ಗುಜರಾತಿನ ಮುಂದ್ರಾ ಬಂದರು ಮೂಲಕ ಅಡಿಕೆ ಕಳ್ಳಸಾಗಾಣಿಕೆಯ ಮೂಲಕ ಆಮದು ಮಾಡುವ ಪ್ರಯತ್ನವನ್ನು ಡೈರೆಕ್ಟರೇಟ್ ಆಫ್ ರೆವೆನ್ಯೂ ಇಂಟೆಲಿಜೆನ್ಸ್ (DRI) ಅಧಿಕಾರಿಗಳ ತಂಡ ಪತ್ತೆ ಮಾಡಿದೆ. ಸುಮಾರು 81.85 ಮೆಟ್ರಿಕ್ ಟನ್ ಅಡಿಕೆಯನ್ನು ವಶಪಡಿಸಿಕೊಂಡಿದೆ.
ಆಮದು ಸರಕನ್ನು ತಪ್ಪಾಗಿ ಘೋಷಣೆ ಮಾಡಿ ಅಡಿಕೆಯನ್ನು ಭಾರತಕ್ಕೆ ಕಳ್ಳಸಾಗಾಣಿಕೆ ಮೂಲಕ ತರಲಾಗಿತ್ತು.ಈ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸಿತ್ತು.ಯುಎಇಯ ಜೆಬೆಲ್ ಅಲಿ ಬಂದರಿನಿಂದ ಕಂಟೈನರ್ಗಳಲ್ಲಿ ಸರಕುಗಳು ಮುಂದ್ರಾ ಬಂದರಿಗೆ ಬಂದಿತ್ತು.7.1 ಕೋಟಿ ಮೌಲ್ಯದ 81.85 ಮೆಟ್ರಿಕ್ ಟನ್ ಅಡಿಕೆಯನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣದ ಪ್ರಮುಖ ಆರೋಪಿಯನ್ನು ಕಸ್ಟಮ್ಸ್ ಕಾಯ್ದೆಯಡಿ ಬಂಧಿಸಲಾಗಿದೆ. ಅಡಿಕೆ ಆಮದು ಮೇಲೆ 110% ತೆರಿಗೆ ವಿಧಿಸಲಾಗುತ್ತಿದೆ.ವಿದೇಶಿ ಮುಕ್ತ ವ್ಯಾಪಾರ ನೀತಿಯ ಅಡಿಯಲ್ಲಿ ಅಡಿಕೆ ಆಮದು ಕೂಡಾ ನಿಷೇಧಿಸಿದೆ. ಹೀಗಾಗಿ ಈಗ ಅಡಿಕೆ ಆಮದು ಮೇಲೆ ಬಿಗುವಾದ ಕ್ರಮ ಕೈಗೊಳ್ಳಲಾಗುತ್ತಿದೆ.
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…