ಹಸಿರು ಹಾವಿನ ಅಪರೂಪದ ಚಿತ್ರವನ್ನು ಹಿರಿಯ ಪತ್ರಕರ್ತ ಶಿವಸುಬ್ರಹ್ಮಣ್ಯ ಕಲ್ಮಡ್ಕ ಅವರು ಸೆರೆಹಿಡಿದಿದ್ದಾರೆ. ನಮ್ಮ ತೋಟಗಳಲ್ಲಿ ಸರ್ವೇಸಾಮಾನ್ಯವಾಗಿ ಕಾಣುವ ಹಸಿರುವ ಹಾವು ಎಲ್ಲರಿಗೂ ಮಾಮೂಲಿಯೇ. ಆದರೆ ಆ ಹಾವುಗಳು ತನ್ನ ವೈರಿಯನ್ನು ಹಿಮ್ಮೆಟ್ಟಿಸಲು ಭಯಪಡಿಸುತ್ತವೆ. ಅಂತಹ ಸಂದರ್ಭದ ಒಂದು ಅಪರೂಪ ಕ್ಷಣದ ಫೋಟೊವನ್ನು ಶಿವಸುಬ್ರಹ್ಮಣ್ಯ ಅವರು ಸೆರೆಹಿಡಿದ್ದಾರೆ.
ಈ ಹಾವಿನ ಚಿತ್ರ ತೆಗೆದಿರುವ ಬಗ್ಗೆ ಶಿವಸುಬ್ರಹ್ಮಣ್ಯ ಕಲ್ಮಡ್ಕ ಹೀಗೆ ಹೇಳಿದ್ದಾರೆ,
ನನ್ನ ತೋಟದಲ್ಲಿ ಅದೆಷ್ಟೋ ಬಾರಿ ಹಸಿರು ಹಾವನ್ನು ನೋಡಿದ್ದರೂ ಫೊಟೋ ತೆಗೆಯಲಾಗಲಿಲ್ಲ. ಕ್ಣಣದಲ್ಲೇ ಮಾಯವಾಗುತ್ತಿತ್ತು. ಪಶ್ಚಿಮ ಘಟ್ಟದಲ್ಲಿ ಮಿಸ್ ಆಗಿದ್ದು, ಈಗ ಚಿಕ್ಕಬಳ್ಳಾಪುರದ ಶ್ರೀನಿವಾಸಸಾಗರ ಜಲಾಶಯದ ದಂಡೆಯಲ್ಲೇ ಸಿಕ್ಕಿತು. ವಿಷಕಾರಿ ಹಾವು ಇದಲ್ಲ. ಧೈರ್ಯದಿಂದಲೇ ಹತ್ತಿರ ಹೋಗಿ ಕ್ಲಿಕ್ ಮಾಡುತ್ತಿದ್ದಂತೆ ಹಾವಿಗೆ ಸಿಟ್ಟು ಬಂದು, ರಕ್ಷಣಾತ್ಮಕವಾಗಿ , ವೈರಿಯನ್ನು ಹೆದರಿಸುವ ಭಂಗಿಯಲ್ಲಿ ಕೆಲವು ಸೆಕೆಂಡ್ ಗಳ ಕಾಲ ನಿಂತಿತು. ನೀಲಾಕಾಶದ ಹಿನ್ನೋಟದಲ್ಲಿ ಹಾವು ಯಾವುದೋ ಅನಿಮೇಷನ್ ಸಿನಿಮಾದಲ್ಲಿ ಇದ್ದಂತೆ ಕಾಣುತ್ತಿದೆ.
ಜಮ್ಮು - ಕಾಶ್ಮೀರ ಸರ್ಕಾರ ಅಮರನಾಥ ಗುಹೆ ದೇಗುಲಕ್ಕೆ ಹೋಗುವ ಎಲ್ಲಾ ಮಾರ್ಗಗಳನ್ನು…
ಅರಬ್ಬಿ ಸಮುದ್ರದ ವಾಯುಭಾರ ಕುಸಿತದಂತಹ ತಿರುವಿಕೆಯು ರಾಜಸ್ಥಾನ ತಲುಪಿದ್ದು, ಅಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ.…
2025 ರಲ್ಲಿ ಗುರು ಗ್ರಹವು ತನ್ನ ಸ್ವಂತ ರಾಶಿಯಾದ ಮೇಷದಲ್ಲಿ ಸಂಚರಿಸುತ್ತಿದ್ದಾಗ, ಶುಕ್ರ…
ಮಂಗಳೂರಿನಲ್ಲಿ ನಿರ್ಮಾಣಗೊಳ್ಳುತ್ತಿರುವ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕಚೇರಿ ಕಟ್ಟಡ…
ಕೋಲಾರ ಜಿಲ್ಲೆಯಲ್ಲಿ ಸರ್ಕಾರಿ ಜಮೀನುಗಳಲ್ಲಿ ರೈತರಿಗೆ ಮಂಜೂರಾಗಿರುವ ಜಮೀನುಗಳಿಗೆ ಪೋಡಿ ದುರಸ್ತಿ ಮಾಡಲಾಗುತ್ತಿದೆ.…
ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದೆ.…