MIRROR FOCUS

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣಿಕೆ | 100 ದಿನಗಳಲ್ಲಿ 31.73 ಕೋಟಿ ಮೌಲ್ಯದ ಅಡಿಕೆ ವಶ..! |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅಡಿಕೆ ಕಳ್ಳಸಾಗಾಣಿಕೆ ನಡೆಯುತ್ತಲೇ ಇದೆ. ಕಳೆದ 100 ದಿನದಲ್ಲಿ 31.73 ಕೋಟಿ ರೂಪಾಯಿ ಮೌಲ್ಯದ 5.44 ಲಕ್ಷ ಕೆಜಿ ಅಡಿಕೆಯನ್ನು ಮಿಜೋರಾಂನಲ್ಲಿ ವಶಪಡಿಸಿಕೊಳ್ಳಲಾಗಿದೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಈ ಅಡಿಕೆ ಕಳ್ಳಸಾಗಾಣಿಕೆಯ ಮೂಲ, ಅಡಿಕೆ ಆಮದು ಮಾಡುವ ಮೂಲ ಮಾತ್ರಾ ಪತ್ತೆಯಾಗಿಲ್ಲ…!.

Advertisement

ಮಿಜೋರಾಂ ಪೊಲೀಸರು ಮತ್ತು ಅಸ್ಸಾಂ ರೈಫಲ್ಸ್ ಕಳೆದ 100 ದಿನಗಳಲ್ಲಿ ಮ್ಯಾನ್ಮಾರ್‌ನಿಂದ ಕಳ್ಳಸಾಗಣೆಯಾದ ನಂತರ 31.73 ಕೋಟಿ ರೂಪಾಯಿ ಮೌಲ್ಯದ 5.44 ಲಕ್ಷ ಕೆಜಿ ಅಡಿಕೆಯನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.ಮಿಜೋರಾಂ ರಾಜ್ಯ ಸರ್ಕಾರದ ನಿರ್ದೇಶನಗಳನ್ನು ಅನುಸರಿಸಿ,  ಅಡಿಕೆ ಅಕ್ರಮ ಸಾಗಣೆ ತಡೆಗೆ ಪ್ರಯತ್ನ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.ಇದರ ಪರಿಣಾಮವಾಗಿ ಕಳೆದ 100 ದಿನಗಳಲ್ಲಿ (ಜನವರಿ 1 ರಿಂದ ಏಪ್ರಿಲ್ 10 ರವರೆಗೆ) ಭಾರೀ ಪ್ರಮಾಣದ ಅಡಿಕೆ ವಶಕ್ಕೆ ತೆಗೆದುಕೊಳ್ಳಲಾಗಿದೆ.ಅಡಿಕೆ ಕಳ್ಳಸಾಗಣೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೆ 19 ಎಫ್‌ಐಆರ್‌ಗಳನ್ನು ದಾಖಲಿಸಿ 61 ಜನರನ್ನು ಬಂಧಿಸಿದ್ದಾರೆ. ಮ್ಯಾನ್ಮಾರ್ ಮತ್ತು ಅಸ್ಸಾಂ ಸರ್ಕಾರದ  ನಿರ್ಬಂಧಗಳಿಂದ ದೊಡ್ಡ ಪ್ರಮಾಣದ ಕಳ್ಳಸಾಗಣೆ ತಡೆಯಾಗಿದೆ. ಆದರೆ ಈಶಾನ್ಯ ರಾಜ್ಯಗಳಲ್ಲಿ, ವಿಶೇಷವಾಗಿ ಮಿಜೋರಾಂ ಮತ್ತು ತ್ರಿಪುರಾದಲ್ಲಿ ಅಡಿಕೆ ರೈತರ ಮೇಲೆ ಪರಿಣಾಮ ಬೀರುತ್ತಿದೆ. ಅಲ್ಲಿನ ರೈತರಿಗೂ ಅಡಿಕೆ ಸಾಗಾಣಿಕೆ ಕಷ್ಟವಾಗಿದೆ. ಇದಕ್ಕಾಗಿ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಬೇಕು ಎಂದು ಒತ್ತಾಯ ಹೆಚ್ಚುತ್ತಿದೆ. ತ್ರಿಪುರಾದ ಅಡಿಕೆ ಬೆಳೆಗಾರರು ಈ ಹಿಂದೆ ಅಸ್ಸಾಂ ಸರ್ಕಾರವು ತಮ್ಮ ಉತ್ಪನ್ನಗಳ ಮೇಲೆ ಹೇರಿದ ಸಾರಿಗೆ ನಿರ್ಬಂಧಗಳ ವಿರುದ್ಧ ಆಂದೋಲನಗಳನ್ನು ಆಯೋಜಿಸಿದ್ದರು. ತ್ರಿಪುರಾದ ಜಾಂಪುಯಿ  ಮಿಜೋರಾಂನ ಪಕ್ಕದಲ್ಲಿದೆ. ಇದು ಕಿತ್ತಳೆಗೆ ಹೆಸರುವಾಸಿಯಾಗಿದೆ, ಇಂದು ದೊಡ್ಡ ಪ್ರಮಾಣದ ಅಡಿಕೆ ಉತ್ಪಾದನೆಗೆ ಕೂಡಾ ಹೆಸರುವಾಸಿಯಾಗಿದೆ.

ಕಾಂಗ್ರೆಸ್ ನಾಯಕಿ ಮತ್ತು ಶಾಸಕಿ ಲಾಲ್ರಿಂಡಿಕಾ ರಾಲ್ಟೆ ಅವರು ಇತ್ತೀಚೆಗೆ ಬರ್ಮಾ ಅಡಿಕೆ ಕಳ್ಳಸಾಗಣೆಯಿಂದಾಗಿ ಮಿಜೋರಾಂನಲ್ಲಿ ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಪ್ರಧಾನಿ ನರೇಂದ್ರ ಮೋದಿ ಅವರ ಮಧ್ಯಸ್ಥಿಕೆಯನ್ನು ಕೋರಿದರು. ಮಿಜೋರಾಂನ 518 ಕಿಮೀ ಗಡಿಯ ಮೂಲಕ ನೆರೆಯ ಮ್ಯಾನ್ಮಾರ್ ಮತ್ತು ಇತರೆಡೆಗಳಿಂದ  ಅಡಿಕೆಯನ್ನು ವ್ಯಾಪಕವಾಗಿ ಅಕ್ರಮವಾಗಿ ಆಮದು ಮಾಡಿಕೊಳ್ಳಲಾಗಿದೆ ಎಂದು ರಾಲ್ಟೆ ಅವರು ಪ್ರಧಾನಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

2047 ರ ವೇಳೆಗೆ ಕೇಂದ್ರ ಸರ್ಕಾರದಿಂದ 32 ಟ್ರಿಲಿಯನ್ ಡಾಲರ್ ಆರ್ಥಿಕತೆ ಗುರಿ

2047ರ ವೇಳೆಗೆ 4 ಟ್ರಿಲಿಯನ್ ಡಾಲರ್ ಆರ್ಥಿಕತೆಯಿಂದ 32 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಿ…

4 hours ago

ತುಂಗಾ, ಭದ್ರಾ ಜಲಾಶಯಗಳಿಂದ ಯಾವುದೇ ಕ್ಷಣದಲ್ಲಿ ನೀರು ಬಿಡುಗಡೆ ಸಾಧ್ಯತೆ | ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚನೆ

ತುಂಗ-ಭದ್ರಾ ಎರಡೂ ಜಲಾಶಯಗಳಿಂದ ನದಿಗೆ ಯಾವುದೇ ಕ್ಷಣದಲ್ಲಾದರೂ ೮೦ ಸಾವಿರಕ್ಕೂ ಅಧಿಕ ಕ್ಯೂಸೆಕ್…

4 hours ago

ವೇಗವಾಗಿ ಬೆಳೆಯುವ ಮರ ಹವಾಮಾನ ವೈಪರೀತ್ಯಕ್ಕೆ ಪರಿಹಾರ | ಕೃಷಿ ಅರಣ್ಯೀಕರಣಕ್ಕೆ ಬೆಂಬಲ – ಕೃಷಿ ಆದಾಯ ಹೆಚ್ಚಿಸಲೂ ಸಲಹೆ |

ಇತ್ತೀಚಿನ ವಿಜ್ಞಾನ ಮತ್ತು ಹೊಸ ವಿಧಾನಗಳನ್ನು  ಬಳಸಿಕೊಂಡು ಜಾಗತಿಕವಾಗಿ ವೇಗವಾಗಿ ಬೆಳೆಯುವ ಮರಗವನ್ನು…

4 hours ago

ಬದುಕು ಪುರಾಣ | ದಾನಕ್ಕೆ ಬಂದ ಮಾನ

ತನ್ನಲ್ಲಿರುವುದನ್ನು ಸಮ್ಮನಸ್ಸಿನಿಂದ ನೀಡುವುದು ದಾನ. ಪಡಕೊಂಡವನ ತೃಪ್ತಿಯು ದಾನಿಗೆ ಹಾರೈಕೆ. ಇಲ್ಲಿ ಪ್ರಚಾರದ…

6 hours ago

ಮಕ್ಕಳ ಪುಟ | ನಿಮ್ಮ ಚಿತ್ರ -ನಮ್ಮ ಬೆಳಕು | ಚಂದನ್‌ ಕೆ ಪಿ

ಚಂದನ್‌ ಕೆ ಪಿ, 8 ನೇ ತರಗತಿ, ರೋಟರಿ ಪ್ರೌಢಶಾಲೆ, ಪಡ್ಡಂಬೈಲು |…

15 hours ago

ಜು.10 ರಿಂದ ರಾಘವೇಶ್ವರ ಶ್ರೀಗಳ ಸ್ವಭಾಷಾ ಚಾತುರ್ಮಾಸ್ಯ ಆರಂಭ

ಗೋಕರ್ಣ ಮಂಡಲಾಧೀಶ್ವರ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿಯವರ 32ನೇ ಚಾತುರ್ಮಾಸ್ಯ ವ್ರತ ಆಷಾಢ…

16 hours ago