ಗುಜರಾತಿನ ಮುಂದ್ರಾ ಬಂದರು ಮೂಲಕ ಅಡಿಕೆ ಕಳ್ಳಸಾಗಾಣಿಕೆಯ ಮೂಲಕ ಆಮದು ಮಾಡುವ ಪ್ರಯತ್ನವನ್ನು ಡೈರೆಕ್ಟರೇಟ್ ಆಫ್ ರೆವೆನ್ಯೂ ಇಂಟೆಲಿಜೆನ್ಸ್ (DRI) ಅಧಿಕಾರಿಗಳ ತಂಡ ಪತ್ತೆ ಮಾಡಿದೆ. ಸುಮಾರು 81.85 ಮೆಟ್ರಿಕ್ ಟನ್ ಅಡಿಕೆಯನ್ನು ವಶಪಡಿಸಿಕೊಂಡಿದೆ.
ಆಮದು ಸರಕನ್ನು ತಪ್ಪಾಗಿ ಘೋಷಣೆ ಮಾಡಿ ಅಡಿಕೆಯನ್ನು ಭಾರತಕ್ಕೆ ಕಳ್ಳಸಾಗಾಣಿಕೆ ಮೂಲಕ ತರಲಾಗಿತ್ತು.ಈ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸಿತ್ತು.ಯುಎಇಯ ಜೆಬೆಲ್ ಅಲಿ ಬಂದರಿನಿಂದ ಕಂಟೈನರ್ಗಳಲ್ಲಿ ಸರಕುಗಳು ಮುಂದ್ರಾ ಬಂದರಿಗೆ ಬಂದಿತ್ತು.7.1 ಕೋಟಿ ಮೌಲ್ಯದ 81.85 ಮೆಟ್ರಿಕ್ ಟನ್ ಅಡಿಕೆಯನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣದ ಪ್ರಮುಖ ಆರೋಪಿಯನ್ನು ಕಸ್ಟಮ್ಸ್ ಕಾಯ್ದೆಯಡಿ ಬಂಧಿಸಲಾಗಿದೆ. ಅಡಿಕೆ ಆಮದು ಮೇಲೆ 110% ತೆರಿಗೆ ವಿಧಿಸಲಾಗುತ್ತಿದೆ.ವಿದೇಶಿ ಮುಕ್ತ ವ್ಯಾಪಾರ ನೀತಿಯ ಅಡಿಯಲ್ಲಿ ಅಡಿಕೆ ಆಮದು ಕೂಡಾ ನಿಷೇಧಿಸಿದೆ. ಹೀಗಾಗಿ ಈಗ ಅಡಿಕೆ ಆಮದು ಮೇಲೆ ಬಿಗುವಾದ ಕ್ರಮ ಕೈಗೊಳ್ಳಲಾಗುತ್ತಿದೆ.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…