ಗುಜರಾತಿನ ಮುಂದ್ರಾ ಬಂದರು ಮೂಲಕ ಅಡಿಕೆ ಕಳ್ಳಸಾಗಾಣಿಕೆಯ ಮೂಲಕ ಆಮದು ಮಾಡುವ ಪ್ರಯತ್ನವನ್ನು ಡೈರೆಕ್ಟರೇಟ್ ಆಫ್ ರೆವೆನ್ಯೂ ಇಂಟೆಲಿಜೆನ್ಸ್ (DRI) ಅಧಿಕಾರಿಗಳ ತಂಡ ಪತ್ತೆ ಮಾಡಿದೆ. ಸುಮಾರು 81.85 ಮೆಟ್ರಿಕ್ ಟನ್ ಅಡಿಕೆಯನ್ನು ವಶಪಡಿಸಿಕೊಂಡಿದೆ.
ಆಮದು ಸರಕನ್ನು ತಪ್ಪಾಗಿ ಘೋಷಣೆ ಮಾಡಿ ಅಡಿಕೆಯನ್ನು ಭಾರತಕ್ಕೆ ಕಳ್ಳಸಾಗಾಣಿಕೆ ಮೂಲಕ ತರಲಾಗಿತ್ತು.ಈ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸಿತ್ತು.ಯುಎಇಯ ಜೆಬೆಲ್ ಅಲಿ ಬಂದರಿನಿಂದ ಕಂಟೈನರ್ಗಳಲ್ಲಿ ಸರಕುಗಳು ಮುಂದ್ರಾ ಬಂದರಿಗೆ ಬಂದಿತ್ತು.7.1 ಕೋಟಿ ಮೌಲ್ಯದ 81.85 ಮೆಟ್ರಿಕ್ ಟನ್ ಅಡಿಕೆಯನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣದ ಪ್ರಮುಖ ಆರೋಪಿಯನ್ನು ಕಸ್ಟಮ್ಸ್ ಕಾಯ್ದೆಯಡಿ ಬಂಧಿಸಲಾಗಿದೆ. ಅಡಿಕೆ ಆಮದು ಮೇಲೆ 110% ತೆರಿಗೆ ವಿಧಿಸಲಾಗುತ್ತಿದೆ.ವಿದೇಶಿ ಮುಕ್ತ ವ್ಯಾಪಾರ ನೀತಿಯ ಅಡಿಯಲ್ಲಿ ಅಡಿಕೆ ಆಮದು ಕೂಡಾ ನಿಷೇಧಿಸಿದೆ. ಹೀಗಾಗಿ ಈಗ ಅಡಿಕೆ ಆಮದು ಮೇಲೆ ಬಿಗುವಾದ ಕ್ರಮ ಕೈಗೊಳ್ಳಲಾಗುತ್ತಿದೆ.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…