ಜಿಲ್ಲೆ

ಪಿಲಿಕುಳದಲ್ಲಿ ಇರುವೆ ಕಾಟದಿಂದ ಒದ್ದಾಡಿದ ಹಾವು ವಿಡಿಯೋ ವೈರಲ್ | ಪಿಲಿಕುಳ ಜೈವಿಕ ಉದ್ಯಾನದ ಹಾವು ಸುರಕ್ಷಿತ | ಅಧಿಕಾರಿಗಳಿಂದ ಸ್ಪಷ್ಟನೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಂಗಳೂರು ಪಿಲಿಕುಳ ಜೈವಿಕ ಉದ್ಯಾನದೊಳಗಿರುವ ಹಾವಿನ ಗೂಡೊಂದರಲ್ಲಿ ಇರುವೆಗಳ ಗುಂಪು ಹಾವನ್ನು ಕಚ್ಚುತ್ತಿರುವ ವೀಡಿಯೋ ಕೆಲವು ಸಾಮಾಜಿಕ ಜಾಲತಾಣಗಳಲ್ಲಿ ಎರಡು ದಿನಗಳಿಂದ ಹರಿದಾಡಿತು. ಈ ಬಗ್ಗೆ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದು, ಸದ್ಯ ಹಾವು ಸುರಕ್ಷಿತವಾಗಿದೆ ಎಂದು ಹೇಳಿದ್ದಾರೆ.

Advertisement

ವಿಡಿಯೋ ವೈರಲ್‌ ಅಗಿರುವ ವಿಷಯ ತಿಳಿದ ಕೂಡಲೇ ಪ್ರಾಧಿಕಾರದ ಆಯುಕ್ತರು ಸಂಬಂಧಪಟ್ಟ ಹಿರಿಯ ವೈಜ್ಞಾನಿಕ ಅಧಿಕಾರಿ, ಪಶುಪಾಲನಾ ವೈದ್ಯಾಧಿಕಾರಿ ಮತ್ತು ಬಯಾಲಾಜಿಸ್ಟ್ ಜೊತೆಗೂಡಿ ಸ್ಥಳಪರಿಶೀಲನೆ ನಡೆಸಿರುತ್ತಾರೆ. ಪರಿಶೀಲನೆ ವೇಳೆ ಇರುವೆಗಳ ಬಾದೆಗೆ ಒಳಗಾದ ಉರಗದ ಆರೋಗ್ಯವು ಸ್ಥಿರವಾಗಿದೆ ಎಂಬುದಾಗಿ ಪಶುಪಾಲನಾ ವೈದ್ಯಾಧಿಕಾರಿಯವರು ದೃಢೀಕರಿಸಿರುತ್ತಾರೆ. ಪ್ರಾಧಿಕಾರ ಆಯುಕ್ತರ ನಿರ್ದೇಶನದಂತೆ ಜೈವಿಕ ಉದ್ಯಾನವನದ ನಿರ್ದೇಶಕರು ಈ ಲೋಪಕ್ಕೆ ಕಾರಣರಾದವರ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಸಲುವಾಗಿ ಉರಗ ಪಾಲಕರಿಗೆ ನೋಟೀಸು ನೀಡಿ ವಿವರಣೆ ನೀಡಲು ತಿಳಿಸಿರುತ್ತಾರೆ.

ಇಂತಹ ಘಟನೆಯು ಪುನಃ ಮರುಕಳಿಸದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಸಲುವಾಗಿ ಕೂಡಲೇ ಪ್ರಾಧಿಕಾರದ ಆಯುಕ್ತರ ನೇತೃತ್ವದಲ್ಲಿ ಜೈವಿಕ ಉದ್ಯಾನವನದ ನಿರ್ದೇಶಕರು, ಹಿರಿಯ ವೈಜ್ಞಾನಿಕ ಅಧಿಕಾರಿ ಮತ್ತು ಪಶುಪಾಲನಾ ವೈದ್ಯಾಧಿಕಾರಿಯವರನ್ನು ಒಳಗೊಂಡು ವಿಶೇಷ ಸಭೆಯನ್ನು ನಡೆಸಲಾಗಿದೆ, ಅಂತೆಯೇ ಈ ಸಭೆಯಲ್ಲಿ ಇರುವೆಗಳ ಬಾಧೆಗೊಳಗಾದ ಆ ಉರಗದ ಆರೋಗ್ಯವನ್ನು ಪ್ರತೀ 2 ಗಂಟೆಗಳಿಗೊಮ್ಮೆ ಪರಿಶೀಲನೆ ನಡೆಸಿ ವರದಿಯನ್ನು ಆಯುಕ್ತರಿಗೆ ನೀಡಲು ತಿಳಿಸಲಾಗಿದೆ.

ಅಲ್ಲದೇ ಜೈವಿಕ ಉದ್ಯಾನದಲ್ಲಿ ಬೇರೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ದಿನದ ಎಲ್ಲಾ ಅವಧಿಯಲ್ಲಿ ಉರಗ ವಿಭಾಗಕ್ಕೆ ಹೆಚ್ಚುವರಿ ಸಿಸಿ ಕ್ಯಾಮರಾವನ್ನು ಅಳವಡಿಸಿ 24*7 ಕಣ್ಗಾವಲು ಮಾಡಲು ಕ್ರಮಕೈಗೊಳ್ಳಲಾಗುವುದು. ಉರಗಗಳ ಆವರಣದ ಒಳಗೆ ಯಾವುದೇ ತಿಂಡಿ ತಿನಸುಗಳನ್ನು ಕೊಂಡೋಗದಂತೆ ನೋಡಿಕೊಂಡು ನಿಗಾವಹಿಸಲು ಭದ್ರತಾ ಸಿಬ್ಬಂದಿಗಳಿಗೆ ಸೂಚಿಸಲಾಗಿದೆ. ಉರಗ ಆವರಣದ ಹೊರಭಾಗದ ಸ್ವಚ್ಛತೆಯನ್ನು ಆಗಾಗ ಮಾಡಲು ಹಾಗೂ ಇದರ ಮೇಲುಸ್ತುವಾರಿಯನ್ನು ಭದ್ರತಾಧಿಕಾರಿಯವರು ನೋಡಿಕೊಂಡು ವರದಿ ನೀಡಲು ಸೂಚಿಸಲಾಗಿದೆ.

ಇದಲ್ಲದೆ ಜೈವಿಕ ಉದ್ಯಾನದಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಂಡು ಬರುವಲ್ಲಿ ತಿಂಡಿ ತಿನಿಸುಗಳ ಪ್ಯಾಕೇಟುಗಳು ಪ್ಲಾಸ್ಟಿಕ್ ಬಾಟಲಿ ಇನ್ನಿತರ ಸಾಮಾಗ್ರಿಗಳನ್ನು ಎಲ್ಲೆಂದರಲ್ಲಿ ಎಸೆಯದಂತೆ ಹಾಗೂ ಪ್ರಾಣಿಗಳ ಆವರಣಗಳಿಗೆ ಹಾನಿ ಉಂಟು ಮಾಡದಂತೆ, ಸಂದರ್ಶಕರಿಗೆ ಅರಿವು ಮೂಡಿಸಲು ಹೆಚ್ಚುವರಿ ಸೂಚನಾ ಫಲಕಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಯುದ್ಧ ಆದರೆ ಕೃಷಿ ಉತ್ಪನ್ನಗಳ ಧಾರಣೆ ಏನಾಗಬಹುದು?

ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…

14 hours ago

ಪ್ರೀತಿಯ ಹಂಬಲ ಇರುವ, ವಯಸ್ಸಾದ, ಅನುಭವ ಹೊಂದಿದ ವ್ಯಕ್ತಿಗಳನ್ನು ಗೌರವಿಸುವ 5 ರಾಶಿಯ ಹುಡುಗಿಯರು |

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

14 hours ago

ಮಂಗಳೂರು | ರಾಷ್ಟ್ರೀಯ ಚೆಸ್ ಪಂದ್ಯಾಟ ಇಂದು ಸಮಾರೋಪ

ಮಂಗಳೂರು ಟೌನ್ ಹಾಲ್ ನಲ್ಲಿ ಶನಿವಾರದಿಂದ ನಡೆಯುತ್ತಿದ್ದ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್…

15 hours ago

ಸಹಜ ಸಾವನ್ನಪ್ಪುವ ಕಾಡುಪ್ರಾಣಿಗಳನ್ನು ಸುಡುವಂತಿಲ್ಲ | ಪ್ರಕೃತಿ ಚಕ್ರ ಕಾಪಾಡಲು ಸಹಕಾರಿ | ರಾಜ್ಯ ಸರ್ಕಾರದಿಂದ ಸುತ್ತೋಲೆ

ರಾಜ್ಯದ ವಿವಿಧ ಅರಣ್ಯ ಪ್ರದೇಶಗಳಲ್ಲಿ ಸಹಜವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಕಾಡಿನಲ್ಲಿಯೇ…

23 hours ago

ಬದರೀನಾಥ ಧಾಮ ಯಾತ್ರಾ ಆರಂಭ | ಭಾರೀ ಪ್ರಮಾಣದಲ್ಲಿ ಆಗಮಿಸಿರುವ ಭಕ್ತರು | ಸುರಕ್ಷತೆಗಾಗಿಅರೆಸೇನಾ ಪಡೆ ನಿಯೋಜನೆ

ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು  ತೆರೆಯಲಾಗಿದೆ. ಮುಂಜಾನೆ 6 ಗಂಟೆಯ…

1 day ago

ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ ವಿರುದ್ಧ ಕಾನೂನು ಕ್ರಮ – ಅರಣ್ಯ ಸಚಿವ ಈಶ್ವರ ಖಂಡ್ರೆ

ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ…

1 day ago