MIRROR FOCUS

ಬರ್ಮಾ ಅಡಿಕೆ ಕಳ್ಳಸಾಗಣೆ ಏರಿಕೆ | ಏಕೆ ಸಿಗುತ್ತಿಲ್ಲ ಈ ಮಾಫಿಯಾದ ರುವಾರಿ…? |

Share

ದೇಶಕ್ಕೆ ಬರ್ಮಾ ಅಡಿಕೆ ಅವ್ಯಾಹತವಾಗಿ ಕಳ್ಳಸಾಗಾಣಿಕೆಯಾಗುತ್ತಿದೆ. ಅಲ್ಲಲ್ಲಿ ತಡೆಯಾಗುತ್ತಲೂ ಇದೆ. ಈ ಕಾರಣದಿಂದಲೇ ಅಡಿಕೆ ಮಾರುಕಟ್ಟೆಯಲ್ಲಿ ನಿರೀಕ್ಷಿತ ಏರಿಕೆ ಕಾಣುತ್ತಿಲ್ಲ. ಅಕ್ರಮವಾಗಿ ಅಡಿಕೆ ಭಾರತದೊಳಕ್ಕೆ ಬರುತ್ತಿದ್ದರೂ, ಕೋಟ್ಯಂತರ ತೆರಿಗೆ ನಷ್ಟವಾಗುತ್ತಿದ್ದರೂ ಈ ಕಳ್ಳಸಾಗಾಣಿಕೆಯ ಪ್ರಮುಖ ರುವಾರಿ ಪತ್ತೆಯಾಗದಿರುವುದೇ ಯಕ್ಷ ಪ್ರಶ್ನೆಯಾಗಿದೆ.

Advertisement

ಅಸ್ಸಾಂ ಸೇರಿದಂತೆ ಈಶಾನ್ಯ ರಾಜ್ಯಗಳ ಮೂಲಕ ಅಡಿಕೆ ಕಳ್ಳಸಾಗಾಣಿಕೆ ನಿರಂತರವಾಗಿ ನಡೆಯುತ್ತಿದೆ. ಈಶಾನ್ಯ ರಾಜ್ಯದ ಬಹುತೇಕ ಅಡಿಕೆ ಬೆಳೆಗಾರರು ಕೂಡಾ ಈ ಕಳ್ಳಸಾಗಾಣಿಕೆಗೆ ವಿರೋಧ ವ್ಯಕ್ತಪಡಿಸುತ್ತಿದ್ದರೂ ಅಡಿಕೆ ಸಾಗಾಣಿಕೆಗೆ ತಡೆಯಾಗಿಲ್ಲ.  ಗೋಲಾಘಾಟ್-ಮೇರಪಾನಿಯಲ್ಲಿ ಬರ್ಮಾ ಅಡಿಕೆ ಕಳ್ಳಸಾಗಣೆ ಅವ್ಯಾಹತವಾಗಿ ಏರಿಕೆಯಾಗುತ್ತಿದೆ. ಮ್ಯಾನ್ಮಾರ್‌ನಿಂದ ಗೋಲಾಘಾಟ್ ಜಿಲ್ಲೆಯ ಮೂಲಕ ಅಕ್ರಮ ಬರ್ಮಾ ಅಡಿಕೆ ಸಾಗಾಣಿಕೆ ನಡೆಯುತ್ತಿದೆ. ಅಡಿಕೆ ಕಳ್ಳಸಾಗಾಣಿಕೆಯ ಮಾಫಿಯಾ ಬಹುದೊಡ್ಡ ಜಾಲವಾಗಿ ಈಗ ರೂಪುಗೊಳ್ಳುತ್ತಿದೆ.

ಗೋಲಘಟ್ಟ ನಗರದ ಮೂಲಕ ಬರ್ಮಾ ಅಡಿಕೆ ಸಾಗಾಟದ ವಿರುದ್ಧ ಗೋಲಘಟ್ಟದ ಸಂಘಟನೆಗಳು ಹಾಗೂ ಸಾಮಾಜಿಕ ಹೋರಾಟಗಾರರು ಹಲವು ಬಾರಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಆದರೆ ಜಿಲ್ಲಾಡಳಿತ ಹಾಗೂ ಗೋಲಘಟ್ಟ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ವ್ಯಕ್ತವಾಗಿದೆ. ಈ ಜಾಲದ ಹಿಂದೆ ದೊಡ್ಡ ಕುಳಗಳು ಇರುವುದೇ ಇದಕ್ಕೆ ಕಾರಣವಾಗಿದೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.

ಈ ಜಾಲವು ಬರ್ಮಾ ಅಡಿಕೆಯನ್ನು ನಾಗಾಲ್ಯಾಂಡ್‌ನ ತಪ್ಪಲಿನಲ್ಲಿ ಸಂಗ್ರಹಿಸುತ್ತಾರೆ ಮತ್ತು ಅದನ್ನು ಮೆರಾಪಾನಿಯಲ್ಲಿರುವ ಸಿಆರ್‌ಪಿಎಫ್ ಗೇಟ್ ಮೂಲಕ ಮತ್ತು ಮೆರಾಪಾನಿ ಪೊಲೀಸ್ ಠಾಣೆಯ ಮುಂದೆ ಪ್ರತಿದಿನ ವಿವಿಧ ವಾಹನಳಲ್ಲಿ ಸಾಗಿಸುತ್ತಾರೆ. ಇತ್ತೀಚೆಗೆ, ಮೇರಾಪಾನಿಯಲ್ಲಿ ಅಡಿಕೆ ಹೊತ್ತ ಲಾರಿ ಅಪಘಾತಕ್ಕೀಡಾಯಿತು. ಬರ್ಮಾ ಸುಪಾರಿ ತುಂಬಿದ್ದ ಅಡಿಕೆಯನ್ನು ಸ್ಥಳೀಯರು ತಡೆದು ಮೇರಪಾನಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಆದರೆ, ಅಡಿಕೆ ಸಾಗಾಟದ ಮಾಫಿಯಾ ಮೆರಪಾನಿ ಪೊಲೀಸ್ ಠಾಣೆಯಿಂದ ಅಡಿಕೆ ತುಂಬಿದ್ದ ಟ್ರಕ್  ಬಿಡಿಸಿಕೊಳ್ಳುವ ಯತ್ನವನ್ನು ಮುಂದುವರೆಸಿದೆ ಎಂದು ಹೋರಾಟಗಾರರು ಆರೋಪ ಮಾಡಿದ್ದಾರೆ.

Illegal Burmese Arecanut transportation through Golaghat district from Myanmar has been rising. Locals intercepted the truck loaded with Burmese Arecanut and handed it over to Merapani police. The Merapani police have already seized the truck loaded with smuggled Arecanut and registered a case.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಬೆಳೆಗಾರರಿಗೆ ನಿಜವಾದ ಸಮಸ್ಯೆ ಯಾವುದು ? ಮುಂದೆ ಇರುವ ಸವಾಲುಗಳು ಯಾವುದು ?

ಅಡಿಕೆ ಬೆಳೆ ರಾಜ್ಯದಲ್ಲಿ ಮಾತ್ರವಲ್ಲ ತಮಿಳುನಾಡು, ಆಂಧ್ರಪ್ರದೇಶ ಸೇರಿದಂತೆ ವಿವಿಧ ಕಡೆಗಳಲ್ಲಿ ವಿಸ್ತರಣೆ…

8 hours ago

ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಹೊಸತನ | ವಜ್ರಗಳ LGD ಟೆಸ್ಟಿಂಗ್ ಮಿಷನ್

ಶುದ್ಧತೆಯ ವಿಚಾರ ಬಂದಾಗ ನಂಬಿಕೆಯೂ ಮುಖ್ಯ. ಅದಕ್ಕಾಗಿ, 8 ದಶಕಗಳಿಂದ ನಿಮ್ಮ ಎದುರಿನಲ್ಲಿ…

15 hours ago

ಹವಾಮಾನ ಬದಲಾವಣೆಯ ಪರಿಣಾಮ | ಬಾಂಗ್ಲಾದಲ್ಲಿ ಹೆಚ್ಚಾಗಲಿರುವ ಚಂಡಮಾರುತ |

ಹವಾಮಾನ ಬದಲಾವಣೆ ಪ್ರಪಂಚದ ಎಲ್ಲೆಡೆಯೂ ಸವಾಲಾಗುತ್ತಿದೆ.ತಾಪಮಾನ ಏರಿಕೆಯ ಕಾರಣದಿಂದ ಚಂಡಮಾರುತಗಳ ಸಂಖ್ಯೆ  ಹೆಚ್ಚಾಗುವ…

16 hours ago

ಹವಾಮಾನ ವರದಿ | 15-04-2025 | ಕೆಲವು ಕಡೆ ತುಂತುರು ಮಳೆ | ಎ.19 ರಿಂದ ಕೆಲವು ಕಡೆ ಉತ್ತಮ ಮಳೆ ಸಾಧ್ಯತೆ |

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ…

19 hours ago

ಬುಧನ ಚಲನೆ | 3 ರಾಶಿಗೆ ಸಂಪತ್ತಿನ ಮಳೆ, ಯಶಸ್ಸು

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

23 hours ago

ಹರಿಯಾಣ | 800 ಮೆ.ವ್ಯಾ.ವಿದ್ಯುತ್ ಉತ್ಪಾದನಾ ಘಟಕಕ್ಕೆ ಪ್ರಧಾನಿ ಮೋದಿ ಚಾಲನೆ

ಹರಿಯಾಣ ಪ್ರವಾಸದಲ್ಲಿರುವ  ಪ್ರಧಾನಿ ನರೇಂದ್ರ ಮೋದಿ ಯಮುನಾ ನಗರದಲ್ಲಿ ಇಂದು ಧೀನಬಂಧು ಚೋಟು…

1 day ago