Advertisement
ಜಿಲ್ಲೆ

ಪಿಲಿಕುಳದಲ್ಲಿ ಇರುವೆ ಕಾಟದಿಂದ ಒದ್ದಾಡಿದ ಹಾವು ವಿಡಿಯೋ ವೈರಲ್ | ಪಿಲಿಕುಳ ಜೈವಿಕ ಉದ್ಯಾನದ ಹಾವು ಸುರಕ್ಷಿತ | ಅಧಿಕಾರಿಗಳಿಂದ ಸ್ಪಷ್ಟನೆ |

Share

ಮಂಗಳೂರು ಪಿಲಿಕುಳ ಜೈವಿಕ ಉದ್ಯಾನದೊಳಗಿರುವ ಹಾವಿನ ಗೂಡೊಂದರಲ್ಲಿ ಇರುವೆಗಳ ಗುಂಪು ಹಾವನ್ನು ಕಚ್ಚುತ್ತಿರುವ ವೀಡಿಯೋ ಕೆಲವು ಸಾಮಾಜಿಕ ಜಾಲತಾಣಗಳಲ್ಲಿ ಎರಡು ದಿನಗಳಿಂದ ಹರಿದಾಡಿತು. ಈ ಬಗ್ಗೆ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದು, ಸದ್ಯ ಹಾವು ಸುರಕ್ಷಿತವಾಗಿದೆ ಎಂದು ಹೇಳಿದ್ದಾರೆ.

ವಿಡಿಯೋ ವೈರಲ್‌ ಅಗಿರುವ ವಿಷಯ ತಿಳಿದ ಕೂಡಲೇ ಪ್ರಾಧಿಕಾರದ ಆಯುಕ್ತರು ಸಂಬಂಧಪಟ್ಟ ಹಿರಿಯ ವೈಜ್ಞಾನಿಕ ಅಧಿಕಾರಿ, ಪಶುಪಾಲನಾ ವೈದ್ಯಾಧಿಕಾರಿ ಮತ್ತು ಬಯಾಲಾಜಿಸ್ಟ್ ಜೊತೆಗೂಡಿ ಸ್ಥಳಪರಿಶೀಲನೆ ನಡೆಸಿರುತ್ತಾರೆ. ಪರಿಶೀಲನೆ ವೇಳೆ ಇರುವೆಗಳ ಬಾದೆಗೆ ಒಳಗಾದ ಉರಗದ ಆರೋಗ್ಯವು ಸ್ಥಿರವಾಗಿದೆ ಎಂಬುದಾಗಿ ಪಶುಪಾಲನಾ ವೈದ್ಯಾಧಿಕಾರಿಯವರು ದೃಢೀಕರಿಸಿರುತ್ತಾರೆ. ಪ್ರಾಧಿಕಾರ ಆಯುಕ್ತರ ನಿರ್ದೇಶನದಂತೆ ಜೈವಿಕ ಉದ್ಯಾನವನದ ನಿರ್ದೇಶಕರು ಈ ಲೋಪಕ್ಕೆ ಕಾರಣರಾದವರ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಸಲುವಾಗಿ ಉರಗ ಪಾಲಕರಿಗೆ ನೋಟೀಸು ನೀಡಿ ವಿವರಣೆ ನೀಡಲು ತಿಳಿಸಿರುತ್ತಾರೆ.

ಇಂತಹ ಘಟನೆಯು ಪುನಃ ಮರುಕಳಿಸದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಸಲುವಾಗಿ ಕೂಡಲೇ ಪ್ರಾಧಿಕಾರದ ಆಯುಕ್ತರ ನೇತೃತ್ವದಲ್ಲಿ ಜೈವಿಕ ಉದ್ಯಾನವನದ ನಿರ್ದೇಶಕರು, ಹಿರಿಯ ವೈಜ್ಞಾನಿಕ ಅಧಿಕಾರಿ ಮತ್ತು ಪಶುಪಾಲನಾ ವೈದ್ಯಾಧಿಕಾರಿಯವರನ್ನು ಒಳಗೊಂಡು ವಿಶೇಷ ಸಭೆಯನ್ನು ನಡೆಸಲಾಗಿದೆ, ಅಂತೆಯೇ ಈ ಸಭೆಯಲ್ಲಿ ಇರುವೆಗಳ ಬಾಧೆಗೊಳಗಾದ ಆ ಉರಗದ ಆರೋಗ್ಯವನ್ನು ಪ್ರತೀ 2 ಗಂಟೆಗಳಿಗೊಮ್ಮೆ ಪರಿಶೀಲನೆ ನಡೆಸಿ ವರದಿಯನ್ನು ಆಯುಕ್ತರಿಗೆ ನೀಡಲು ತಿಳಿಸಲಾಗಿದೆ.

ಅಲ್ಲದೇ ಜೈವಿಕ ಉದ್ಯಾನದಲ್ಲಿ ಬೇರೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ದಿನದ ಎಲ್ಲಾ ಅವಧಿಯಲ್ಲಿ ಉರಗ ವಿಭಾಗಕ್ಕೆ ಹೆಚ್ಚುವರಿ ಸಿಸಿ ಕ್ಯಾಮರಾವನ್ನು ಅಳವಡಿಸಿ 24*7 ಕಣ್ಗಾವಲು ಮಾಡಲು ಕ್ರಮಕೈಗೊಳ್ಳಲಾಗುವುದು. ಉರಗಗಳ ಆವರಣದ ಒಳಗೆ ಯಾವುದೇ ತಿಂಡಿ ತಿನಸುಗಳನ್ನು ಕೊಂಡೋಗದಂತೆ ನೋಡಿಕೊಂಡು ನಿಗಾವಹಿಸಲು ಭದ್ರತಾ ಸಿಬ್ಬಂದಿಗಳಿಗೆ ಸೂಚಿಸಲಾಗಿದೆ. ಉರಗ ಆವರಣದ ಹೊರಭಾಗದ ಸ್ವಚ್ಛತೆಯನ್ನು ಆಗಾಗ ಮಾಡಲು ಹಾಗೂ ಇದರ ಮೇಲುಸ್ತುವಾರಿಯನ್ನು ಭದ್ರತಾಧಿಕಾರಿಯವರು ನೋಡಿಕೊಂಡು ವರದಿ ನೀಡಲು ಸೂಚಿಸಲಾಗಿದೆ.

ಇದಲ್ಲದೆ ಜೈವಿಕ ಉದ್ಯಾನದಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಂಡು ಬರುವಲ್ಲಿ ತಿಂಡಿ ತಿನಿಸುಗಳ ಪ್ಯಾಕೇಟುಗಳು ಪ್ಲಾಸ್ಟಿಕ್ ಬಾಟಲಿ ಇನ್ನಿತರ ಸಾಮಾಗ್ರಿಗಳನ್ನು ಎಲ್ಲೆಂದರಲ್ಲಿ ಎಸೆಯದಂತೆ ಹಾಗೂ ಪ್ರಾಣಿಗಳ ಆವರಣಗಳಿಗೆ ಹಾನಿ ಉಂಟು ಮಾಡದಂತೆ, ಸಂದರ್ಶಕರಿಗೆ ಅರಿವು ಮೂಡಿಸಲು ಹೆಚ್ಚುವರಿ ಸೂಚನಾ ಫಲಕಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮೂರು ವರ್ಷಗಳಲ್ಲಿ 27% ಏರಿದ ಅಡಿಕೆ ಉತ್ಪಾದನಾ ವೆಚ್ಚ – ರೈತರಿಗೆ ಲಾಭ ಸಿಗಬೇಕಾದರೆ ಕನಿಷ್ಠ ಬೆಲೆ ಎಷ್ಟು ಇರಬೇಕು?

2023ರಿಂದ 2026ರವರೆಗೆ ಅಡಿಕೆ ಉತ್ಪಾದನಾ ವೆಚ್ಚ ಸುಮಾರು 27% ಏರಿಕೆಯಾಗಿದೆ. ಈ ಲೆಕ್ಕಾಚಾರದ…

7 hours ago

ಎಲ್ ನೀನೋ, ಲಾ ನೀನಾ ಮತ್ತು ಮಳೆ ಅನಿಶ್ಚಿತತೆ – ಮುಂದಿನ ಪೀಳಿಗೆಗಾಗಿ ಮಳೆನೀರು ಉಳಿಸುವುದು ಈಗಲೇ ಅನಿವಾರ್ಯ..!

ಎಲ್ ನೀನೋ ಮತ್ತು ಲಾ ನೀನಾ ಪ್ರಭಾವದಿಂದ ಮಳೆಯ ಮಾದರಿಯಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ.…

8 hours ago

ರಸ್ತೆ ಬದಿ ತ್ಯಾಜ್ಯ ಎಸೆದರೆ ಎಚ್ಚರ – ದಂಡ ಖಚಿತ | ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದವರಿಗೆ ₹5,000 ದಂಡ

ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದ ಸುಳ್ಯ ನಿವಾಸಿಗೆ ₹5,000…

9 hours ago

ಕೇಂದ್ರ ಕೃಷಿ ಸಚಿವರನ್ನು ಭೇಟಿಯಾದ ಕ್ಯಾಂಪ್ಕೋ ನಿಯೋಗ – ಅಡಿಕೆ ಹಾನಿಕಾರಕ ಕುರಿತ ಸಂಶೋಧನೆ, ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಚರ್ಚೆ

ಅಡಿಕೆಯ ಆರೋಗ್ಯ ಸುರಕ್ಷತೆ ಮತ್ತು ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಕ್ಯಾಂಪ್ಕೋ ನಿಯೋಗವು…

15 hours ago

ಹವಾಮಾನ ವರದಿ | 10-06-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ – ಮುಂದಿನ 10 ದಿನ ಭಾರೀ ಮಳೆ ಸಾಧ್ಯತೆ ಕಡಿಮೆ, ಅಲ್ಲಲ್ಲಿ ಮಾತ್ರ ಮಳೆ

ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿದ್ದು ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಸಾಧ್ಯತೆ ಕಡಿಮೆ…

15 hours ago

ರಬ್ಬರ್ ಬೆಲೆ ಇತಿಹಾಸದಲ್ಲೇ ದಾಖಲೆ- ಕೆ.ಜಿಗೆ ₹263 ತಲುಪಿದ ರಬ್ಬರ್ ಧಾರಣೆ..!

ನೈಸರ್ಗಿಕ ರಬ್ಬರ್ ಬೆಲೆ ಪ್ರತಿ ಕೆ.ಜಿಗೆ ₹263 ತಲುಪಿ ಹೊಸ ದಾಖಲೆ ನಿರ್ಮಿಸಿದೆ.…

18 hours ago