Advertisement
MIRROR FOCUS

ಹಾವು ಕಡಿತ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕಾರ್ಯಕ್ರಮ

Share

ವಿಶ್ವ ಆರೋಗ್ಯ ಸಂಸ್ಥೆಯ ವರದಿಯ ಅನುಸಾರ ವಿಶ್ವಾದ್ಯಂತ ಪ್ರತಿ ವರ್ಷ ಸುಮಾರು 54 ಲಕ್ಷ ಜನರು ಹಾವು ಕಡಿತಕ್ಕೆ ಒಳಗಾಗುತ್ತಾರೆ. 80,000ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಳ್ಳುತ್ತಾರೆ ಮತ್ತು ಬದುಕುಳಿದ ಅನೇಕರು ಜೀವನ ಪಯರ್ಂತ ಸವಾಲುಗಳನ್ನು ಎದುರಿಸುತ್ತಾರೆ. ಹಾವು ಕಡಿತವನ್ನು ತಡೆಗಟ್ಟಬಹುದು. ಹುಲ್ಲುಗಾವಲು ಪ್ರದೇಶಗಳಲ್ಲಿ ಗಟ್ಟಿಯಾದ ಬೂಟುಗಳನ್ನು ಧರಿಸಿ ಮತ್ತು ರಾತ್ರಿ ಹೊತ್ತುಹೊರಗೆ ನಡೆಯುವಾಗ ಬೆಳಕನ್ನು (ಟಾರ್ಚ್) ಬಳಸಬೇಕು. ಹಾವು ಕಚ್ಚಿದರೆ, ತಕ್ಷಣ ಕಾರ್ಯ ಪ್ರವೃತ್ತರಾಗಿ, ಗಾಬರಿಯಾಗದೆ ತಕ್ಷಣ ವೈದ್ಯಕೀಯ ಸಹಾಯ ಪಡೆಯಿರಿ. ಶೀಘ್ರವಾಗಿ ಆಂಟಿವೆನಮ್ (ವಿಷನಿರೋಧಕ) ನೀಡುವುದರಿಂದ ಜೀವ ಉಳಿಸಬಹುದು. ಸುರಕ್ಷತೆಗಾಗಿ ಧ್ವನಿಯಾಗಿ, ಬದುಕುಳಿದವರ ಕಥೆಗಳನ್ನು ಮತ್ತು ತಡೆಗಟ್ಟುವ ಸಲಹೆಗಳನ್ನು ಹಂಚಿಕೊಳ್ಳಬೇಕು.

ಬಾಧಿತ ವ್ಯಕ್ತಿಯನ್ನು ಶಾಂತವಾಗಿರಿಸಿ ಮತ್ತು ಧೈರ್ಯ ತುಂಬಬೇಕು. ಕಚ್ಚಿದ ಜಾಗವನ್ನು ಅಲುಗಾಡಿಸದೆ, ಹೃದಯಕ್ಕಿಂತ ಕೆಳಮಟ್ಟದಲ್ಲಿ ಇರಿಸಬೇಕು. ಕೈ ಅಥವಾ ಕಾಲಿಗೆ ಕಚ್ಚಿದ್ದರೆ, ಬಿಗಿಯಾದ ಬಟ್ಟೆ, ಬಳೆ, ಉಂಗುರ ಅಥವಾ ಕಾಲ್ಗೆಜ್ಜೆಯನ್ನು ತೆಗೆದುಹಾಕಬೇಕು. ಸಾಧ್ಯವಾದಷ್ಟು ಬೇಗ, ತಕ್ಷಣವೇ ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕು. ಹೆದರಬೇಡಿ ಮತ್ತು ಹಾವು ಕಡಿತಕ್ಕೆ ಒಳಗಾದ ವ್ಯಕ್ತಿಯನ್ನು ಸಮಾಧಾನಪಡಿಸಬೇಕು. ಹಾವಿನಿಂದ ನಿಧಾನವಾಗಿ ದೂರ ಸರಿಯಬೇಕು. ಹಾವು ಕಚ್ಚಿದ ದೇಹದ ಭಾಗದಲ್ಲಿರುವ ಪಾದರಕ್ಷೆ, ಕಾಲುಂಗುರ, ಬೆಲ್ಟ್, ಆಭರಣಗಳು, ವಾಚ್, ಬಿಗಿಯಾದ ಬಟ್ಟೆಯನ್ನು ಕಳಚಬೇಕು. ಹಾವು ಕಡಿತಕ್ಕೆ ಒಳಗಾದ ವ್ಯಕ್ತಿಯನ್ನು ಎಡಭಾಗಕ್ಕೆ ಮಲಗಿಸಿ, ಕಚ್ಚಿದ ಭಾಗವನ್ನು ಅಲುಗಾಡದಂತೆ ನೋಡಿಕೊಳ್ಳಬೇಕು. ತಕ್ಷಣವೇ ಸಮೀಪದ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಬೇಕು.

ಗಾಯದ ಜಾಗವನ್ನು ಕತ್ತರಿಸಬಾರದು ಅಥವಾ ವಿಷವನ್ನು ಬಾಯಿಯಿಂದ ಹೀರಿಕೊಳ್ಳಬಾರದು. ರಕ್ತ ಸಂಚಾರವನ್ನು ಸಂಪೂರ್ಣವಾಗಿ ನಿಲ್ಲಿಸುವಂತಹ ಬಿಗಿಯಾದ ಪಟ್ಟಿ ಕಟ್ಟಬಾರದು. ಗಾಯದ ಮೇಲೆ ಐಸ್, ಬೆಂಕಿ, ಅಥವಾ ಯಾವುದೇ ರೀತಿಯ ನಾಟಿ/ಮನೆಮದ್ದುಗಳನ್ನು ಹಚ್ಚಬಾರದು. ಬಾಧಿತ ವ್ಯಕ್ತಿಗೆ ನಡೆಯಲು ಬಿಡಬೇಡಿ.

ರಕ್ತ ಬಂಧಕ ಪಟ್ಟಿ ಅಥವಾ ಬಿಗಿಯಾದ  ಬಟ್ಟೆಯನ್ನು ಕಟ್ಟಬಾರದು. ಏನನ್ನೂ ಹಚ್ಚಬಾರದು. ಹಾವು ಕಚ್ಚಿದ ವ್ಯಕ್ತಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ. ನಾಟಿ ಮದ್ದು ಸೇರಿದಂತೆ ಇನ್ನಾವುದೇ ಅಸುರಕ್ಷಿತ ಚಿಕಿತ್ಸಾ ಪದ್ಧತಿಯನ್ನು ಅವಲಂಬಿಸಬಾರದು. ಹಾವನ್ನು ಹಿಡಿಯುವ ಅಥವಾ ಕೊಲ್ಲುವ ಪ್ರಯತ್ನ ಮಾಡಬೇಡಿ, ಇದು ಅಮೂಲ್ಯ ಸಮಯವನ್ನು ವ್ಯರ್ಥ ಮಾಡುತ್ತದೆ ಎಂದು ಜಿಲ್ಲಾ  ಆರೋಗ್ಯ ಮತ್ತು ಕುಟುಂಬ ಕಲ್ಯಾಣ  ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

5 hours ago

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ

PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…

13 hours ago

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

24 hours ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

1 day ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

2 days ago

ತೆಂಗಿನ ಮರದಿಂದ 3 ಕೋಟಿ ಜನರಿಗೆ ಬದುಕು…!, ಈಗ ₹7,038 ಕೋಟಿ ರಫ್ತು!

ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…

2 days ago