Advertisement
ಜಿಲ್ಲೆ

ಪಿಲಿಕುಳದಲ್ಲಿ ಇರುವೆ ಕಾಟದಿಂದ ಒದ್ದಾಡಿದ ಹಾವು ವಿಡಿಯೋ ವೈರಲ್ | ಪಿಲಿಕುಳ ಜೈವಿಕ ಉದ್ಯಾನದ ಹಾವು ಸುರಕ್ಷಿತ | ಅಧಿಕಾರಿಗಳಿಂದ ಸ್ಪಷ್ಟನೆ |

Share

ಮಂಗಳೂರು ಪಿಲಿಕುಳ ಜೈವಿಕ ಉದ್ಯಾನದೊಳಗಿರುವ ಹಾವಿನ ಗೂಡೊಂದರಲ್ಲಿ ಇರುವೆಗಳ ಗುಂಪು ಹಾವನ್ನು ಕಚ್ಚುತ್ತಿರುವ ವೀಡಿಯೋ ಕೆಲವು ಸಾಮಾಜಿಕ ಜಾಲತಾಣಗಳಲ್ಲಿ ಎರಡು ದಿನಗಳಿಂದ ಹರಿದಾಡಿತು. ಈ ಬಗ್ಗೆ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದು, ಸದ್ಯ ಹಾವು ಸುರಕ್ಷಿತವಾಗಿದೆ ಎಂದು ಹೇಳಿದ್ದಾರೆ.

Advertisement
Advertisement

ವಿಡಿಯೋ ವೈರಲ್‌ ಅಗಿರುವ ವಿಷಯ ತಿಳಿದ ಕೂಡಲೇ ಪ್ರಾಧಿಕಾರದ ಆಯುಕ್ತರು ಸಂಬಂಧಪಟ್ಟ ಹಿರಿಯ ವೈಜ್ಞಾನಿಕ ಅಧಿಕಾರಿ, ಪಶುಪಾಲನಾ ವೈದ್ಯಾಧಿಕಾರಿ ಮತ್ತು ಬಯಾಲಾಜಿಸ್ಟ್ ಜೊತೆಗೂಡಿ ಸ್ಥಳಪರಿಶೀಲನೆ ನಡೆಸಿರುತ್ತಾರೆ. ಪರಿಶೀಲನೆ ವೇಳೆ ಇರುವೆಗಳ ಬಾದೆಗೆ ಒಳಗಾದ ಉರಗದ ಆರೋಗ್ಯವು ಸ್ಥಿರವಾಗಿದೆ ಎಂಬುದಾಗಿ ಪಶುಪಾಲನಾ ವೈದ್ಯಾಧಿಕಾರಿಯವರು ದೃಢೀಕರಿಸಿರುತ್ತಾರೆ. ಪ್ರಾಧಿಕಾರ ಆಯುಕ್ತರ ನಿರ್ದೇಶನದಂತೆ ಜೈವಿಕ ಉದ್ಯಾನವನದ ನಿರ್ದೇಶಕರು ಈ ಲೋಪಕ್ಕೆ ಕಾರಣರಾದವರ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಸಲುವಾಗಿ ಉರಗ ಪಾಲಕರಿಗೆ ನೋಟೀಸು ನೀಡಿ ವಿವರಣೆ ನೀಡಲು ತಿಳಿಸಿರುತ್ತಾರೆ.

Advertisement

ಇಂತಹ ಘಟನೆಯು ಪುನಃ ಮರುಕಳಿಸದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಸಲುವಾಗಿ ಕೂಡಲೇ ಪ್ರಾಧಿಕಾರದ ಆಯುಕ್ತರ ನೇತೃತ್ವದಲ್ಲಿ ಜೈವಿಕ ಉದ್ಯಾನವನದ ನಿರ್ದೇಶಕರು, ಹಿರಿಯ ವೈಜ್ಞಾನಿಕ ಅಧಿಕಾರಿ ಮತ್ತು ಪಶುಪಾಲನಾ ವೈದ್ಯಾಧಿಕಾರಿಯವರನ್ನು ಒಳಗೊಂಡು ವಿಶೇಷ ಸಭೆಯನ್ನು ನಡೆಸಲಾಗಿದೆ, ಅಂತೆಯೇ ಈ ಸಭೆಯಲ್ಲಿ ಇರುವೆಗಳ ಬಾಧೆಗೊಳಗಾದ ಆ ಉರಗದ ಆರೋಗ್ಯವನ್ನು ಪ್ರತೀ 2 ಗಂಟೆಗಳಿಗೊಮ್ಮೆ ಪರಿಶೀಲನೆ ನಡೆಸಿ ವರದಿಯನ್ನು ಆಯುಕ್ತರಿಗೆ ನೀಡಲು ತಿಳಿಸಲಾಗಿದೆ.

ಅಲ್ಲದೇ ಜೈವಿಕ ಉದ್ಯಾನದಲ್ಲಿ ಬೇರೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ದಿನದ ಎಲ್ಲಾ ಅವಧಿಯಲ್ಲಿ ಉರಗ ವಿಭಾಗಕ್ಕೆ ಹೆಚ್ಚುವರಿ ಸಿಸಿ ಕ್ಯಾಮರಾವನ್ನು ಅಳವಡಿಸಿ 24*7 ಕಣ್ಗಾವಲು ಮಾಡಲು ಕ್ರಮಕೈಗೊಳ್ಳಲಾಗುವುದು. ಉರಗಗಳ ಆವರಣದ ಒಳಗೆ ಯಾವುದೇ ತಿಂಡಿ ತಿನಸುಗಳನ್ನು ಕೊಂಡೋಗದಂತೆ ನೋಡಿಕೊಂಡು ನಿಗಾವಹಿಸಲು ಭದ್ರತಾ ಸಿಬ್ಬಂದಿಗಳಿಗೆ ಸೂಚಿಸಲಾಗಿದೆ. ಉರಗ ಆವರಣದ ಹೊರಭಾಗದ ಸ್ವಚ್ಛತೆಯನ್ನು ಆಗಾಗ ಮಾಡಲು ಹಾಗೂ ಇದರ ಮೇಲುಸ್ತುವಾರಿಯನ್ನು ಭದ್ರತಾಧಿಕಾರಿಯವರು ನೋಡಿಕೊಂಡು ವರದಿ ನೀಡಲು ಸೂಚಿಸಲಾಗಿದೆ.

Advertisement

ಇದಲ್ಲದೆ ಜೈವಿಕ ಉದ್ಯಾನದಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಂಡು ಬರುವಲ್ಲಿ ತಿಂಡಿ ತಿನಿಸುಗಳ ಪ್ಯಾಕೇಟುಗಳು ಪ್ಲಾಸ್ಟಿಕ್ ಬಾಟಲಿ ಇನ್ನಿತರ ಸಾಮಾಗ್ರಿಗಳನ್ನು ಎಲ್ಲೆಂದರಲ್ಲಿ ಎಸೆಯದಂತೆ ಹಾಗೂ ಪ್ರಾಣಿಗಳ ಆವರಣಗಳಿಗೆ ಹಾನಿ ಉಂಟು ಮಾಡದಂತೆ, ಸಂದರ್ಶಕರಿಗೆ ಅರಿವು ಮೂಡಿಸಲು ಹೆಚ್ಚುವರಿ ಸೂಚನಾ ಫಲಕಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮಳೆ ಇಲ್ಲ, ನೀರಿಲ್ಲ, ಬರಗಾಲ ಎಂದು ಬೊಬ್ಬೆ ಹೊಡೆಯದಿರಿ : ಮಳೆ ನೀರನ್ನು ಹಿಡಿದಿಡುವ ಕಾರ್ಯ ಅಗತ್ಯ :

ಬರಗಾಲ(Drought) ಬಂದಾಗ ಬಾಯಿ ಬಡಿಕೊಳ್ಳುವವರೇ ಹೆಚ್ಚು. ನೀರಿಲ್ಲ, ಸೆಕೆ, ಮಳೆ ಇಲ್ಲ, ಬೆಳೆಗಳಿಗೆ…

44 mins ago

ಮಾನವರಾದ ನಮಗೆ ಪರಿಸರ ಎಷ್ಟು ಮುಖ್ಯ..? ಪರಿಸರಿದಿಂದ ನಮಗಾಗುವ ಪ್ರಯೋಜನವೇನು..?

ಪರಿಸರ(Environment) ಸ್ವಾಸ್ಥ್ಯದಿಂದರೇ ಮಾತ್ರ ಅದರ ಭಾಗವಾದ ಮಾನವರಾದ(Human) ನಾವು ಸ್ವಾಸ್ಥ್ಯದಿಂದಿರಬಹುದು. ನಮ್ಮ ಆರೋಗ್ಯಕ್ಕೆ(Health)…

1 hour ago

ಸಮುದ್ರದ ಉಪ್ಪು, ಅಯೋಡಿಕರಿಸಿದ ಟೇಬಲ್ ಉಪ್ಪು, ಸೈಂಧವ ಉಪ್ಪು, ಕಪ್ಪು ಉಪ್ಪು : ಯಾವ ಉಪ್ಪು ಆರೋಗ್ಯಕ್ಕೆ ಒಳ್ಳೆಯದು?

ಭಾರತೀಯ(Indian) ಆಹಾರ ಪದ್ಧತಿಯಲ್ಲಿ(Food Style).... ಸಮುದ್ರದ ಉಪ್ಪು(Sea salt), ಅಯೋಡಿಕರಿಸಿದ ಟೇಬಲ್ ಉಪ್ಪು(Iodized…

2 hours ago

ಕೆಲ ಜಿಲ್ಲೆಯ ರೈತರಿಗೆ ಬರ ಪರಿಹಾರ ಹಣ ಬಿಡುಗಡೆ : ಬಳ್ಳಾರಿಯ 36,944 ರೈತರ ಖಾತೆಗೆ 41.40 ಕೋಟಿ ರೂ. ಜಮೆ

ಪ್ರಕೃತಿ ವಿಕೋಪಕ್ಕೆ(Natural disaster) ರೈತ(Farmer) ಬೆಳೆದ ಬೆಳೆಗಳು(Crop) ನಾಶವಾಗುವುದು ಸಾಮಾನ್ಯ. ಮಳೆ(Rain) ಜಾಸ್ತಿಯಾಗಿ…

2 hours ago

ವರುಣ ಕೃಪೆ ತೋರದಿದ್ರೆ ಭಾರಿ ಸಂಕಷ್ಟ : ಡೆಡ್ ಸ್ಟೋರೇಜ್ ತಲುಪಿದ ತುಂಗಭದ್ರಾ ಜಲಾಶಯ!

ಬರಗಾಲದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ಕೆಲವೆಡೆ ವರುಣರಾಯ(Rain) ಕೃಪೆ ತೋರಿ ತಕ್ಕಮಟ್ಟಿಗೆ ತಂಪೆರೆದಿದ್ದಾನೆ.…

4 hours ago

Karnataka Weather | 19-05-2024 | ಇಂದೂ ಮಳೆ ಇದೆ ಅಲ್ಲಲ್ಲಿ | ಮೇ.22 ನಂತರ ಚಂಡಮಾರುತ ಸಾಧ್ಯತೆ |

ಮೇ 22ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ…

6 hours ago