ರಮುಖ ಆರೋಪಿಯನ್ನು ಕಸ್ಟಮ್ಸ್ ಕಾಯ್ದೆಯಡಿ ಬಂಧಿಸಲಾಗಿದೆ. ಅಡಿಕೆ ಆಮದು ಮೇಲೆ 110% ತೆರಿಗೆ ವಿಧಿಸಲಾಗುತ್ತಿದೆ.ವಿದೇಶಿ ಮುಕ್ತ ವ್ಯಾಪಾರ ನೀತಿಯ ಅಡಿಯಲ್ಲಿ ಅಡಿಕೆ ಆಮದು ಕೂಡಾ ನಿಷೇಧಿಸಿದೆ. ಹೀಗಾಗಿ ಈಗ ಅಡಿಕೆ ಆಮದು ಮೇಲೆ ಬಿಗುವಾದ ಕ್ರಮ ಕೈಗೊಳ್ಳಲಾಗುತ್ತಿದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…