ಹಾವು ಕಡಿತ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕಾರ್ಯಕ್ರಮ

December 4, 2025
7:49 AM

ವಿಶ್ವ ಆರೋಗ್ಯ ಸಂಸ್ಥೆಯ ವರದಿಯ ಅನುಸಾರ ವಿಶ್ವಾದ್ಯಂತ ಪ್ರತಿ ವರ್ಷ ಸುಮಾರು 54 ಲಕ್ಷ ಜನರು ಹಾವು ಕಡಿತಕ್ಕೆ ಒಳಗಾಗುತ್ತಾರೆ. 80,000ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಳ್ಳುತ್ತಾರೆ ಮತ್ತು ಬದುಕುಳಿದ ಅನೇಕರು ಜೀವನ ಪಯರ್ಂತ ಸವಾಲುಗಳನ್ನು ಎದುರಿಸುತ್ತಾರೆ. ಹಾವು ಕಡಿತವನ್ನು ತಡೆಗಟ್ಟಬಹುದು. ಹುಲ್ಲುಗಾವಲು ಪ್ರದೇಶಗಳಲ್ಲಿ ಗಟ್ಟಿಯಾದ ಬೂಟುಗಳನ್ನು ಧರಿಸಿ ಮತ್ತು ರಾತ್ರಿ ಹೊತ್ತುಹೊರಗೆ ನಡೆಯುವಾಗ ಬೆಳಕನ್ನು (ಟಾರ್ಚ್) ಬಳಸಬೇಕು. ಹಾವು ಕಚ್ಚಿದರೆ, ತಕ್ಷಣ ಕಾರ್ಯ ಪ್ರವೃತ್ತರಾಗಿ, ಗಾಬರಿಯಾಗದೆ ತಕ್ಷಣ ವೈದ್ಯಕೀಯ ಸಹಾಯ ಪಡೆಯಿರಿ. ಶೀಘ್ರವಾಗಿ ಆಂಟಿವೆನಮ್ (ವಿಷನಿರೋಧಕ) ನೀಡುವುದರಿಂದ ಜೀವ ಉಳಿಸಬಹುದು. ಸುರಕ್ಷತೆಗಾಗಿ ಧ್ವನಿಯಾಗಿ, ಬದುಕುಳಿದವರ ಕಥೆಗಳನ್ನು ಮತ್ತು ತಡೆಗಟ್ಟುವ ಸಲಹೆಗಳನ್ನು ಹಂಚಿಕೊಳ್ಳಬೇಕು.

Advertisement
Advertisement

ಬಾಧಿತ ವ್ಯಕ್ತಿಯನ್ನು ಶಾಂತವಾಗಿರಿಸಿ ಮತ್ತು ಧೈರ್ಯ ತುಂಬಬೇಕು. ಕಚ್ಚಿದ ಜಾಗವನ್ನು ಅಲುಗಾಡಿಸದೆ, ಹೃದಯಕ್ಕಿಂತ ಕೆಳಮಟ್ಟದಲ್ಲಿ ಇರಿಸಬೇಕು. ಕೈ ಅಥವಾ ಕಾಲಿಗೆ ಕಚ್ಚಿದ್ದರೆ, ಬಿಗಿಯಾದ ಬಟ್ಟೆ, ಬಳೆ, ಉಂಗುರ ಅಥವಾ ಕಾಲ್ಗೆಜ್ಜೆಯನ್ನು ತೆಗೆದುಹಾಕಬೇಕು. ಸಾಧ್ಯವಾದಷ್ಟು ಬೇಗ, ತಕ್ಷಣವೇ ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕು. ಹೆದರಬೇಡಿ ಮತ್ತು ಹಾವು ಕಡಿತಕ್ಕೆ ಒಳಗಾದ ವ್ಯಕ್ತಿಯನ್ನು ಸಮಾಧಾನಪಡಿಸಬೇಕು. ಹಾವಿನಿಂದ ನಿಧಾನವಾಗಿ ದೂರ ಸರಿಯಬೇಕು. ಹಾವು ಕಚ್ಚಿದ ದೇಹದ ಭಾಗದಲ್ಲಿರುವ ಪಾದರಕ್ಷೆ, ಕಾಲುಂಗುರ, ಬೆಲ್ಟ್, ಆಭರಣಗಳು, ವಾಚ್, ಬಿಗಿಯಾದ ಬಟ್ಟೆಯನ್ನು ಕಳಚಬೇಕು. ಹಾವು ಕಡಿತಕ್ಕೆ ಒಳಗಾದ ವ್ಯಕ್ತಿಯನ್ನು ಎಡಭಾಗಕ್ಕೆ ಮಲಗಿಸಿ, ಕಚ್ಚಿದ ಭಾಗವನ್ನು ಅಲುಗಾಡದಂತೆ ನೋಡಿಕೊಳ್ಳಬೇಕು. ತಕ್ಷಣವೇ ಸಮೀಪದ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಬೇಕು.

ಗಾಯದ ಜಾಗವನ್ನು ಕತ್ತರಿಸಬಾರದು ಅಥವಾ ವಿಷವನ್ನು ಬಾಯಿಯಿಂದ ಹೀರಿಕೊಳ್ಳಬಾರದು. ರಕ್ತ ಸಂಚಾರವನ್ನು ಸಂಪೂರ್ಣವಾಗಿ ನಿಲ್ಲಿಸುವಂತಹ ಬಿಗಿಯಾದ ಪಟ್ಟಿ ಕಟ್ಟಬಾರದು. ಗಾಯದ ಮೇಲೆ ಐಸ್, ಬೆಂಕಿ, ಅಥವಾ ಯಾವುದೇ ರೀತಿಯ ನಾಟಿ/ಮನೆಮದ್ದುಗಳನ್ನು ಹಚ್ಚಬಾರದು. ಬಾಧಿತ ವ್ಯಕ್ತಿಗೆ ನಡೆಯಲು ಬಿಡಬೇಡಿ.

ರಕ್ತ ಬಂಧಕ ಪಟ್ಟಿ ಅಥವಾ ಬಿಗಿಯಾದ  ಬಟ್ಟೆಯನ್ನು ಕಟ್ಟಬಾರದು. ಏನನ್ನೂ ಹಚ್ಚಬಾರದು. ಹಾವು ಕಚ್ಚಿದ ವ್ಯಕ್ತಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ. ನಾಟಿ ಮದ್ದು ಸೇರಿದಂತೆ ಇನ್ನಾವುದೇ ಅಸುರಕ್ಷಿತ ಚಿಕಿತ್ಸಾ ಪದ್ಧತಿಯನ್ನು ಅವಲಂಬಿಸಬಾರದು. ಹಾವನ್ನು ಹಿಡಿಯುವ ಅಥವಾ ಕೊಲ್ಲುವ ಪ್ರಯತ್ನ ಮಾಡಬೇಡಿ, ಇದು ಅಮೂಲ್ಯ ಸಮಯವನ್ನು ವ್ಯರ್ಥ ಮಾಡುತ್ತದೆ ಎಂದು ಜಿಲ್ಲಾ  ಆರೋಗ್ಯ ಮತ್ತು ಕುಟುಂಬ ಕಲ್ಯಾಣ  ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸರ್ಕಾರಿ ಶಾಲೆ ಮಕ್ಕಳಿಗೆ ಚೆಸ್ ಪಾಠ | ದ.ಕ ದಲ್ಲಿ “ಚೆಸ್ ಇನ್ ಸ್ಕೂಲ್” ಆರಂಭ | ಗ್ರಾಮೀಣ ಮಕ್ಕಳಿಗೆ ಬೌದ್ಧಿಕ ಅವಕಾಶ
January 29, 2026
2:18 PM
by: ದ ರೂರಲ್ ಮಿರರ್.ಕಾಂ
ಕೊಳೆ ರೋಗ ನಿಯಂತ್ರಣಕ್ಕೂ ತೆರಿಗೆ…? ಮೈಲುತುತ್ತಿಗೆ ಸುಂಕ – ಅಡಿಕೆ ರೈತನಿಗೆ ಮತ್ತೊಂದು ಹೊರೆ..!
January 29, 2026
7:39 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ದೇಶದಲ್ಲಿ ರಬಿ ಋತು ಬಿತ್ತನೆ ದಾಖಲೆ ಹೆಚ್ಚಳ | 660.48 ಲಕ್ಷ ಹೆಕ್ಟೇರ್‌ಗೆ ಏರಿದ ಒಟ್ಟು ವಿಸ್ತೀರ್ಣ
January 29, 2026
7:18 AM
by: ದ ರೂರಲ್ ಮಿರರ್.ಕಾಂ
ಯೂರಿಯಾ ಮಾರಾಟ 3.8% ಏರಿಕೆ | ದೇಶೀಯ ಉತ್ಪಾದನೆ ಕುಸಿತ, ಆಮದು 85% ಹೆಚ್ಚಳ
January 29, 2026
7:08 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror