Advertisement
ಜಿಲ್ಲೆ

ಪಿಲಿಕುಳದಲ್ಲಿ ಇರುವೆ ಕಾಟದಿಂದ ಒದ್ದಾಡಿದ ಹಾವು ವಿಡಿಯೋ ವೈರಲ್ | ಪಿಲಿಕುಳ ಜೈವಿಕ ಉದ್ಯಾನದ ಹಾವು ಸುರಕ್ಷಿತ | ಅಧಿಕಾರಿಗಳಿಂದ ಸ್ಪಷ್ಟನೆ |

Share

ಮಂಗಳೂರು ಪಿಲಿಕುಳ ಜೈವಿಕ ಉದ್ಯಾನದೊಳಗಿರುವ ಹಾವಿನ ಗೂಡೊಂದರಲ್ಲಿ ಇರುವೆಗಳ ಗುಂಪು ಹಾವನ್ನು ಕಚ್ಚುತ್ತಿರುವ ವೀಡಿಯೋ ಕೆಲವು ಸಾಮಾಜಿಕ ಜಾಲತಾಣಗಳಲ್ಲಿ ಎರಡು ದಿನಗಳಿಂದ ಹರಿದಾಡಿತು. ಈ ಬಗ್ಗೆ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದು, ಸದ್ಯ ಹಾವು ಸುರಕ್ಷಿತವಾಗಿದೆ ಎಂದು ಹೇಳಿದ್ದಾರೆ.

ವಿಡಿಯೋ ವೈರಲ್‌ ಅಗಿರುವ ವಿಷಯ ತಿಳಿದ ಕೂಡಲೇ ಪ್ರಾಧಿಕಾರದ ಆಯುಕ್ತರು ಸಂಬಂಧಪಟ್ಟ ಹಿರಿಯ ವೈಜ್ಞಾನಿಕ ಅಧಿಕಾರಿ, ಪಶುಪಾಲನಾ ವೈದ್ಯಾಧಿಕಾರಿ ಮತ್ತು ಬಯಾಲಾಜಿಸ್ಟ್ ಜೊತೆಗೂಡಿ ಸ್ಥಳಪರಿಶೀಲನೆ ನಡೆಸಿರುತ್ತಾರೆ. ಪರಿಶೀಲನೆ ವೇಳೆ ಇರುವೆಗಳ ಬಾದೆಗೆ ಒಳಗಾದ ಉರಗದ ಆರೋಗ್ಯವು ಸ್ಥಿರವಾಗಿದೆ ಎಂಬುದಾಗಿ ಪಶುಪಾಲನಾ ವೈದ್ಯಾಧಿಕಾರಿಯವರು ದೃಢೀಕರಿಸಿರುತ್ತಾರೆ. ಪ್ರಾಧಿಕಾರ ಆಯುಕ್ತರ ನಿರ್ದೇಶನದಂತೆ ಜೈವಿಕ ಉದ್ಯಾನವನದ ನಿರ್ದೇಶಕರು ಈ ಲೋಪಕ್ಕೆ ಕಾರಣರಾದವರ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಸಲುವಾಗಿ ಉರಗ ಪಾಲಕರಿಗೆ ನೋಟೀಸು ನೀಡಿ ವಿವರಣೆ ನೀಡಲು ತಿಳಿಸಿರುತ್ತಾರೆ.

ಇಂತಹ ಘಟನೆಯು ಪುನಃ ಮರುಕಳಿಸದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಸಲುವಾಗಿ ಕೂಡಲೇ ಪ್ರಾಧಿಕಾರದ ಆಯುಕ್ತರ ನೇತೃತ್ವದಲ್ಲಿ ಜೈವಿಕ ಉದ್ಯಾನವನದ ನಿರ್ದೇಶಕರು, ಹಿರಿಯ ವೈಜ್ಞಾನಿಕ ಅಧಿಕಾರಿ ಮತ್ತು ಪಶುಪಾಲನಾ ವೈದ್ಯಾಧಿಕಾರಿಯವರನ್ನು ಒಳಗೊಂಡು ವಿಶೇಷ ಸಭೆಯನ್ನು ನಡೆಸಲಾಗಿದೆ, ಅಂತೆಯೇ ಈ ಸಭೆಯಲ್ಲಿ ಇರುವೆಗಳ ಬಾಧೆಗೊಳಗಾದ ಆ ಉರಗದ ಆರೋಗ್ಯವನ್ನು ಪ್ರತೀ 2 ಗಂಟೆಗಳಿಗೊಮ್ಮೆ ಪರಿಶೀಲನೆ ನಡೆಸಿ ವರದಿಯನ್ನು ಆಯುಕ್ತರಿಗೆ ನೀಡಲು ತಿಳಿಸಲಾಗಿದೆ.

ಅಲ್ಲದೇ ಜೈವಿಕ ಉದ್ಯಾನದಲ್ಲಿ ಬೇರೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ದಿನದ ಎಲ್ಲಾ ಅವಧಿಯಲ್ಲಿ ಉರಗ ವಿಭಾಗಕ್ಕೆ ಹೆಚ್ಚುವರಿ ಸಿಸಿ ಕ್ಯಾಮರಾವನ್ನು ಅಳವಡಿಸಿ 24*7 ಕಣ್ಗಾವಲು ಮಾಡಲು ಕ್ರಮಕೈಗೊಳ್ಳಲಾಗುವುದು. ಉರಗಗಳ ಆವರಣದ ಒಳಗೆ ಯಾವುದೇ ತಿಂಡಿ ತಿನಸುಗಳನ್ನು ಕೊಂಡೋಗದಂತೆ ನೋಡಿಕೊಂಡು ನಿಗಾವಹಿಸಲು ಭದ್ರತಾ ಸಿಬ್ಬಂದಿಗಳಿಗೆ ಸೂಚಿಸಲಾಗಿದೆ. ಉರಗ ಆವರಣದ ಹೊರಭಾಗದ ಸ್ವಚ್ಛತೆಯನ್ನು ಆಗಾಗ ಮಾಡಲು ಹಾಗೂ ಇದರ ಮೇಲುಸ್ತುವಾರಿಯನ್ನು ಭದ್ರತಾಧಿಕಾರಿಯವರು ನೋಡಿಕೊಂಡು ವರದಿ ನೀಡಲು ಸೂಚಿಸಲಾಗಿದೆ.

ಇದಲ್ಲದೆ ಜೈವಿಕ ಉದ್ಯಾನದಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಂಡು ಬರುವಲ್ಲಿ ತಿಂಡಿ ತಿನಿಸುಗಳ ಪ್ಯಾಕೇಟುಗಳು ಪ್ಲಾಸ್ಟಿಕ್ ಬಾಟಲಿ ಇನ್ನಿತರ ಸಾಮಾಗ್ರಿಗಳನ್ನು ಎಲ್ಲೆಂದರಲ್ಲಿ ಎಸೆಯದಂತೆ ಹಾಗೂ ಪ್ರಾಣಿಗಳ ಆವರಣಗಳಿಗೆ ಹಾನಿ ಉಂಟು ಮಾಡದಂತೆ, ಸಂದರ್ಶಕರಿಗೆ ಅರಿವು ಮೂಡಿಸಲು ಹೆಚ್ಚುವರಿ ಸೂಚನಾ ಫಲಕಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

6 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

12 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

20 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

24 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 day ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

1 day ago