Advertisement
ಜಿಲ್ಲೆ

ಪಿಲಿಕುಳದಲ್ಲಿ ಇರುವೆ ಕಾಟದಿಂದ ಒದ್ದಾಡಿದ ಹಾವು ವಿಡಿಯೋ ವೈರಲ್ | ಪಿಲಿಕುಳ ಜೈವಿಕ ಉದ್ಯಾನದ ಹಾವು ಸುರಕ್ಷಿತ | ಅಧಿಕಾರಿಗಳಿಂದ ಸ್ಪಷ್ಟನೆ |

Share

ಮಂಗಳೂರು ಪಿಲಿಕುಳ ಜೈವಿಕ ಉದ್ಯಾನದೊಳಗಿರುವ ಹಾವಿನ ಗೂಡೊಂದರಲ್ಲಿ ಇರುವೆಗಳ ಗುಂಪು ಹಾವನ್ನು ಕಚ್ಚುತ್ತಿರುವ ವೀಡಿಯೋ ಕೆಲವು ಸಾಮಾಜಿಕ ಜಾಲತಾಣಗಳಲ್ಲಿ ಎರಡು ದಿನಗಳಿಂದ ಹರಿದಾಡಿತು. ಈ ಬಗ್ಗೆ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದು, ಸದ್ಯ ಹಾವು ಸುರಕ್ಷಿತವಾಗಿದೆ ಎಂದು ಹೇಳಿದ್ದಾರೆ.

Advertisement
Advertisement
Advertisement
Advertisement

ವಿಡಿಯೋ ವೈರಲ್‌ ಅಗಿರುವ ವಿಷಯ ತಿಳಿದ ಕೂಡಲೇ ಪ್ರಾಧಿಕಾರದ ಆಯುಕ್ತರು ಸಂಬಂಧಪಟ್ಟ ಹಿರಿಯ ವೈಜ್ಞಾನಿಕ ಅಧಿಕಾರಿ, ಪಶುಪಾಲನಾ ವೈದ್ಯಾಧಿಕಾರಿ ಮತ್ತು ಬಯಾಲಾಜಿಸ್ಟ್ ಜೊತೆಗೂಡಿ ಸ್ಥಳಪರಿಶೀಲನೆ ನಡೆಸಿರುತ್ತಾರೆ. ಪರಿಶೀಲನೆ ವೇಳೆ ಇರುವೆಗಳ ಬಾದೆಗೆ ಒಳಗಾದ ಉರಗದ ಆರೋಗ್ಯವು ಸ್ಥಿರವಾಗಿದೆ ಎಂಬುದಾಗಿ ಪಶುಪಾಲನಾ ವೈದ್ಯಾಧಿಕಾರಿಯವರು ದೃಢೀಕರಿಸಿರುತ್ತಾರೆ. ಪ್ರಾಧಿಕಾರ ಆಯುಕ್ತರ ನಿರ್ದೇಶನದಂತೆ ಜೈವಿಕ ಉದ್ಯಾನವನದ ನಿರ್ದೇಶಕರು ಈ ಲೋಪಕ್ಕೆ ಕಾರಣರಾದವರ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಸಲುವಾಗಿ ಉರಗ ಪಾಲಕರಿಗೆ ನೋಟೀಸು ನೀಡಿ ವಿವರಣೆ ನೀಡಲು ತಿಳಿಸಿರುತ್ತಾರೆ.

Advertisement

ಇಂತಹ ಘಟನೆಯು ಪುನಃ ಮರುಕಳಿಸದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಸಲುವಾಗಿ ಕೂಡಲೇ ಪ್ರಾಧಿಕಾರದ ಆಯುಕ್ತರ ನೇತೃತ್ವದಲ್ಲಿ ಜೈವಿಕ ಉದ್ಯಾನವನದ ನಿರ್ದೇಶಕರು, ಹಿರಿಯ ವೈಜ್ಞಾನಿಕ ಅಧಿಕಾರಿ ಮತ್ತು ಪಶುಪಾಲನಾ ವೈದ್ಯಾಧಿಕಾರಿಯವರನ್ನು ಒಳಗೊಂಡು ವಿಶೇಷ ಸಭೆಯನ್ನು ನಡೆಸಲಾಗಿದೆ, ಅಂತೆಯೇ ಈ ಸಭೆಯಲ್ಲಿ ಇರುವೆಗಳ ಬಾಧೆಗೊಳಗಾದ ಆ ಉರಗದ ಆರೋಗ್ಯವನ್ನು ಪ್ರತೀ 2 ಗಂಟೆಗಳಿಗೊಮ್ಮೆ ಪರಿಶೀಲನೆ ನಡೆಸಿ ವರದಿಯನ್ನು ಆಯುಕ್ತರಿಗೆ ನೀಡಲು ತಿಳಿಸಲಾಗಿದೆ.

ಅಲ್ಲದೇ ಜೈವಿಕ ಉದ್ಯಾನದಲ್ಲಿ ಬೇರೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ದಿನದ ಎಲ್ಲಾ ಅವಧಿಯಲ್ಲಿ ಉರಗ ವಿಭಾಗಕ್ಕೆ ಹೆಚ್ಚುವರಿ ಸಿಸಿ ಕ್ಯಾಮರಾವನ್ನು ಅಳವಡಿಸಿ 24*7 ಕಣ್ಗಾವಲು ಮಾಡಲು ಕ್ರಮಕೈಗೊಳ್ಳಲಾಗುವುದು. ಉರಗಗಳ ಆವರಣದ ಒಳಗೆ ಯಾವುದೇ ತಿಂಡಿ ತಿನಸುಗಳನ್ನು ಕೊಂಡೋಗದಂತೆ ನೋಡಿಕೊಂಡು ನಿಗಾವಹಿಸಲು ಭದ್ರತಾ ಸಿಬ್ಬಂದಿಗಳಿಗೆ ಸೂಚಿಸಲಾಗಿದೆ. ಉರಗ ಆವರಣದ ಹೊರಭಾಗದ ಸ್ವಚ್ಛತೆಯನ್ನು ಆಗಾಗ ಮಾಡಲು ಹಾಗೂ ಇದರ ಮೇಲುಸ್ತುವಾರಿಯನ್ನು ಭದ್ರತಾಧಿಕಾರಿಯವರು ನೋಡಿಕೊಂಡು ವರದಿ ನೀಡಲು ಸೂಚಿಸಲಾಗಿದೆ.

Advertisement

ಇದಲ್ಲದೆ ಜೈವಿಕ ಉದ್ಯಾನದಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಂಡು ಬರುವಲ್ಲಿ ತಿಂಡಿ ತಿನಿಸುಗಳ ಪ್ಯಾಕೇಟುಗಳು ಪ್ಲಾಸ್ಟಿಕ್ ಬಾಟಲಿ ಇನ್ನಿತರ ಸಾಮಾಗ್ರಿಗಳನ್ನು ಎಲ್ಲೆಂದರಲ್ಲಿ ಎಸೆಯದಂತೆ ಹಾಗೂ ಪ್ರಾಣಿಗಳ ಆವರಣಗಳಿಗೆ ಹಾನಿ ಉಂಟು ಮಾಡದಂತೆ, ಸಂದರ್ಶಕರಿಗೆ ಅರಿವು ಮೂಡಿಸಲು ಹೆಚ್ಚುವರಿ ಸೂಚನಾ ಫಲಕಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 27-02-2025 | ಮಳೆಯ ಸಾಧ್ಯತೆ ಕ್ಷೀಣ | ಒಣ ಹವೆ ಮುಂದುವರಿಕೆ | ಕೆಲವು ಕಡೆ ತುಂತುರು ಮಳೆ ನಿರೀಕ್ಷೆ |

ತಾಪಮಾನ ಅಧಿಕವಾಗಿದ್ದರೂ, ರಾತ್ರಿಯ ವೇಳೆ ತಂಪು ವಾತಾವರಣ ಇರುವುದರಿಂದ ಮಳೆಯ ಸಾಧ್ಯತೆ ಕ್ಷೀಣಿಸುತ್ತಿದೆ.

2 hours ago

ಧರ್ಮಸ್ಥಳದಲ್ಲಿ ಶಿವರಾತ್ರಿ ಜಾಗರಣೆ | ಅಹೋ ರಾತ್ರಿ ಶಿವ ಪಂಚಾಕ್ಷರಿ ಪಠಣದೊಂದಿಗೆ ಶಿವರಾತ್ರಿ ಜಾಗರಣೆಗೆ ಚಾಲನೆ

ಪರಿಶುದ್ಧ ಮನಸ್ಸಿನಿಂದ ಶಿವನ ಧ್ಯಾನ, ಉಪಾಸನೆ ಮಾಡಿದಾಗ ಸಕಲ ಪಾಪ ಕರ್ಮಗಳ ಕೊಳೆ…

13 hours ago

ಈಶಾ ಫೌಂಡೇಷನ್ ನಿಂದ ಶಿವರಾತ್ರಿ | ಆತ್ಮ ಜಾಗೃತಿಯ ರಾತ್ರಿ, ಆತ್ಮಕ್ಕೆ ಮೂಲ ಆಧಾರ

ತಮಿಳುನಾಡಿನ ಕೊಯಮತ್ತೂರಿನ ಈಶಾ ಫೌಂಡೇಷನ್ ಆದಿ ಯೋಗಿ ಪ್ರತಿಮೆಯ ಬಳಿ ಹಮ್ಮಿಕೊಂಡಿದ್ದ ಶಿವರಾತ್ರಿ…

13 hours ago

ಶಿವರಾತ್ರಿ | ನೇಪಾಳದ ಪಶುಪತಿನಾಥನಿಗೆ ವಿಶೇಷ ಪೂಜೆ- ಲಕ್ಷಾಂತರ ಭಕ್ತಾದಿಗಳಿಂದ ದರ್ಶನ

ಮಹಾಶಿವರಾತ್ರಿಯ ಹಿನ್ನಲೆಯಲ್ಲಿ ನೇಪಾಳದ ಕಠ್ಮಂಡುವಿನಲ್ಲಿರುವ ಪಶುಪತಿನಾಥ ಮಂದಿರಕ್ಕೆ ಲಕ್ಷಾಂತರ ಭಕ್ತಾದಿಗಳು ಭೇಟಿ ನೀಡಿ…

13 hours ago

ಮಹಾಕುಂಭದಿಂದ ನಿರ್ಗಮಿಸಲು ವಿಶೇಷ ರೈಲು ಸಂಚಾರ | ಪ್ರಯಾಗ್‌ರಾಜ್‌ನಿಂದ 350 ಕ್ಕೂ ಹೆಚ್ಚು ರೈಲು ಓಡಾಟ

ರೈಲ್ವೆ ಇಲಾಖೆ ಪ್ರಯಾಗ್‌ರಾಜ್‌ನಿಂದ 350 ಕ್ಕೂ ಹೆಚ್ಚು ರೈಲುಗಳನ್ನು ಓಡಿಸಲು ನಿರ್ಧರಿಸಿದೆ.

13 hours ago

ಈ ವರ್ಷ ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಡಿಕೆ ಆಮದು..?

ಮ್ಯಾನ್ಮಾರ್‌ ಅಡಿಕೆ ಮಾರುಕಟ್ಟೆ ವಲಯದಲ್ಲಿ ಈ ಬಾರಿ ಭಾರತವು ಅಡಿಕೆ ಖರೀದಿಯನ್ನು ಪುನರಾರಂಭ…

14 hours ago